Author: Team Sanchalana

ಕೂಡ್ಲಿಗಿ: ಮನೆ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕಾನಹೊಸಹಳ್ಳಿಯ ಪೊಲೀಸರು ಯಶಸ್ವಿಯಾಗಿದ್ದಾರೆ. ಮಂಗಾಪುರ ಗ್ರಾಮದ ನಜೀರ್ ಶಫಿ ಬಂಧಿತ ಆರೋಪಿ, ಕಾನಹೊಸಹಳ್ಳಿ ಪೊಲೀಸ್ ಠಾಣ ವ್ಯಾಪ್ತಿಯ ಮಂಗಾಪುರ ಗ್ರಾಮದಲ್ಲಿ ಜನವರಿ ಹಾಗು ಡಿಸೆಂಬರ್ ತಿಂಗಳಲ್ಲಿ ಎರಡು ಪ್ರತ್ಯಕ ಮನೆಗಳ್ಳತಾನವಾದ ಕುರಿತು ಪ್ರಕರಣ ದಾಕಲಾಗಿತ್ತು, ಪ್ರಕರಣದ ಜಾಡು ಹಿಡಿದ ಕಾನಹೊಸಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸಿ ₹1,90000 ಹಣವನ್ನು ವಶಕ್ಕೆ ಪಡೆದಿದ್ದಾರೆ. ಮಂಗಪುರದ ಬಸವರಾಜ ಎಂಬುವವರ ಮನೆಯಲ್ಲಿ ಬೀರುವಿನಲ್ಲಿದ್ದ 145000 ಹಾಗೂ ಗುರುಬಸವರಾಜ್ ಎಂಬುವವರ ಮನೆಯಲ್ಲಿ ₹55000 ಹಣವನ್ನು ಯಾರು ಇಲ್ಲದ ವೇಳೆ ಕಳ್ಳತನ ಮಾಡಿರುವ ಬಗ್ಗೆ ಪ್ರಕರಣ ದಾಕಲಾಗಿತ್ತು. ಎಸ್ಪಿ ಜಾಹ್ನವಿ ಎಸ್, ಎಎಸ್ಪಿ ಮಂಜುನಾಥ, ಡಿವೈಸ್ಪಿ ಮಲ್ಲೇಶ್ ದೊಡ್ಡಮನಿ, ಸಿಪಿಐ ಡಿ ದುರುಗಪ್ಪ ಮಾರ್ಗದರ್ಶನದಲ್ಲಿ ಪಿಎಸ್ಐ ಸಿದ್ರಾಮ್ ಬಿದರಾಣಿ ನೇತೃತ್ವದಲ್ಲಿ ಸಿಬಂದ್ದಿ ಕೃಷ್ಣಪ್ಪ, ಸುರೇಶ್, ಕೊಟ್ರೇಶ ಅಂಗಡಿ, ಸಿದ್ದಲಿಂಗಪ್ಪ, ವಿನಾಯಕ್, ಸಂದೀಪ್, ರವಿಚಂದ್ರ ಗೌಡ, ಕೃಷ್ಣ ನಾಯಕ್ ಒಳಗೊಂಡ ತಂಡ ಕಾರ್ಯಾಚರಣೆ ನಡೆಸಿದೆ. ಕಾರ್ಯಾಚರಣೆಯಲ್ಲಿ ಭಾಗಿಯಾದ ಅಧಿಕಾರಿ ಹಾಗೂ ಸಿಬಂದ್ದಿ ವರ್ಗಕ್ಕೆ…

Read More

ಕೂಡ್ಲಿಗಿ; 1 ಕೆಜಿ ಬಂಗಾರದ ಆಸೆ ತೋರಿಸಿ 30 ಲಕ್ಷ ವಂಚನೆ ಮಾಡಿದ್ದ ಪ್ರಕರಣ ಭೇದಿಸಿ ಇಬ್ಬರು ಆರೋಪಿಗಳನ್ನ ಬಂಧಿಸುವಲ್ಲಿ ಕಾನಹೊಸಹಳ್ಳಿಯ ಪೊಲೀಸರು ಯಶಸ್ವಿಯಾಗಿದ್ದಾರೆ. ಲಿಂಗನಹಳ್ಳಿ ಕೊರಚರಹಟ್ಟಿಯ ಸುರೇಶ್(ರಮೇಶ್), ಸೋಮಣ್ಣ ಬಂಧಿತರು. ತಾಲೂಕಿನ ಕ್ಯಾಸನಕೆರೆ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಈ ಇಬ್ಬರು ಜನವರಿ 28 ರಂದು ಚೆನೈನಾ ಅಯ್ಯಾಪಾಕಂನ ನಿವಾಸಿ ಜಿ ಕುಮಾರಸ್ವಾಮಿ ಎಂಬುವರಿಗೆ ನಮ್ಮ ಮನೆಯ ಪಾಯ ತಗೆಯುವಾಗ 1 ಕೆಜಿ ಬಂಗಾರ ಸಿಕ್ಕಿದ್ದು ಅದನ್ನು ಮಾರುಕಟ್ಟೆ ದರಕ್ಕಿಂತ ಕಡಿಮೆ ಬೆಲೆಗೆ ಮಾರಾಟ ಮಾಡುವುದಾಗಿ ನಂಬಿಸಿದ್ದಾರೆ. ನಂತರ ಕ್ಯಾಸನಕೆರೆ ಬಳಿ ಅರಣ್ಯ ಪ್ರದೇಶಕ್ಕೆ ಕರೆಸಿಕೊಂಡು ಆತನನ್ನು ಜೋರಾಗಿ ದೂಡಿ ಆತನ ಬಳಿಯಿದ್ದ ₹30 ಲಕ್ಷ ಹಣವನ್ನು ಕಸಿದುಕೊಂಡು ಪರಾರಿಯಾಗಿದ್ದರು. ಪಿರಿಯದುದಾರರು ಭಯಗೊಂಡು ತಡವಾಗಿ ಮಾರ್ಚ್ 14ರಂದು ದೂರು ನೀಡಿದ್ದರು. ದೂರು ಆಧರಿಸಿದ ಪೊಲೀಸರು ಅವರ ಫೋನ್ ಸಂಖ್ಯೆಯ ಮೂಲಕ ಟ್ರೇಸ್ ಮಾಡಿ ಪ್ರಕರಣ ದಾಖಲಾದ ಒಂದೇ ವಾರದಲ್ಲಿ ಮಾರ್ಚ್ 21ರಂದು ಅವರನ್ನು ಬಂಧಿಸಿ ಅವರ ಬಳಿಯಿದ್ದ ₹29,50,…

Read More

ಕೂಡ್ಲಿಗಿ; ಪವನ್ ವಿದ್ಯುತ್ ಯಂತ್ರಕ್ಕೆ ಸಿಡಿಲು ಬಡಿದು ಬೆಂಕಿ ಹೊತ್ತಿ ಉರಿದಿರುವ ಘಟನೆ ತಾಲೂಕಿನ ಯಂಬಳಿ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ. ಯಂಬಳಿ ವಡರಹಟ್ಟಿಯ ನೀಲಪ್ಪರ ಶರಣಪ್ಪ ಎಂಬುವವರ ಜಮೀನಿನಲ್ಲಿ ಅಳವಡಿಸಿದ್ದ ಖಾಸಗಿ ಕಂಪನಿಯ ವಿಂಡ್ ಫ್ಯಾನ್gಗೆ ಸಿಡಿಲು ಬಡಿದು ಹೊತ್ತಿ ಉರಿದಿದ್ದು, ದಟ್ಟ ಹೊಗೆ ಆವರಿಸಿಕೊಂಡಿದೇ. ಸಮೀಪಕ್ಕೆ ಸ್ಥಳೀಯರನ್ನು ಬಿಡದಂತೆ ಕಂಪನಿಯವರು ತಡೆದಿದ್ದಾರೆ. ತಾಲೂಕಿನಾದ್ಯಂತ ಸಿಡಿಲು ಗುಡುಗು ಸಹಿತ ಸಾಧಾರಣ ಮಳೆಯಾಗಿದೆ, ಅಕಾಲಿಕವಾಗಿ ಸೋಮವಾರ ಸಂಜೆ ಧಿಡೀರ್ ಮಳೆಯಾದರಿಂದ ರೈತಾಪಿ ವರ್ಗ ಜಾನುವಾರುಗಳಿಗೆ ಮೇವು ಹಾಗು ಕಟಾವು ಮಾಡಿದ್ದ ರಾಗಿಯನ್ನು ರಕ್ಷಿಸಿಕೊಳ್ಳಲು ಪರದಾಡಿದರು. ಇನ್ನು ಪವನ ವಿದ್ಯುತ್ ಯಂತ್ರಕ್ಕೆ ಸಿಡಿಲು ಬಡಿದು ಬೆಂಕಿ ಹೊತ್ತಿ ಉರಿಯುತ್ತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ ಅಜಯ್ ಬಿ ಟಿ ಗುದ್ದಿ 8123302594, ದಯಾನಂದ್ ಸಜ್ಜನ್ 9886972975

Read More

ಕೂಡ್ಲಿಗಿ ; ಗರ್ಭಿಣಿ ಸ್ತ್ರೀಯರಿಗೆ ಸೀಮಂತ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ಅವರ ಆರೋಗ್ಯ ಮತ್ತು ಕ್ಷೇಮವನ್ನು ಕಾಪಾಡುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ ಎಂದು ಶಾಸಕ ಡಾ ಶ್ರೀನಿವಾಸ್ ಎನ್ ಟಿ ಹೇಳಿದರು. ತಾಲೂಕಿನ ನರಸಿಂಹಗಿರಿಯಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಭಾನುವಾರ ಗರ್ಭಿಣಿ ಸ್ತ್ರೀಯರಿಗೆ ಸೀಮಂತ ಕಾರ್ಯಕ್ರಮ, ಆಶಾ ಕಾರ್ಯಕರ್ತರು, ಜಿಲ್ಲಾ ಮತ್ತು ತಾಲೂಕು ಮಟ್ಟದ ಮಹಿಳಾ ಅಧಿಕಾರಿಗಳು ಹಾಗೂ ರಾಜಕೀಯ ಮುಂಚೂಣಿಯ ಮಹಿಳೆಯರಿಗೆ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು, ಮಹಿಳೆಯರ ಶಕ್ತಿ ಮತ್ತು ಸಾಮರ್ಥ್ಯವನ್ನು ಗುರುತಿಸಿ ಅವರಿಗೆ ಸನ್ಮಾನ ಸಲ್ಲಿಸುವುದು ನಮ್ಮ ಕರ್ತವ್ಯವಾಗಿದೆ ಎಂದರು. ಆಶಾ ಕಾರ್ಯಕರ್ತರ ಕೊಡುಗೆಯನ್ನು ಶ್ಲಾಘಿಸಿದ ಅವರು ಆಶಾ ಕಾರ್ಯಕರ್ತೆಯರು ಇಂದು ಪ್ರತಿ ಮನೆಗಳ ಆಶಾ ದೀಪಗಳಂತೆ ಕೆಲಸ ಮಾಡುತ್ತಿದಾರೆ ಎಂದರು. ಕಾರ್ಯಕ್ರಮದಲ್ಲಿ ಸಂಸದ ಈ ತುಕಾರಾಂ ಮಾತನಾಡಿ, ಸಹೋದರ ಶ್ರೀನಿವಾಸ್ ಅವರು ಕ್ಷೇತ್ರದಲ್ಲಿ ಮಾದರಿ ಕೆಲಸ ಮಾಡುತ್ತಿದ್ದಾರೆ. ಸೀಮಂತ ಸೇರಿದಂತೆ ಮಹಿಳೆಯರಿಗೆ ಸನ್ಮಾನಿಸಿ ಗೌರವ ಸಲ್ಲಿಸಿರುವುದು ಪುಣ್ಯದ ಕಾರ್ಯವಾಗಿದೆ ಎಂದ ಅವರು,…

Read More

ಕೂಡ್ಲಿಗಿ : ಬಡವರ ಜೀವನ ನಿರ್ವಹಣೆಗೆ ಆಧಾರವಾಗಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನುರದ್ದು ಮಾಡಿ, ಕೇಂದ್ರ ಸರ್ಕಾರ ಬಯಸಿದಾಗಷ್ಟೇ ಉದ್ಯೋಗ ನೀಡುವ ವಿಬಿ ಗ್ರಾಮ್ ಜಿ ಯೋಜನೆಯನ್ನು ಜಾರಿ ಮಾಡುತ್ತಿರುವುದು ಖಂಡನೀಯ ಎಂದು ಶಾಸಕ ಡಾ ಶ್ರೀನಿವಾಸ್ ಎನ್ ಟಿ ಹೇಳಿದರು. ತಾಲೂಕಿನ ತಾಯಕನಹಳ್ಳಿಯಲ್ಲಿ  ಎಂಜಿನರೇಗಾ ರದ್ದು ಪಡಿಸಿ ವಿಬ್ ಜಿ ಜಾರಿ ಕ್ರಮವನ್ನು ವಿರೋಧಿಸಿ ಹುಡೇಂನಿಂದ ತಾಯಕ್ಕನಹಳ್ಳಿ ಗ್ರಾಮದವರೆಗೂ ಪಾದಯಾತ್ರೆ ಮೂಲಕ ಪ್ರತಿಭಟಿಸಿ ನಂತರ ಮಾತನಾಡಿದರು. ಮನರೇಗಾ ಮರು ಜಾರಿಯಾಗುವವರೆಗೂ ಹೋರಾಟ ಬಿಡಲ್ಲ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಜನಪರ ಚಿಂತನೆಯಿಂದ ಜಾರಿಗೊಂಡ ಮನರೇಗಾ ಯೋಜನೆಯಡಿ ಬಡವರು, ಸಣ್ಣರೈತರು, ಮಹಿಳೆಯರಿಗೆ 100 ದಿನಗಳ ಕಾಲ ಕೆಲಸವನ್ನು ಖಾತ್ರಿಪಡಿಸುತ್ತಿತ್ತು. ಬಡವರಿಗೆ ಕೆಲಸದ ಹಕ್ಕು ಸಂವಿಧಾನಬದ್ಧವಾದದ್ದು, ಆದರೆ ವಿಬಿ ಜಿ ರಾಮ್ ಜಿ ಕಾಯ್ದೆಯಿಂದ ಸಂವಿಧಾನಬದ್ದವಾದ ಹಕ್ಕನ್ನು ಕಸಿದುಕೊಂಡಂತಾಗಿದೆ ಎಂದರು. ಪ್ರತಿ ಪಂಚಾಯತ್ ವರ್ಷಕ್ಕೆ ಸುಮಾರು 1-2 ಕೋಟಿ ರೂ.ಗಳನ್ನು ಪಡೆಯುತ್ತಿತ್ತು ಆದರೆ ಕೇಂದ್ರದ ಹೊಸ ಯೋಜನೆಯಿಂದ…

Read More

ಕೂಡ್ಲಿಗಿ: ಕೆರೆಗಳಲ್ಲಿ ಹೂಳೆತುವ ಮೂಲಕ ಪುನಶ್ಚೇತನವು ಪರಿಸರ ಸಮತೋಲನ, ಕೃಷಿ ಬೆಳವಣಿಗೆ ಮತ್ತು ಅಂತರ್ಜಲವನ್ನು ರಕ್ಷಿಸುವ ಅತ್ಯಗತ್ಯ ಪ್ರಕ್ರಿಯೆಯಾಗಿದೆ ಎಂದು ಧ್ರಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಯೋಜನಾಧಿಕಾರಿ ಎಚ್ ಡಿ ನವೀನ್ ಕುಮಾರ್ ಹೇಳಿದರು.ತಾಲೂಕಿನ ಬಯಲುತುಂಬರಗುದ್ದಿ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮೀಣಾಭೀವೃದ್ಧಿ ಸಂಸ್ಥೆಯಿಂದ ನಮ್ಮ ಊರು ನಮ್ಮ ಕೆರೆ ಯೋಜನೆಯಡಿ ಹೊನ್ನಮ್ಮ ಕೆರೆಯಲ್ಲಿ ಹೂಳೆತ್ತುವ ಕಾಮಗಾರಿಗೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು. ಕೆರೆಗಳ ಹೂಳೆತ್ತುವುದು, ಒತ್ತುವರಿ ತೆರವು, ಸುತ್ತಲೂ ಗಿಡ ನೆಡುವುದು ಮತ್ತು ಅಂತರ್ಜಲ ವೃದ್ಧಿಯ ಮೂಲಕ ಕೆರೆಗಳಿಗೆ ಕಾಯಕಲ್ಪ ನೀಡಿ, ಜನಜೀವನ ಸುಧಾರಣೆ ಹಾಗೂ ವನ್ಯಜೀವಿಗಳ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸಲಾಗುತ್ತಿದೆ ಎಂದರು. ಮುಖಂಡರಾದ ಕೆ ಜಗದೀಶ್ ಮಾತನಾಡಿ, ಧರ್ಮಸ್ಥಳ ಸಂಸ್ಥೆಯಿಂದ ಕೆರೆಯಲ್ಲಿ ಹೂಳೆತುವ ಕಾಮಗಾರಿಗೆ ಚಾಲನೆ ನೀಡಿರುವುದು ಸಂತಸದ ಕಾರ್ಯವಾಗಿದೆ, ಎಲ್ಲ ರೀತಿಯಿಂದಲ್ಲೂ ಗ್ರಾಮಸ್ತರ ಸಹಕಾರ ಇರಲಿದೆ ಎಂದರು. ಈ ಸಂದರ್ಭದಲ್ಲಿ ಕೆರೆ ಸಂರಕ್ಷಣಾ ಸಮಿತಿಯ ಗೌರವಾಧ್ಯಕ್ಷರಾದ ಕೆ ಮಹಾದೇವಪ್ಪ, ಅಧ್ಯಕ್ಷ ಜಿ ಎಚ್ ವೀರೇಶ್, ಉಪಾಧ್ಯಕ್ಷರಾದ ಎಚ್ ಎಂ…

Read More

ಕೂಡ್ಲಿಗಿ : ವಿದ್ಯಾರ್ಥಿ ದಿಸೆಯಲ್ಲಿ ಉತ್ತಮ ಗುರಿಯಿಟ್ಟುಕೊಂಡು ಮುನ್ನಡೆದರೆ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬಹುದು, ಕಾನೂನಿನ ಬಗ್ಗೆ ವಿದ್ಯಾರ್ಥಿಗಳು ಹೆಚ್ಚು ಅರಿವು ಮೂಡಿಸಿಕೊಂಡು ತಮ್ಮ ಪೋಷಕರಿಗೂ ಈ ಬಗ್ಗೆ ತಿಳಿಸಿ ಕೊಡಬೇಕು ಎಂದು ಪಿಎಸ್ಐ ಸಿದ್ದರಾಮಪ್ಪ ಬಿದರಾಣಿ ಹೇಳಿದರು. ತಾಲೂಕಿನ ಕಾನಹೊಸಹಳ್ಳಿಯ ಪೊಲೀಸ್ ಠಾಣೆಗೆ ಕ್ಷೇತ್ರ ಪ್ರವಾಸ ಹಿನ್ನೆಲೆಯಲ್ಲಿ ಹುಲಿಕೆರೆ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಸೋಮವಾರ ಭೇಟಿನಿಡಿದ ಸಂದರ್ಭದಲ್ಲಿ ಅವರಿಗೆ ಪೊಲೀಸ್ ಠಾಣೆ ಪರಿಚಯಿಸಿ ಕಾನೂನಿನ ಪಾಠ ಮಾಡಿದರು. ಪೊಲೀಸರ ಬಗ್ಗೆ ಯಾವುದೇ ಭಯ ಬೇಡ, ಭಯವನ್ನು ಹೋಗಲಾಡಿಸಿ ಪೊಲೀಸರೆಂದರೆ ಜನಸ್ನೇಹಿಗಳು, ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸುವವರು ಎಂದರು. ಮುಖ್ಯ ಶಿಕ್ಷಕಿ ಡಿ ವಿಮಲಾಕ್ಷಿ ಮಾತನಾಡಿ, ಕ್ಷೇತ್ರ ಪರಿಚಯ ವಿದ್ಯಾರ್ಥಿಗಳಿಗೆ ತರಗತಿಯ ಹೊರಗಿನ ಪ್ರಾಯೋಗಿಕ ಕಲಿಕೆಗೆ ಸಹಕಾರಿಯಾಗಿದೆ ಎಂದರು. ಎಎಸ್ಐ ಎಸ್ ಕೆ ಜಿಲಾನ್ ಭಾಷಾ ಮಾತನಾಡಿದರು. 40ಕ್ಕೂ ಹೆಚ್ಚು ಶಾಲಾ ಮಕ್ಕಳು ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿ, ಪೊಲೀಸರ ದೈನಂದಿನ ಕೆಲಸ, ಗಸ್ತು ತಿರುಗುವಿಕೆ ಮತ್ತು ಇತರ ಕಾರ್ಯಗಳ…

Read More

ಸಂಡೂರು; ನಾವು ಸೇವಿಸುವ ಆಹಾರದ ಮೇಲೆ ನಮ್ಮ ಆರೋಗ್ಯ ಅವಲಂಬಿತ. ಆಹಾರ ಪದಾರ್ಥಗಳ ಗುಣಮಟ್ಟ ಮಣ್ಣಿನ ಆರೋಗ್ಯದ ಮೇಲೆ ನಿಂತಿದೆ. ಹೀಗಾಗಿ ಮಣ್ಣು ಮೊದಲು ಸ್ವಸ್ಥ ಅಥವಾ ಸತ್ವಯುತವಾಗಿದ್ದರೆ ಮಾತ್ರ ನಮ್ಮ ಆರೋಗ್ಯವೂ ಸ್ವಸ್ಥ ಆಗಿರುತ್ತದೆ ಎಂದು ಸಾವಯವ ಕೃಷಿಕ ಬಂಡ್ರಿ ದುರುಗಪ್ಪ ಹೇಳಿದರು. ಇವರು ಭಾನುವಾರ ತಾಲ್ಲೂಕಿನ ಬಂಡ್ರಿ ಗ್ರಾಮದ ತಮ್ಮ ಜಮೀನಿನಲ್ಲಿ ಅಖಂಡ ಬಳ್ಳಾರಿ ಜಿಲ್ಲೆಯ `ಹಸಿರಿನೊಂದಿಗೆ ಮಾತುಕತೆ ಬಳಗ’ ದ 17 ನೇ ಕಾರ್ಯಕ್ರಮದ ಆತಿಥ್ಯವಹಿಸಿ ಮಾತನಾಡಿದರು. ಹೆಚ್ಚಿನ ಇಳುವರಿ ಮತ್ತು ಆರ್ಥಿಕ ಲಾಭದ ದೃಷ್ಟಿಯಿಂದ ಆಧುನಿಕ ಕೃಷಿ ಅಪ್ಪಿಕೊಳ್ಳುತ್ತಿದ್ದೇವೆ. ಆದರೆ ಇದರಲ್ಲಿ ಲಾಭಕ್ಕಿಂತ ನಷ್ಟಗಳೇ ಹೆಚ್ಚು. ಪರಂಪರಾಗತ ಕೃಷಿಯನ್ನು ಅಳವಡಿಸಿಕೊಂಡರೆ ನಮಗೆ ಆರೋಗ್ಯ ಹಾಗೆ ನೆಮ್ಮದಿ ಸಿಗುತ್ತದೆ. ಕೃಷಿ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಿ ಮಾರಾಟ ಮಾಡಿದರೆ ರೈತರು ಆರ್ಥಿಕವಾಗಿ ಸಧೃಢವಾಗುತ್ತಾರೆ. ಸಾವಯವದಲ್ಲಿ ಬೆಳೆದ ಆಹಾರ ಉತ್ಪನ್ನಗಳಿಗೆ ಬೇಡಿಕೆ ಇದ್ದು, ಅದನ್ನು ಬಳಸಿಕೊಳ್ಳುವ ಜಾಣತನ, ತಂತ್ರಗಳು ಗೊತ್ತಿರಬೇಕೆಂದರು. ಗಂಗಾವತಿ ಕೃಷಿ ಮಹಾವಿದ್ಯಾಲಯದ ಪ್ರಾಧ್ಯಾಪಕರಾದ ಡಾ.ಪಿ.ಆರ್ ಬದರಿ ಪ್ರಸಾದ್…

Read More

ಕೂಡ್ಲಿಗಿ: ತಾಲೂಕಿನ ರಂಗನಾಥನಹಳ್ಳಿಯಿಂದ ನೂರಾರು ಭಕ್ತರು ಶುಕ್ರವಾರ ಶ್ರೀಶೈಲ ಪಾದಯಾತ್ರೆಗೆ ತೆರಳಿದರು. ರಂಗನಾಥನಹಳ್ಳಿ, ಬಯಲುತುಂಬರಗುದ್ದಿ ಹಾಗೂ ಬೆಳಕಟ್ಟೆ ಗ್ರಾಮಗಳ ಭಕ್ತರು ಸತತ 14 ವರ್ಷವೂ ಶ್ರೀ ಶೈಲ ಮಲ್ಲಿಕಾರ್ಜುನ ದರ್ಶನಕ್ಕೆ ಹೊರಟರು. ಆಯಾ ಗ್ರಾಮಗಳ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿಕೊಂಡು ಬಳಿಕ ರಂಗನಾಥನಹಳ್ಳಿ ಗ್ರಾಮದಿಂದ ಬಸ್‌ ಮೂಲಕ ತೆರಳಿದರು. ಮಹಾನಂದಿ, ಯಗಂಟಿ ಸೇರಿದಂತೆ ಇತರೇ ದೇವಸ್ಥಾನಗಳ ದರ್ಶನ ಪಡೆದುಕೊಂಡು ನಂತರ ನಲ್ಲಮಲ್ಲ ಅರಣ್ಯ ಪ್ರದೇಶದಲ್ಲಿ ಕಡಿದಾದ ಗುಡ್ಡಗಳ ನಡುವೇ ಪಾದಯಾತ್ರೆ ಆರಂಭಿಸಿದ್ದಾರೆ. 2 ದಿನಗಳ ನಂತರ ಮಲ್ಲಿಕಾರ್ಜುನ ಸ್ವಾಮಿಯ ದರ್ಶನ ಪಡೆಯಲ್ಲಿದ್ದಾರೆ. ಮಹಾ ಶಿವರಾತ್ರಿಗೆ ಶ್ರೀ ಶೈಲದಲ್ಲಿ ಮಹಾರಥೋತ್ಸವ ಜರುಗಲ್ಲಿದ್ದು, ಶಿವರಾತ್ರಿಯ ಈ ಸಂದರ್ಭದಲ್ಲಿ ಪಾದಯಾತ್ರೆ ಮಾಡಿದರೆ ಒಳಿತಾಗಲಿದೆ ಎನ್ನುವ ನಂಬಿಕೆಯಿಂದ ವಿವಿಧ ರೀತಿಯಾಗಿ ಹರಕೆ ಹೊತ್ತು ಈ ಭಾಗದಿಂದಲೂ ಸಹ ಪಾದಯಾತ್ರೆ ತೆರಳಲ್ಲಿದ್ದಾರೆ. ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ ಅಜಯ್ ಬಿ ಟಿ ಗುದ್ದಿ 8123302594, ದಯಾನಂದ್ ಸಜ್ಜನ್ 9886972975

Read More

ಕೂಡ್ಲಿಗಿ: ಇಲ್ಲಿನ ತಹಶೀಲ್ದಾರ್ ನೇತ್ರಾವತಿ ವಿ ಕೆ ಅವರ ಹೆಸರಿನಲ್ಲಿ ನಕಲಿ ವಾಟ್ಸಪ್ ಖಾತೆ ಸೃಷ್ಟಿಸಿದ್ದು, ಅವರ ಫೋನ್ ಸಂಪರ್ಕದಲ್ಲಿರುವವರಿಗೂ ಹಾಗು ಇತರರಿಗೂ ಸಂದೇಶ ಕಳುಹಿಸುತ್ತಿರುವುದು ಬೆಳಕಿಗೆ ಬಂದಿದೆ. ತಹಶೀಲ್ದಾರ್ ನೇತ್ರಾವತಿ ಅವರ ಡಿಪಿ(ವಾಟ್ಸಾಪ್ ಭಾವಚಿತ್ರ) ಬಳಸಿಕೊಂಡು +84562595170 ಸಂಖ್ಯೆಯಿಂದ ನಕಲಿ ಖಾತೆ ಸೃಷ್ಟಿಸಲಾಗಿದೆ. ಯಾರು ಅದಕ್ಕೆ ಪ್ರತಿಕ್ರಿಯಿಸದಂತೆ ಸ್ವತಃ ತಹಶೀಲ್ದಾರ್ ನೇತ್ರಾವತಿ ವಿ ಕೆ ಅವರೇ ಮನವಿ ಮಾಡಿಕೊಂಡಿದ್ದಾರೆ. ಸೈಬರ್ ವಂಚಕರು ಈ ರೀತಿಯಾಗಿ ನಕಲಿ ಖಾತೆ ಸೃಷ್ಟಿಸಿ ಕೆಲವರಿಗೆ ಮೆಸೇಜ್ ಮಾಡುತ್ತಿದ್ದು ನನ್ನ ಗಮನಕ್ಕೆ ಬಂದಿದೆ. ಹಣ ಕೇಳುವುದಾಗಿ ಅಥವಾ ಇನ್ನು ಯಾವುದೇ ರೀತಿಯಾಗಿ ಸಂದೇಶ ಬಂದರೆ ಯಾರು ಅದಕ್ಕೆ ಪ್ರತಿಕ್ರಿಯಿಸಬೇಡಿ ಎಂದು ನೇತ್ರಾವತಿ ವಿ ಕೆ ಅವರು ತಿಳಿಸಿದ್ದಾರೆ. ಕಳೆದ ವಾರದಲ್ಲಿ ಕೊಟ್ಟೂರು ತಹಶೀಲ್ದಾರ್ ಅಮರೇಶ ಅವರ ಹೆಸರಿನಲ್ಲಿಯೂ ಕೂಡ ನಕಲಿ ಖಾತೆ ಸೃಷ್ಟಿಸಿಕೊಂಡು ಹಣಕ್ಕೆ ಬೇಡಿಕೆ ಇಟ್ಟಿರುವ ಸಂದೇಶ ಕಳುಹಿಸಲಾಗಿತ್ತು ಎನ್ನಲಾಗಿದೆ. ಐಎಎಸ್ ಕೆಎಎಸ್ ಅಧಿಕಾರಿಗಳೇ ಟಾರ್ಗೆಟ್ ಈ ಹಿಂದೆ ಇದ್ದ ಜಿಲ್ಲಾಧಿಕಾರಿ ಎಂ ಎಸ್…

Read More