ಕೂಡ್ಲಿಗಿ: ಇಂದಿನ ಜಗತ್ತಿಗೆ ಕೂಡ ಆಧ್ಯಾತ್ಮಿಕತೆ ಮತ್ತು ಮಾನವೀಯತೆಯ ದಾರಿ ತೋರಿಸುವಂತಹ ವಾಲ್ಮೀಕಿ ಮಹರ್ಷಿಗಳ ಜೀವನ ಸದಾ ಪ್ರೇರಣದಾಯಕ, ಅವರ ಜಯಂತಿಯದು ನಾವೆಲ್ಲರೂ ಜೀವನದ ಆದರ್ಶಗಳನ್ನು ಅಳವಡಿಸಿಕೊಳ್ಳುವ ಸಂಕಲ್ಪ ಮಾಡೋಣವೆಂದು ಕೂಡ್ಲಿಗಿ ಶಾಸಕಡಾ. ಶ್ರೀನಿವಾಸ್ ಎನ್.ಟಿ ಹೇಳಿದರು.
ತಾಲೂಕು ಕಚೇರಿಯಲ್ಲಿ ಮಂಗಳವಾರ ನಡೆದ ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಂತರ ಮಾತನಾಡಿದರು, ತಳ ಸಮುದಾಯದಲ್ಲಿ ಹುಟ್ಟಿದ ವಾಲ್ಮೀಕಿ ರಾಮಾಯಣದಂತ ಮಹಾಕಾವ್ಯವನ್ನು ರಚಿಸಿ ಮಹರ್ಷಿಗಳಾದರು, ಸಾಧನೆಗೆ ಜಾತಿ, ಕುಲ, ಧರ್ಮದ ಹಂಗಿಲ್ಲ ಶ್ರದ್ಧೆ ಮತ್ತು ಪರಿಶ್ರಮವಿದ್ದರೆ ಯಾರು ಬೇಕಾದವರು ಸಾಧನೆ ಮಾಡಬಹುದು ಎಂಬುದಕ್ಕೆ ವಾಲ್ಮೀಕಿ ಅವರೆ ನಮಗೆಲ್ಲರಿಗೂ ಆದರ್ಶನ ಎಂದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ವಿ ಕೆ ನೇತ್ರಾವತಿ, ಪಟ್ಟಣ ಪಂಚಾಯತ್ ಅಧ್ಯಕ್ಷ ಕಾವಲಿ ಶಿವಪ್ಪ ನಾಯಕ, ವಾಲ್ಮೀಕಿ ಸಣಘದ ಅಧ್ಯಕ್ಷ ಸುರೇಶ್, ಕಂಪ್ಯೂಟರ್ ರಾಘು ಮತ್ತು ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು.
Trending
- ಆನ್ಲೈನ್ ಔಷಧ ಮಾರಾಟ ನಿಯಂತ್ರಿಸಿ
- ರಂಗನಾಥಹಳ್ಳಿಗೆ 5 ಕೋಟಿ ವೆಚ್ಚದಲ್ಲಿ ಸುಸಜ್ಜಿತ ರಸ್ತೆ ನಿರ್ಮಾಣ -ಶಾಸಕ ಡಾ. ಶ್ರೀನಿವಾಸ್ ಎನ್. ಟಿ.
- ಮೆ.18 ರಿಂದ ಹುಲಿಕೆರೆಯಲ್ಲಿ ಯೋಗ ಶಿಬಿರ
- ಬಿರುಗಾಳಿಗೆ ಹಾರಿಹೋದ ಶಾಲೆಯ ಶೀಟ್
- ಇಬ್ಬರು ವಂಚಕರ ಬಂಧನ; ₹29.50 ಲಕ್ಷ ವಶ
- ಸಿಡಿಲು ಬಡಿದು ಹೊತ್ತಿ ಉರಿದ ವಿಂಡ್ ಫ್ಯಾನ್
- ಗರ್ಭಿಣಿ ಸ್ತ್ರೀಯರಿಗೆ ಸೀಮಂತ ಮತ್ತು ಮಹಿಳಾ ಸಾಧಕರಿಗೆ ಸನ್ಮಾನ
- ಕೇಂದ್ರದ ವಿರುದ್ಧ ಶಾಸಕ ಶ್ರೀನಿವಾಸ್ ಪ್ರತಿಭಟನೆ

