ಕೂಡ್ಲಿಗಿ; ಅನಿಯಂತ್ರಿತ ಆನ್ಲೈನ್ ಔಷಧ ಮಾರಾಟದಿಂದ ಸಾರ್ವಜನಿಕರ ಆರೋಗ್ಯಕ್ಕೆ ಕುತ್ತು ಬಂದಿದೆ. ಶೆಡ್ಯೂಲ್ ಡ್ರಗ್ಸ್ ದುರುಪಯೋಗ ತಡೆದು ಚಿಲ್ಲರೆ ಔಷಧ ಅಂಗಡಿಗಳನ್ನು ಉಳಿಸುವಂತೆ ಆಗ್ರಹಿಸಿ ಕಾನ ಹೊಸಹಳ್ಳಿ ಔಷಧ ವ್ಯಾಪಾರಿಗಳ ಸಂಘದ ವತಿಯಿಂದ ಬುಧವಾರ ನಾಡಕಚೇರಿಯ ಅನಿತಾ ಪೂಜಾರಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಸಂಘದ ಮುಖಂಡ ಬಿ. ಮಂಜುನಾಥ್ ಮಾತನಾಡಿ,”ಕಾರ್ಪೊರೇಟ್ ಕಂಪನಿಗಳು ಆನ್ಲೈನ್ನಲ್ಲಿ ವೈದ್ಯರ ಚೀಟಿ ಇಲ್ಲದೆ H, H1 ಔಷಧಗಳನ್ನು ಮಾರಾಟ ಮಾಡುತ್ತಿವೆ. ನಕಲಿ ಔಷಧ, ಸ್ವಯಂ ಚಿಕಿತ್ಸೆಯಿಂದ ಜನರ ಪ್ರಾಣಕ್ಕೆ ಅಪಾಯವಾಗಿದೆ. ಸರ್ಕಾರ ಕೂಡಲೇ ಆನ್ಲೈನ್ ಔಷಧ ಮಾರಾಟಕ್ಕೆ ಕಡಿವಾಣ ಹಾಕಬೇಕು. ಹಳ್ಳಿಗಳಲ್ಲಿ 30-40 ವರ್ಷದಿಂದ ಸೇವೆ ನೀಡುತ್ತಿರುವ ನಮ್ಮಂತಹ ಚಿಲ್ಲರೆ ಅಂಗಡಿಗಳು ಬೀಗ ಹಾಕುವ ಸ್ಥಿತಿ ಬಂದಿದೆ. ಇಂದು ಸಾಂಕೇತಿಕ ಬಂದ್ ಮಾಡಿದ್ದೇವೆ. ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ರಾಜ್ಯವ್ಯಾಪಿ ಉಗ್ರ ಹೋರಾಟ ಮಾಡುತ್ತೇವೆ” ಎಂದು ಎಚ್ಚರಿಕೆ ನೀಡಿದರು. “ಆನ್ಲೈನ್ನಲ್ಲಿ ಶೇ. 20 ರಿಂದ 30 ರಷ್ಟು ರಿಯಾಯಿತಿ ನೀಡಿ ಗ್ರಾಹಕರನ್ನು ಸೆಳೆಯುತ್ತಿದ್ದಾರೆ. ಆದರೆ ಔಷಧದ ಗುಣಮಟ್ಟ, ಅವಧಿ…
Author: Team Sanchalana
ಕೂಡ್ಲಿಗಿ ; ವಿಧಾನ ಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀಯುತ ಡಾ. ಶ್ರೀನಿವಾಸ್. ಎನ್. ಟಿ. ಅವರು ದಿನಾಂಕ; 18-05-2026 ರಂದು, ರಂಗನಾಥಹಳ್ಳಿ ಗ್ರಾಮದಲ್ಲಿ ಸಿ.ಸಿ. ರಸ್ತೆ ನಿರ್ಮಾಣ ( 10 -ಲಕ್ಷಗಳು), ಹಾಗೂ ರಂಗನಾಥ ಹಳ್ಳಿ ಗ್ರಾಮದ ಮುಖ್ಯ ರಸ್ತೆಯಿಂದ ನಿಂಬಳಗೆರೆಗೆ ಹೋಗುವ ರಸ್ತೆ ಅಗಲೀಕರಣ ಮತ್ತು ಅಭಿವೃದ್ಧಿ ( 490 ಲಕ್ಷಗಳು) ಭೂಮಿಪೂಜೆಯನ್ನು ನೆರವೇರಿಸಿದರು. ಮಾನ್ಯ ಶಾಸಕರು ರಂಗನಾಥಹಳ್ಳಿ ಗ್ರಾಮದ ವಿವಿಧ ಓಣಿಗಳನ್ನು ಸುತ್ತುವ ಮೂಲಕ ಖುದ್ದಾಗಿ ಮೂಲಭೂತ ಸೌಕರ್ಯಗಳನ್ನು ಪರಿಶೀಲನೆ ಮಾಡಿ, ಈ ಸಂದರ್ಭದಲ್ಲಿ ಶಾಸಕರ ನಿಧಿಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡುವುದಾಗಿ ತಿಳಿಸಿದರು. ಸಮಸ್ಯೆಗಳಿಗೆ ನಾನು ಎದುರಿ ಓಡಿ ಹೋಗುವವನು ಅಲ್ಲ. ನಮ್ಮ ಸರ್ಕಾರದ ಸಹಕಾರದೊಂದಿಗೆ ಅಂತಹ ಸಮಸ್ಯೆಗಳಿಗೆ ಪರಿಹಾರ ಕೊಡುತ್ತೇನೆ ಎಂದರು. ಈ ಸಂದರ್ಭದಲ್ಲಿ ಶೇಟು ನಾಗರಾಜ, ಅಜ್ಜಪ್ಪ ನೀರಘಂಟಿ, ಕುಮಾರ್ ಸ್ವಾಮಿ, ಶೇಖರಪ್ಪ, ರಾಜಪ್ಪ ವಿ, ಬಸವರಾಜಪ್ಪ ವಿ, ಶ್ರೀನಿವಾಸ್. ಬಿ. ಪಿ, ವಿರೇಶ ಪತ್ರಯ್ಯ, ರೇವಣ್ಣ, ಕಲ್ಲೇಶ, ಚಿನ್ನಾಪುರ ಸಿದ್ದೇಶ, ಊರಿನ ಪ್ರಮುಖರು,…
ಕೂಡ್ಲಿಗಿ; ಮನುಷ್ಯನ ಮನಸ್ಸು ಮತ್ತು ದೇಹವನ್ನು ಒಂದೇ ದಾರದಲ್ಲಿ ಕಟ್ಟುವ ಕಲೆ ಯೋಗ. ಈ ಯೋಗದ ಮಹತ್ವವನ್ನು ಮನೆಮನೆಗೆ ತಲುಪಿಸುವ ಉದ್ದೇಶದಿಂದ ನಮ್ಮ ತಾಲೂಕಿನ ಹುಲಿಕೆರೆ ಗ್ರಾಮದ ಸಜ್ಜನ ವಠಾರದಲ್ಲಿ ಮೇ ಹದಿನೆಂಟರಿಂದ ಹತ್ತು ದಿನಗಳ ಕಾಲ “ಸಿದ್ಧಸಮಾಧಿ ಯೋಗ ಶಿಬಿರ”ವನ್ನು ಹಮ್ಮಿಕೊಳ್ಳಲಾಗಿದೆ. ಹದಿನೆಂಟನೇ ತಾರೀಕು ಸಂಜೆ ನಾಲ್ಕು ಗಂಟೆಗೆ ಶಿಬಿರದ ಪರಿಚಯ ಕಾರ್ಯಕ್ರಮ ನಡೆಯಲಿದ್ದು, ಹತ್ತೊಂಬತ್ತರಿಂದ ಪ್ರತಿದಿನ ಬೆಳಗಿನ ಜಾವ ಐದು ಗಂಟೆಗೆ ಪ್ರಾರಂಭವಾಗುತ್ತದೆ. ಎಸ್ಎಸ್ವೈ ಗುರು ರೇಣುಕಾ ಮಾತಾಜಿ ಅವರು ಯೋಗಾಸನ, ಧ್ಯಾನ, ಪ್ರಾಣಾಯಾಮ ಮತ್ತು ಯೋಗಿಕ ಆಹಾರ ಪದ್ಧತಿಯ ಬಗ್ಗೆ ಸಂಪೂರ್ಣ ತರಬೇತಿ ನೀಡಲಿದ್ದಾರೆ ಎಂದು ನಿವೃತ ಶಿಕ್ಷಕ ಮಹೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಮಹೇಶ್ ಮಾಸ್ಟರ್ pho no.9986950375 ರಮೇಶ್ಗೌಡ ಮೊ:9164344701 ಇವರುಗಳನ್ನುಸಂಪರ್ಕಿಸಬಹುದು. ಸುದ್ದಿಗಾಗಿ ಸಂಪರ್ಕಿಸಿ ಅಜಯ್ ಬಿ ಟಿ ಗುದ್ದಿ 8123302594, ದಯಾನಂದ್ ಸಜ್ಜನ್ 9886972975
ಕೂಡ್ಲಿಗಿ; ಕಾನಹೊಸಹಳ್ಳಿ ಭಾಗದಲ್ಲಿ ಮಂಗಳವಾರ ಸಂಜೆ ಬೀಸಿದ ಬಿರುಗಾಳಿಗೆ ಯಂಬಳಿ ವಡ್ಡರಹಟ್ಟಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡದ ಚಾವಣಿ ಶೀಟ್ಗಳು ಹಾರಿ ಹೋಗಿದ್ದರೆ, ಅದೇ ಗ್ರಾಮದ ರೈತ ಚನ್ನಬಸಪ್ಪ ಎಂಬುವವರಿಗೆ ಸೇರಿದ ಕೋಳಿ ಫಾರಂ ಶೆಡ್ ಸಂಪೂರ್ಣ ನೆಲಕ್ಕುರುಳಿದೆ. ಬಿರುಗಾಳಿ ಸಹಿತ ತಾಲೂಕಿನ ಅಲ್ಲಲ್ಲಿ ಮಳೆಯಾಗಿದ್ದು, ಯಂಬಳಿ ವಡ್ಡರಹಟ್ಟಿ ಗ್ರಾಮದಲ್ಲಿ ಅಪಾರ ಹಾನಿಯಾಗಿದೆ. ಸರಕಾರಿ ಶಾಲೆಯ ಆರ್ಸಿಸಿ ಕಟ್ಟಡದ ಚಾವಣಿ ಮಳೆಗೆ ಸೋರದಂತೆ ತಗಡಿನ ಶೀಟ್ಗಳ ಟ್ರಸ್ ರೂಫಿಂಗ್ ಹಾಕಲಾಗಿತ್ತು. ಬೀಸಿದ ಬಿರುಗಾಳಿಯಿಂದ ಎರಡು ಕೊಠಡಿಗಳಿಗೆ ಹಾಕಿದ್ದ ತಗಡಿನ ಶೀಟ್ಗಳೆಲ್ಲವೂ ಹಾರಿ ಬಿದ್ದಿದ್ದು, ಆ ಸಂದರ್ಭದಲ್ಲಿ ಯಾರೂ ಇರಲಿಲ್ಲವಾದ್ದರಿಂದ ಯಾವುದೇ ತೊಂದರೆಯಾಗಿಲ್ಲ. ಈಗ ಶಾಲೆಗೆ ರಜೆ ಇರುವುದರಿಂದ ಕೆಲ ವಿದ್ಯಾರ್ಥಿಗಳು, ಯುವಕರು ಶಾಲೆಯ ಬಳಿ ಆಗಾಗ ಆಟವಾಡುತ್ತಿದ್ದರು. ಆದರೆ, ಗಾಳಿಗೆ ಶೀಟ್ ಹಾರಿ ಬಿದ್ದಿರುವ ಸಂದರ್ಭದಲ್ಲಿ ಯಾರೂ ಇರಲಿಲ್ಲ ಎಂಬುದು ಸಮಾಧಾನ ತಂದಿದೆ ಎನ್ನುತ್ತಾರೆ ಯಂಬಳಿ ವಡ್ಡರಹಟ್ಟಿಯ ನಿವಾಸಿ ದಿನೇಶ್ ಅವರು. ಇನ್ನು, ರೈತ ಚನ್ನಬಸಪ್ಪ ಅವರಿಗೆ ಸೇರಿದ…
ಕೂಡ್ಲಿಗಿ; 1 ಕೆಜಿ ಬಂಗಾರದ ಆಸೆ ತೋರಿಸಿ 30 ಲಕ್ಷ ವಂಚನೆ ಮಾಡಿದ್ದ ಪ್ರಕರಣ ಭೇದಿಸಿ ಇಬ್ಬರು ಆರೋಪಿಗಳನ್ನ ಬಂಧಿಸುವಲ್ಲಿ ಕಾನಹೊಸಹಳ್ಳಿಯ ಪೊಲೀಸರು ಯಶಸ್ವಿಯಾಗಿದ್ದಾರೆ. ಲಿಂಗನಹಳ್ಳಿ ಕೊರಚರಹಟ್ಟಿಯ ಸುರೇಶ್(ರಮೇಶ್), ಸೋಮಣ್ಣ ಬಂಧಿತರು. ತಾಲೂಕಿನ ಕ್ಯಾಸನಕೆರೆ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಈ ಇಬ್ಬರು ಜನವರಿ 28 ರಂದು ಚೆನೈನಾ ಅಯ್ಯಾಪಾಕಂನ ನಿವಾಸಿ ಜಿ ಕುಮಾರಸ್ವಾಮಿ ಎಂಬುವರಿಗೆ ನಮ್ಮ ಮನೆಯ ಪಾಯ ತಗೆಯುವಾಗ 1 ಕೆಜಿ ಬಂಗಾರ ಸಿಕ್ಕಿದ್ದು ಅದನ್ನು ಮಾರುಕಟ್ಟೆ ದರಕ್ಕಿಂತ ಕಡಿಮೆ ಬೆಲೆಗೆ ಮಾರಾಟ ಮಾಡುವುದಾಗಿ ನಂಬಿಸಿದ್ದಾರೆ. ನಂತರ ಕ್ಯಾಸನಕೆರೆ ಬಳಿ ಅರಣ್ಯ ಪ್ರದೇಶಕ್ಕೆ ಕರೆಸಿಕೊಂಡು ಆತನನ್ನು ಜೋರಾಗಿ ದೂಡಿ ಆತನ ಬಳಿಯಿದ್ದ ₹30 ಲಕ್ಷ ಹಣವನ್ನು ಕಸಿದುಕೊಂಡು ಪರಾರಿಯಾಗಿದ್ದರು. ಪಿರಿಯದುದಾರರು ಭಯಗೊಂಡು ತಡವಾಗಿ ಮಾರ್ಚ್ 14ರಂದು ದೂರು ನೀಡಿದ್ದರು. ದೂರು ಆಧರಿಸಿದ ಪೊಲೀಸರು ಅವರ ಫೋನ್ ಸಂಖ್ಯೆಯ ಮೂಲಕ ಟ್ರೇಸ್ ಮಾಡಿ ಪ್ರಕರಣ ದಾಖಲಾದ ಒಂದೇ ವಾರದಲ್ಲಿ ಮಾರ್ಚ್ 21ರಂದು ಅವರನ್ನು ಬಂಧಿಸಿ ಅವರ ಬಳಿಯಿದ್ದ ₹29,50,…
ಕೂಡ್ಲಿಗಿ; ಪವನ್ ವಿದ್ಯುತ್ ಯಂತ್ರಕ್ಕೆ ಸಿಡಿಲು ಬಡಿದು ಬೆಂಕಿ ಹೊತ್ತಿ ಉರಿದಿರುವ ಘಟನೆ ತಾಲೂಕಿನ ಯಂಬಳಿ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ. ಯಂಬಳಿ ವಡರಹಟ್ಟಿಯ ನೀಲಪ್ಪರ ಶರಣಪ್ಪ ಎಂಬುವವರ ಜಮೀನಿನಲ್ಲಿ ಅಳವಡಿಸಿದ್ದ ಖಾಸಗಿ ಕಂಪನಿಯ ವಿಂಡ್ ಫ್ಯಾನ್gಗೆ ಸಿಡಿಲು ಬಡಿದು ಹೊತ್ತಿ ಉರಿದಿದ್ದು, ದಟ್ಟ ಹೊಗೆ ಆವರಿಸಿಕೊಂಡಿದೇ. ಸಮೀಪಕ್ಕೆ ಸ್ಥಳೀಯರನ್ನು ಬಿಡದಂತೆ ಕಂಪನಿಯವರು ತಡೆದಿದ್ದಾರೆ. ತಾಲೂಕಿನಾದ್ಯಂತ ಸಿಡಿಲು ಗುಡುಗು ಸಹಿತ ಸಾಧಾರಣ ಮಳೆಯಾಗಿದೆ, ಅಕಾಲಿಕವಾಗಿ ಸೋಮವಾರ ಸಂಜೆ ಧಿಡೀರ್ ಮಳೆಯಾದರಿಂದ ರೈತಾಪಿ ವರ್ಗ ಜಾನುವಾರುಗಳಿಗೆ ಮೇವು ಹಾಗು ಕಟಾವು ಮಾಡಿದ್ದ ರಾಗಿಯನ್ನು ರಕ್ಷಿಸಿಕೊಳ್ಳಲು ಪರದಾಡಿದರು. ಇನ್ನು ಪವನ ವಿದ್ಯುತ್ ಯಂತ್ರಕ್ಕೆ ಸಿಡಿಲು ಬಡಿದು ಬೆಂಕಿ ಹೊತ್ತಿ ಉರಿಯುತ್ತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ ಅಜಯ್ ಬಿ ಟಿ ಗುದ್ದಿ 8123302594, ದಯಾನಂದ್ ಸಜ್ಜನ್ 9886972975
ಕೂಡ್ಲಿಗಿ ; ಗರ್ಭಿಣಿ ಸ್ತ್ರೀಯರಿಗೆ ಸೀಮಂತ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ಅವರ ಆರೋಗ್ಯ ಮತ್ತು ಕ್ಷೇಮವನ್ನು ಕಾಪಾಡುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ ಎಂದು ಶಾಸಕ ಡಾ ಶ್ರೀನಿವಾಸ್ ಎನ್ ಟಿ ಹೇಳಿದರು. ತಾಲೂಕಿನ ನರಸಿಂಹಗಿರಿಯಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಭಾನುವಾರ ಗರ್ಭಿಣಿ ಸ್ತ್ರೀಯರಿಗೆ ಸೀಮಂತ ಕಾರ್ಯಕ್ರಮ, ಆಶಾ ಕಾರ್ಯಕರ್ತರು, ಜಿಲ್ಲಾ ಮತ್ತು ತಾಲೂಕು ಮಟ್ಟದ ಮಹಿಳಾ ಅಧಿಕಾರಿಗಳು ಹಾಗೂ ರಾಜಕೀಯ ಮುಂಚೂಣಿಯ ಮಹಿಳೆಯರಿಗೆ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು, ಮಹಿಳೆಯರ ಶಕ್ತಿ ಮತ್ತು ಸಾಮರ್ಥ್ಯವನ್ನು ಗುರುತಿಸಿ ಅವರಿಗೆ ಸನ್ಮಾನ ಸಲ್ಲಿಸುವುದು ನಮ್ಮ ಕರ್ತವ್ಯವಾಗಿದೆ ಎಂದರು. ಆಶಾ ಕಾರ್ಯಕರ್ತರ ಕೊಡುಗೆಯನ್ನು ಶ್ಲಾಘಿಸಿದ ಅವರು ಆಶಾ ಕಾರ್ಯಕರ್ತೆಯರು ಇಂದು ಪ್ರತಿ ಮನೆಗಳ ಆಶಾ ದೀಪಗಳಂತೆ ಕೆಲಸ ಮಾಡುತ್ತಿದಾರೆ ಎಂದರು. ಕಾರ್ಯಕ್ರಮದಲ್ಲಿ ಸಂಸದ ಈ ತುಕಾರಾಂ ಮಾತನಾಡಿ, ಸಹೋದರ ಶ್ರೀನಿವಾಸ್ ಅವರು ಕ್ಷೇತ್ರದಲ್ಲಿ ಮಾದರಿ ಕೆಲಸ ಮಾಡುತ್ತಿದ್ದಾರೆ. ಸೀಮಂತ ಸೇರಿದಂತೆ ಮಹಿಳೆಯರಿಗೆ ಸನ್ಮಾನಿಸಿ ಗೌರವ ಸಲ್ಲಿಸಿರುವುದು ಪುಣ್ಯದ ಕಾರ್ಯವಾಗಿದೆ ಎಂದ ಅವರು,…
ಕೂಡ್ಲಿಗಿ : ಬಡವರ ಜೀವನ ನಿರ್ವಹಣೆಗೆ ಆಧಾರವಾಗಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನುರದ್ದು ಮಾಡಿ, ಕೇಂದ್ರ ಸರ್ಕಾರ ಬಯಸಿದಾಗಷ್ಟೇ ಉದ್ಯೋಗ ನೀಡುವ ವಿಬಿ ಗ್ರಾಮ್ ಜಿ ಯೋಜನೆಯನ್ನು ಜಾರಿ ಮಾಡುತ್ತಿರುವುದು ಖಂಡನೀಯ ಎಂದು ಶಾಸಕ ಡಾ ಶ್ರೀನಿವಾಸ್ ಎನ್ ಟಿ ಹೇಳಿದರು. ತಾಲೂಕಿನ ತಾಯಕನಹಳ್ಳಿಯಲ್ಲಿ ಎಂಜಿನರೇಗಾ ರದ್ದು ಪಡಿಸಿ ವಿಬ್ ಜಿ ಜಾರಿ ಕ್ರಮವನ್ನು ವಿರೋಧಿಸಿ ಹುಡೇಂನಿಂದ ತಾಯಕ್ಕನಹಳ್ಳಿ ಗ್ರಾಮದವರೆಗೂ ಪಾದಯಾತ್ರೆ ಮೂಲಕ ಪ್ರತಿಭಟಿಸಿ ನಂತರ ಮಾತನಾಡಿದರು. ಮನರೇಗಾ ಮರು ಜಾರಿಯಾಗುವವರೆಗೂ ಹೋರಾಟ ಬಿಡಲ್ಲ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಜನಪರ ಚಿಂತನೆಯಿಂದ ಜಾರಿಗೊಂಡ ಮನರೇಗಾ ಯೋಜನೆಯಡಿ ಬಡವರು, ಸಣ್ಣರೈತರು, ಮಹಿಳೆಯರಿಗೆ 100 ದಿನಗಳ ಕಾಲ ಕೆಲಸವನ್ನು ಖಾತ್ರಿಪಡಿಸುತ್ತಿತ್ತು. ಬಡವರಿಗೆ ಕೆಲಸದ ಹಕ್ಕು ಸಂವಿಧಾನಬದ್ಧವಾದದ್ದು, ಆದರೆ ವಿಬಿ ಜಿ ರಾಮ್ ಜಿ ಕಾಯ್ದೆಯಿಂದ ಸಂವಿಧಾನಬದ್ದವಾದ ಹಕ್ಕನ್ನು ಕಸಿದುಕೊಂಡಂತಾಗಿದೆ ಎಂದರು. ಪ್ರತಿ ಪಂಚಾಯತ್ ವರ್ಷಕ್ಕೆ ಸುಮಾರು 1-2 ಕೋಟಿ ರೂ.ಗಳನ್ನು ಪಡೆಯುತ್ತಿತ್ತು ಆದರೆ ಕೇಂದ್ರದ ಹೊಸ ಯೋಜನೆಯಿಂದ…
ಕೂಡ್ಲಿಗಿ: ಕೆರೆಗಳಲ್ಲಿ ಹೂಳೆತುವ ಮೂಲಕ ಪುನಶ್ಚೇತನವು ಪರಿಸರ ಸಮತೋಲನ, ಕೃಷಿ ಬೆಳವಣಿಗೆ ಮತ್ತು ಅಂತರ್ಜಲವನ್ನು ರಕ್ಷಿಸುವ ಅತ್ಯಗತ್ಯ ಪ್ರಕ್ರಿಯೆಯಾಗಿದೆ ಎಂದು ಧ್ರಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಯೋಜನಾಧಿಕಾರಿ ಎಚ್ ಡಿ ನವೀನ್ ಕುಮಾರ್ ಹೇಳಿದರು.ತಾಲೂಕಿನ ಬಯಲುತುಂಬರಗುದ್ದಿ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮೀಣಾಭೀವೃದ್ಧಿ ಸಂಸ್ಥೆಯಿಂದ ನಮ್ಮ ಊರು ನಮ್ಮ ಕೆರೆ ಯೋಜನೆಯಡಿ ಹೊನ್ನಮ್ಮ ಕೆರೆಯಲ್ಲಿ ಹೂಳೆತ್ತುವ ಕಾಮಗಾರಿಗೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು. ಕೆರೆಗಳ ಹೂಳೆತ್ತುವುದು, ಒತ್ತುವರಿ ತೆರವು, ಸುತ್ತಲೂ ಗಿಡ ನೆಡುವುದು ಮತ್ತು ಅಂತರ್ಜಲ ವೃದ್ಧಿಯ ಮೂಲಕ ಕೆರೆಗಳಿಗೆ ಕಾಯಕಲ್ಪ ನೀಡಿ, ಜನಜೀವನ ಸುಧಾರಣೆ ಹಾಗೂ ವನ್ಯಜೀವಿಗಳ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸಲಾಗುತ್ತಿದೆ ಎಂದರು. ಮುಖಂಡರಾದ ಕೆ ಜಗದೀಶ್ ಮಾತನಾಡಿ, ಧರ್ಮಸ್ಥಳ ಸಂಸ್ಥೆಯಿಂದ ಕೆರೆಯಲ್ಲಿ ಹೂಳೆತುವ ಕಾಮಗಾರಿಗೆ ಚಾಲನೆ ನೀಡಿರುವುದು ಸಂತಸದ ಕಾರ್ಯವಾಗಿದೆ, ಎಲ್ಲ ರೀತಿಯಿಂದಲ್ಲೂ ಗ್ರಾಮಸ್ತರ ಸಹಕಾರ ಇರಲಿದೆ ಎಂದರು. ಈ ಸಂದರ್ಭದಲ್ಲಿ ಕೆರೆ ಸಂರಕ್ಷಣಾ ಸಮಿತಿಯ ಗೌರವಾಧ್ಯಕ್ಷರಾದ ಕೆ ಮಹಾದೇವಪ್ಪ, ಅಧ್ಯಕ್ಷ ಜಿ ಎಚ್ ವೀರೇಶ್, ಉಪಾಧ್ಯಕ್ಷರಾದ ಎಚ್ ಎಂ…
ಕೂಡ್ಲಿಗಿ : ವಿದ್ಯಾರ್ಥಿ ದಿಸೆಯಲ್ಲಿ ಉತ್ತಮ ಗುರಿಯಿಟ್ಟುಕೊಂಡು ಮುನ್ನಡೆದರೆ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬಹುದು, ಕಾನೂನಿನ ಬಗ್ಗೆ ವಿದ್ಯಾರ್ಥಿಗಳು ಹೆಚ್ಚು ಅರಿವು ಮೂಡಿಸಿಕೊಂಡು ತಮ್ಮ ಪೋಷಕರಿಗೂ ಈ ಬಗ್ಗೆ ತಿಳಿಸಿ ಕೊಡಬೇಕು ಎಂದು ಪಿಎಸ್ಐ ಸಿದ್ದರಾಮಪ್ಪ ಬಿದರಾಣಿ ಹೇಳಿದರು. ತಾಲೂಕಿನ ಕಾನಹೊಸಹಳ್ಳಿಯ ಪೊಲೀಸ್ ಠಾಣೆಗೆ ಕ್ಷೇತ್ರ ಪ್ರವಾಸ ಹಿನ್ನೆಲೆಯಲ್ಲಿ ಹುಲಿಕೆರೆ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಸೋಮವಾರ ಭೇಟಿನಿಡಿದ ಸಂದರ್ಭದಲ್ಲಿ ಅವರಿಗೆ ಪೊಲೀಸ್ ಠಾಣೆ ಪರಿಚಯಿಸಿ ಕಾನೂನಿನ ಪಾಠ ಮಾಡಿದರು. ಪೊಲೀಸರ ಬಗ್ಗೆ ಯಾವುದೇ ಭಯ ಬೇಡ, ಭಯವನ್ನು ಹೋಗಲಾಡಿಸಿ ಪೊಲೀಸರೆಂದರೆ ಜನಸ್ನೇಹಿಗಳು, ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸುವವರು ಎಂದರು. ಮುಖ್ಯ ಶಿಕ್ಷಕಿ ಡಿ ವಿಮಲಾಕ್ಷಿ ಮಾತನಾಡಿ, ಕ್ಷೇತ್ರ ಪರಿಚಯ ವಿದ್ಯಾರ್ಥಿಗಳಿಗೆ ತರಗತಿಯ ಹೊರಗಿನ ಪ್ರಾಯೋಗಿಕ ಕಲಿಕೆಗೆ ಸಹಕಾರಿಯಾಗಿದೆ ಎಂದರು. ಎಎಸ್ಐ ಎಸ್ ಕೆ ಜಿಲಾನ್ ಭಾಷಾ ಮಾತನಾಡಿದರು. 40ಕ್ಕೂ ಹೆಚ್ಚು ಶಾಲಾ ಮಕ್ಕಳು ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿ, ಪೊಲೀಸರ ದೈನಂದಿನ ಕೆಲಸ, ಗಸ್ತು ತಿರುಗುವಿಕೆ ಮತ್ತು ಇತರ ಕಾರ್ಯಗಳ…
