ಕೂಡ್ಲಿಗಿ: ಕ್ಷೇತ್ರದ ಗಡಿಭಾಗದ ಹಳ್ಳಿಗರ ಆರೋಗ್ಯ ಸುಧಾರಣೆಗೆ ಅಧ್ಯತೆ ನೀಡುವ ಉದ್ದೇಶದಿಂದ ಮೂಲಕಟ್ಟಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಉನ್ನತೀಕರಣ ಮತ್ತು ಅಗತ್ಯ ಸೌಲಭ್ಯ ಕಲ್ಲಿಸಲಾಗುವುದು ಎಂದು ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ತಿಳಿಸಿದರು.
ತಾಲೂಕಿನ ಆಲೂರು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು 2ಕೋಟಿ ವೆಚ್ಚದ ಉನ್ನತೀಕರಣ ಕಾಮಗಾರಿಗೆ ಶನಿವಾರ ಚಾಲನೆ ಮಾತನಾಡಿದರು.
ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಮತ್ತು ರಾಷ್ಟ್ರೀಯ ಹೆದ್ದಾರಿ 5೦ಕ್ಕೆ ಹೊಂದಿಕೊಂಡಿರುವ ಆಲೂರು ಆಸ್ಪತ್ರೆಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕಿರುವುದು ಅನಿವಾರ್ಯತೆ ಇತ್ತು. ಈಗಾಗಿ ಜಿಲ್ಲಾ ಖನಿಜ ನಿಧಿ 2ಕೋಟಿ ವೆಚ್ಚದಲ್ಲಿ ಕಾಮಗಾರಿ ಮಾಡಲಾಗುವುದು. ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಪ್ರಕರಣ ಗಣನೀಯವಾಗಿ ಜರುಗುವುದರಿಂದ ಅಗತ್ಯ ಚಿಕಿತ್ಸೆ ಸೌಲಭ್ಯ ಕಲ್ಪಿಸಬೇಕಿದೆ. ಮುಂಬರುವ ದಿನಗಳಲ್ಲಿ ಏಕ್ಸರೇಯಂತಹ ಸೌಲಭ್ಯಕ್ಜೆ ಅಧತ್ಯೆ ನೀಡಲಾಗುವುದು ಎಂದರು. ಈಗಾಲೆ ವೈದ್ಯ ಮತ್ತು ಸಿಬ್ಬಂದಿ ವಸತಿ ನಿಲಯಗಳ ಕಟ್ಟಲು ಕ್ರಮಕೈಗೊಳಲಾಗಿದೆ ಎಂದರು.
ಈ ಸಂದರ್ಭದಲ್ಲಿ ಕಾನಾಮಡುಗು ಶರಣಬಸವೇಶ್ವರ ದಾಸೋಹಮಠದ ದಾ.ಮ.ಐಮುಡಿ ಶರಣಾರ್ಯರು, ಗ್ರಾಪಂ ಅಧ್ಯಕ್ಷೆ ಉಮಾದೇವಿ, ಉಪಾಧ್ಯಕ್ಷೆ ಚೌಡಮ್ಮ, ಮಾಜಿ ಜಿಪಂ ಸದಸ್ಯ ಕೆ.ಎಂ.ಶಶಿಧರ್, ತಾಪಂ ಮಾಜಿ ಅಧ್ಯಕ್ಷೆ ನಾಗರತ್ನಮ್ಮ ನಿಂಗಪ್ಪ, ತಾಪಂ ಮಾಜಿ ಸದಸ್ಯ ತಿಪ್ಪೇಸ್ವಾಮಿ, ಮೆಡಿಕಲ್ ಮಂಜುನಾಥ, ಜಿಲ್ಲಾ ವೈದ್ಯಾಧಿಕಾರಿ ಡಾ.ಶಂಕರನಾಯ್ಕ, ಡಿಎಚ್ಒ ಡಾ.ಪ್ರದೀಪ್, ಜಿಪಂ ಎಇಇ ಮಲ್ಲಿಕಾರ್ಜುನ, ಮಲ್ಲಿಕಾರ್ಜುನ ಮಲಿಯಪ್ಪ, ಪೆನ್ನಪ್ಪ ಸೇರಿದಂತೆ ಗ್ರಾಪಂ ಸದಸ್ಯರು ಇದ್ದರು.
Trending
- ಶ್ರೀ ಮಾರಮ್ಮ ದೇವಿ ಜಾತ್ರೆ ಸಂಪನ್ನ
- ಬದುಕುವ ರೀತಿ ಆದರ್ಶಪ್ರಾಯವಾಗಬೇಕು: ಕಣ್ವಕುಪ್ಪೆ ಶ್ರೀ
- ವಿದ್ಯಾರ್ಥಿಗಳಿಗೆ ಕಾನೂನು ಪಾಠ ಮಾಡಿದ ಪಿಎಸ್ಐ
- ಸ್ವಸ್ಥ ಮಣ್ಣಿನಿಂದಲೇ ಸ್ವಸ್ಥ ಆರೋಗ್ಯ : ಬಂಡ್ರಿ ದುರುಗಪ್ಪ
- ಶ್ರೀಶೈಲ ಪಾದಯಾತ್ರೆ ಹೊರಟ ಭಕ್ತರು
- ಕೂಡ್ಲಿಗಿ ತಹಶೀಲ್ದಾರ್ ಹೆಸರಿನಲ್ಲಿ ನಕಲಿ ಖಾತೆ; ಪ್ರತಿಕ್ರಿಯಿಸದಂತೆ ಮನವಿ
- ಸಂಜೆ 7 ರಿಂದ 9 ರವಗೆ ಟಿವಿ ಫೋನ್ ಬಂದ್; ಎಸ್ ಎಸ್ ಎಲ್ ಸಿ ಫಲಿತಾಂಶ ಸುಧಾರಣೆಗೆ ಮಹತ್ವದ ಹೆಜ್ಜೆ
- ಮಾರಮ್ಮ ದೇವಿ ರಥದ ಗಾಲಿ ಹೊರ ಹಾಕುವ ಕಾರ್ಯಕ್ಕೆ ಚಾಲನೆ

