ಸಂಡೂರು; ನಾವು ಸೇವಿಸುವ ಆಹಾರದ ಮೇಲೆ ನಮ್ಮ ಆರೋಗ್ಯ ಅವಲಂಬಿತ. ಆಹಾರ ಪದಾರ್ಥಗಳ ಗುಣಮಟ್ಟ ಮಣ್ಣಿನ ಆರೋಗ್ಯದ ಮೇಲೆ ನಿಂತಿದೆ. ಹೀಗಾಗಿ ಮಣ್ಣು ಮೊದಲು ಸ್ವಸ್ಥ ಅಥವಾ ಸತ್ವಯುತವಾಗಿದ್ದರೆ ಮಾತ್ರ ನಮ್ಮ ಆರೋಗ್ಯವೂ ಸ್ವಸ್ಥ ಆಗಿರುತ್ತದೆ ಎಂದು ಸಾವಯವ ಕೃಷಿಕ ಬಂಡ್ರಿ ದುರುಗಪ್ಪ ಹೇಳಿದರು. ಇವರು ಭಾನುವಾರ ತಾಲ್ಲೂಕಿನ ಬಂಡ್ರಿ ಗ್ರಾಮದ ತಮ್ಮ ಜಮೀನಿನಲ್ಲಿ ಅಖಂಡ ಬಳ್ಳಾರಿ ಜಿಲ್ಲೆಯ `ಹಸಿರಿನೊಂದಿಗೆ ಮಾತುಕತೆ ಬಳಗ’ ದ 17 ನೇ ಕಾರ್ಯಕ್ರಮದ ಆತಿಥ್ಯವಹಿಸಿ ಮಾತನಾಡಿದರು. ಹೆಚ್ಚಿನ ಇಳುವರಿ ಮತ್ತು ಆರ್ಥಿಕ ಲಾಭದ ದೃಷ್ಟಿಯಿಂದ ಆಧುನಿಕ ಕೃಷಿ ಅಪ್ಪಿಕೊಳ್ಳುತ್ತಿದ್ದೇವೆ. ಆದರೆ ಇದರಲ್ಲಿ ಲಾಭಕ್ಕಿಂತ ನಷ್ಟಗಳೇ ಹೆಚ್ಚು. ಪರಂಪರಾಗತ ಕೃಷಿಯನ್ನು ಅಳವಡಿಸಿಕೊಂಡರೆ ನಮಗೆ ಆರೋಗ್ಯ ಹಾಗೆ ನೆಮ್ಮದಿ ಸಿಗುತ್ತದೆ. ಕೃಷಿ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಿ ಮಾರಾಟ ಮಾಡಿದರೆ ರೈತರು ಆರ್ಥಿಕವಾಗಿ ಸಧೃಢವಾಗುತ್ತಾರೆ. ಸಾವಯವದಲ್ಲಿ ಬೆಳೆದ ಆಹಾರ ಉತ್ಪನ್ನಗಳಿಗೆ ಬೇಡಿಕೆ ಇದ್ದು, ಅದನ್ನು ಬಳಸಿಕೊಳ್ಳುವ ಜಾಣತನ, ತಂತ್ರಗಳು ಗೊತ್ತಿರಬೇಕೆಂದರು. ಗಂಗಾವತಿ ಕೃಷಿ ಮಹಾವಿದ್ಯಾಲಯದ ಪ್ರಾಧ್ಯಾಪಕರಾದ ಡಾ.ಪಿ.ಆರ್ ಬದರಿ ಪ್ರಸಾದ್…
Author: Team Sanchalana
ಕೂಡ್ಲಿಗಿ: ತಾಲೂಕಿನ ರಂಗನಾಥನಹಳ್ಳಿಯಿಂದ ನೂರಾರು ಭಕ್ತರು ಶುಕ್ರವಾರ ಶ್ರೀಶೈಲ ಪಾದಯಾತ್ರೆಗೆ ತೆರಳಿದರು. ರಂಗನಾಥನಹಳ್ಳಿ, ಬಯಲುತುಂಬರಗುದ್ದಿ ಹಾಗೂ ಬೆಳಕಟ್ಟೆ ಗ್ರಾಮಗಳ ಭಕ್ತರು ಸತತ 14 ವರ್ಷವೂ ಶ್ರೀ ಶೈಲ ಮಲ್ಲಿಕಾರ್ಜುನ ದರ್ಶನಕ್ಕೆ ಹೊರಟರು. ಆಯಾ ಗ್ರಾಮಗಳ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿಕೊಂಡು ಬಳಿಕ ರಂಗನಾಥನಹಳ್ಳಿ ಗ್ರಾಮದಿಂದ ಬಸ್ ಮೂಲಕ ತೆರಳಿದರು. ಮಹಾನಂದಿ, ಯಗಂಟಿ ಸೇರಿದಂತೆ ಇತರೇ ದೇವಸ್ಥಾನಗಳ ದರ್ಶನ ಪಡೆದುಕೊಂಡು ನಂತರ ನಲ್ಲಮಲ್ಲ ಅರಣ್ಯ ಪ್ರದೇಶದಲ್ಲಿ ಕಡಿದಾದ ಗುಡ್ಡಗಳ ನಡುವೇ ಪಾದಯಾತ್ರೆ ಆರಂಭಿಸಿದ್ದಾರೆ. 2 ದಿನಗಳ ನಂತರ ಮಲ್ಲಿಕಾರ್ಜುನ ಸ್ವಾಮಿಯ ದರ್ಶನ ಪಡೆಯಲ್ಲಿದ್ದಾರೆ. ಮಹಾ ಶಿವರಾತ್ರಿಗೆ ಶ್ರೀ ಶೈಲದಲ್ಲಿ ಮಹಾರಥೋತ್ಸವ ಜರುಗಲ್ಲಿದ್ದು, ಶಿವರಾತ್ರಿಯ ಈ ಸಂದರ್ಭದಲ್ಲಿ ಪಾದಯಾತ್ರೆ ಮಾಡಿದರೆ ಒಳಿತಾಗಲಿದೆ ಎನ್ನುವ ನಂಬಿಕೆಯಿಂದ ವಿವಿಧ ರೀತಿಯಾಗಿ ಹರಕೆ ಹೊತ್ತು ಈ ಭಾಗದಿಂದಲೂ ಸಹ ಪಾದಯಾತ್ರೆ ತೆರಳಲ್ಲಿದ್ದಾರೆ. ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ ಅಜಯ್ ಬಿ ಟಿ ಗುದ್ದಿ 8123302594, ದಯಾನಂದ್ ಸಜ್ಜನ್ 9886972975
ಕೂಡ್ಲಿಗಿ: ಇಲ್ಲಿನ ತಹಶೀಲ್ದಾರ್ ನೇತ್ರಾವತಿ ವಿ ಕೆ ಅವರ ಹೆಸರಿನಲ್ಲಿ ನಕಲಿ ವಾಟ್ಸಪ್ ಖಾತೆ ಸೃಷ್ಟಿಸಿದ್ದು, ಅವರ ಫೋನ್ ಸಂಪರ್ಕದಲ್ಲಿರುವವರಿಗೂ ಹಾಗು ಇತರರಿಗೂ ಸಂದೇಶ ಕಳುಹಿಸುತ್ತಿರುವುದು ಬೆಳಕಿಗೆ ಬಂದಿದೆ. ತಹಶೀಲ್ದಾರ್ ನೇತ್ರಾವತಿ ಅವರ ಡಿಪಿ(ವಾಟ್ಸಾಪ್ ಭಾವಚಿತ್ರ) ಬಳಸಿಕೊಂಡು +84562595170 ಸಂಖ್ಯೆಯಿಂದ ನಕಲಿ ಖಾತೆ ಸೃಷ್ಟಿಸಲಾಗಿದೆ. ಯಾರು ಅದಕ್ಕೆ ಪ್ರತಿಕ್ರಿಯಿಸದಂತೆ ಸ್ವತಃ ತಹಶೀಲ್ದಾರ್ ನೇತ್ರಾವತಿ ವಿ ಕೆ ಅವರೇ ಮನವಿ ಮಾಡಿಕೊಂಡಿದ್ದಾರೆ. ಸೈಬರ್ ವಂಚಕರು ಈ ರೀತಿಯಾಗಿ ನಕಲಿ ಖಾತೆ ಸೃಷ್ಟಿಸಿ ಕೆಲವರಿಗೆ ಮೆಸೇಜ್ ಮಾಡುತ್ತಿದ್ದು ನನ್ನ ಗಮನಕ್ಕೆ ಬಂದಿದೆ. ಹಣ ಕೇಳುವುದಾಗಿ ಅಥವಾ ಇನ್ನು ಯಾವುದೇ ರೀತಿಯಾಗಿ ಸಂದೇಶ ಬಂದರೆ ಯಾರು ಅದಕ್ಕೆ ಪ್ರತಿಕ್ರಿಯಿಸಬೇಡಿ ಎಂದು ನೇತ್ರಾವತಿ ವಿ ಕೆ ಅವರು ತಿಳಿಸಿದ್ದಾರೆ. ಕಳೆದ ವಾರದಲ್ಲಿ ಕೊಟ್ಟೂರು ತಹಶೀಲ್ದಾರ್ ಅಮರೇಶ ಅವರ ಹೆಸರಿನಲ್ಲಿಯೂ ಕೂಡ ನಕಲಿ ಖಾತೆ ಸೃಷ್ಟಿಸಿಕೊಂಡು ಹಣಕ್ಕೆ ಬೇಡಿಕೆ ಇಟ್ಟಿರುವ ಸಂದೇಶ ಕಳುಹಿಸಲಾಗಿತ್ತು ಎನ್ನಲಾಗಿದೆ. ಐಎಎಸ್ ಕೆಎಎಸ್ ಅಧಿಕಾರಿಗಳೇ ಟಾರ್ಗೆಟ್ ಈ ಹಿಂದೆ ಇದ್ದ ಜಿಲ್ಲಾಧಿಕಾರಿ ಎಂ ಎಸ್…
ಕೂಡ್ಲಿಗಿ: ಎಸ್ ಎಸ್ ಎಲ್ ಸಿ ಫಲಿತಾಂಶ ಸುಧಾರಣೆಗೆ ಕ್ಷೇತ್ರಶಿಕ್ಷಣಾಧಿಕಾರಿ ಮಹತ್ವದ ಹೆಜ್ಜೆ ಇಟ್ಟಿದ್ದು, ಮೊಬೈಲ್ ಮತ್ತು ಟಿವಿ ಸ್ವಿಚ್ ಆಪ್ ಮಾಡುವಂತೆ ಡಂಗೂರ ಸಾರಲು ಮುಂದಾಗಿದ್ದಾರೆ. ಕೂಡ್ಲಿಗಿ BEO ಮೈಲೇಶ್ ಬೇವೂರ ಜೆ, ಅವರು ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗೆ ಪತ್ರ ಬರೆದಿದ್ದಾರೆ. ಕ್ಷೇತ್ರ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ಡಂಗೂರ ಸಾರುವಂತೆ ನಿರ್ದೇಶನ ನೀಡುವಂತೆ ಕೋರಿಕೆ ಮಾಡಿದ್ದಾರೆ. ಸಾಯಂಕಾಲ 7 ರಿಂದ 9 ಗಂಟೆಯವರೆಗೆ ಮೊಬೈಲ್ ಹಾಗೂ ಪೋನ್ ಸ್ವಿಚ್ ಆಪ್ ಮಾಡುವಂತೆ ಡಂಗೂರ ಸಾರಬೇಕು, ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಮನವಿ ಮಾಡಿದ್ದಾರೆ. 2025-26ನೇ ಸಾಲಿನ SSLC ಫಲಿತಾಂಶ ಸುಧಾರಣೆಗಾಗಿ ಮಕ್ಕಳು ಓದುವ ಹಿತದೃಷ್ಟಿಯಿಂದ ಈ ಕ್ರಮಕ್ಕೆ ಮುಂದಾಗಿದ್ದಾರೆ. ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ ಅಜಯ್ ಬಿ ಟಿ ಗುದ್ದಿ 8123302594, ದಯಾನಂದ್ ಸಜ್ಜನ್ 9886972975
ಕೂಡ್ಲಿಗಿ; ತಾಲೂಕಿನ ಕಾನಹೊಸಹಳ್ಳಿಯ ಆರಾಧ್ಯ ದೇವತೆ ಶ್ರೀ ಶಕ್ತಿ ಮಾರಮ್ಮ ದೇವಿಯ ರಥದ ಗಾಲಿಯನ್ನು ಹೊರ ಹಾಕುವ ಮೂಲಕ ಜಾತ್ರೋತ್ಸವಕ್ಕೆ ಮಂಗಳವಾರ ವಿಧ್ಯುಕ್ತವಾಗಿ ಚಾಲನೆ ನೀಡಲಾಯಿತು. ಫೆ.26 ರಂದು ರಥೋತ್ಸವ ಜರುಗಲಿದೆ. ಜಾತ್ರೋತ್ಸವದ ಹಿನ್ನಲೆಯಲ್ಲಿ ಸೋಮವಾರ ರಾತ್ರಿ ಗುಗ್ಗರಿ ಹಾಕುವ ಕಾರ್ಯಕ್ಕೆ ಚಾಲನೆ ನೀಡಲಾಯಿತು, 287 ಸೇರು ಸಂಗ್ರಹವಾದ ಹುಳ್ಳಿ ಕಾಳುಗಳನ್ನು ಸುಮಾರು 41 ಮಡಿಕೆಗಳಲ್ಲಿ ಬೆರಣಿಯಿಂದ ಬೇಯಿಸಿ ಗುಗ್ಗರಿ ಮಾಡಿದ್ದು ವಿಶೇಷವಾಗಿತ್ತು. ಮಂಗಳವಾರ ಬೆಳಗಿನ ಜಾವಾ ಗ್ರಾಮದ ಎಲ್ಲಾ ದೇವಸ್ಥಾನಗಳಿಗೆ ಗುಗ್ಗರಿ ನೈವೇದ್ಯ ಅರ್ಪಿಸಿ, ದೈವಸ್ಥರಿಗೆ ವಿತರಿಸಲಾಯಿತು. ನಂತರ ಸಕಲ ವಾಧ್ಯಗಳ ಮೂಲಕ ರಥದ ಮನೆಯಿಂದ ದೇವಿಯ ರಥದ ಗಾಲಿ(ಗಡ್ಡೆ) ಯನ್ನು ಹೊರ ಹಾಕುವ ಮೂಲಕ ಜಾತ್ರೋತ್ಸವಕ್ಕೆ ಅದ್ದೂರಿ ಚಾಲನೆ ದೊರೆಯಿತು. ಬೆಳಗ್ಗೆಯಿಂದಲೇ ದೇವಸ್ಥಾನದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಗ್ರಾಮಸ್ಥರು ಸೇರಿದಂತೆ ಅಪಾರ ಭಕ್ತರ ಸಮ್ಮುಖದಲ್ಲಿ ರಥದ ಗಾಲಿಗೆ ವಿಧಿ ವಿಧಾನಗಳಂತೆ ಪೂಜೆ ಸಲ್ಲಿಸಿಲಾಯಿತು. ಒಂದು ತಿಂಗಳಿಗೂ ಹೆಚ್ಚು ಕಾಲ ಜಾತ್ರೋತ್ಸವ ಅದ್ದೂರಿಯಾಗಿ ನಡೆಯಲ್ಲಿದ್ದು ಫೆ.10 ರಂದು ಕೋಟೆಗೆ…
ಕೂಡ್ಲಿಗಿ: ಕೆರೆ ಹಾಗೂ ಮಣ್ಣು ಸಂರಕ್ಷಣೆ ಅತಿ ಅಗತ್ಯವಾಗಿದ್ದು, ಆ ನಿಟ್ಟಿನಲ್ಲಿ ಬಯಲುತುಂಬರಗುದ್ದಿ ಕೆರೆ ಅಭಿವೃಗೆ ಒತ್ತು ನೀಡಲಾಗಿದೆ ಎಂದು ತಾಲೂಕು ಯೋಜನಾಧಿಕಾರಿ ನವೀನ್ ಕುಮಾರ್ ಎಚ್ ಡಿ ಹೇಳಿದರು. ತಾಲೂಕಿನ ಬಯಲುತುಂಬರಗುದ್ದಿ ಗ್ರಾಮದಲ್ಲಿ ಶನಿವಾರ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸಂಸ್ಥೆಯಿಂದ ʼನಮ್ಮ ಊರು ನಮ್ಮ ಕೆರೆʼ ಕಾರ್ಯಕ್ರಮದಲ್ಲಿ ಹೊನ್ನಮ್ಮ ಕೆರೆ ಹೂಳೆತುವ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು, ಪ್ರತಿ ಹಳ್ಳಿಗಳ ಅಭಿವೃದ್ಧಿಗೆ ಕೆರೆಗಳೇ ಮೂಲ ಆಧಾರವಾಗಿವೆ, ಹಾಗಾಗಿ ಪ್ರತಿ ಹಳಿಗಳ ಕೆರೆ ಜೀರ್ಣೋಧರಕ್ಕೆ ಸಂಸ್ಥೆಯ ಕಡೆಯಿಂದ ಹೆಚ್ಚು ಮುತುವರ್ಜಿ ವಹಿಸಿ ಆಧ್ಯತೆ ನೀಡಲಾಗಿದೆ ಎಂದ ಅವರು, ಕೆರೆ ಜೀರ್ಣೋದ್ಧಾರ ಹಿನ್ನೆಲೆಯಲ್ಲಿ ಹೂಳೆತುವ ಕಾಮಗಾರಿಗೆ ಮೊದಲು ಚಾಲನೆ ನೀಡಲಾಗುವುದು ಈ ನಿಟ್ಟಿನಲ್ಲಿ ಗ್ರಾಮಸ್ಥರ ಸಹಕಾರ ಅಗತ್ಯವಾಗಿದ್ದು, ನಿಮ್ಮೆಲ್ಲಾರ ಸಹಕಾರದಿಂದ ಸುಂದರ ಕೆರೆ ನಿರ್ಮಾಣಕ್ಕೆ ಪಣ ತೊಡೋಣ ಎಂದರು. ಮುಖಂಡರಾದ ಕೆ ಜಗದೀಶ್, ಸರ್ಕಾರಿ ಶಾಲಾ ಮುಖ್ಯ ಶಿಕ್ಷಕ ವೀರೇಶ್ ಮಾತನಾಡಿದರು. ಇದೆ ಸಂದರ್ಭದಲ್ಲಿ ಕೆರೆ ಸಂರಕ್ಷಣಾ ಸಮಿತಿ ರಚಿಸಲಾಯಿತು. ಗೌರವಾಧ್ಯಕ್ಷರಾಗಿ…
ಕೂಡ್ಲಿಗಿ: ಗುಡೆಕೋಟೆ ಉತ್ಸವದ ಲಾಂಛನವನ್ನ ಶಾಸಕ ಡಾ ಶ್ರೀನಿವಾಸ್ ಎನ್ ಟಿ ಅವರು ಶುಕ್ರವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬಿಡುಗಡೆಗೊಳಿಸಿದರು. ಜನವರಿ 31, ಫೆಬ್ರವರಿ 1ರಂದು ಗುಡೆಕೋಟೆಯಲ್ಲಿ ನಡೆಯುವ ಒನಕೆ ಓಬವ್ವ ಉತ್ಸವ (ಗುಡೇಕೋಟೆ ಉತ್ಸವ) ಕಾರ್ಯಕ್ರಮದ ಅಂಗವಾಗಿ ಲಾಂಛನ ಬಿಡುಗಡೆ ಮಾಡಿದರು. ನಂತರ ಮಾತನಾಡಿದ ಅವರು, ಈ ನೆಲದ ಗತವೈಭವವನ್ನು ಸಾರುವ ಒನಕೆ ಓಬವ್ವನ ಉತ್ಸವವು ನಾಡ ಹಬ್ಬವಿದ್ದಂತೆ. ಆದ್ದರಿಂದ ವಿಜೃಂಭಣೆಯಿಂದ, ವಿನೂತನವಾಗಿ ಸ್ಥಳೀಯರ ಸಹಕಾರದೊಂದಿಗೆ ಅದ್ದೂರಿಯಾಗಿ ಆಚರಿಸೋಣ ಎಂದ ಅವರು ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಸಾರಿಗೆ ಮತ್ತು ಮೂಲಸೌಕರ್ಯ ಒದಗಿಸಲಾಗುವುದು, ಫೆಬ್ರವರಿ 1 ರಂದು ಆರೋಗ್ಯ ಶಿಬಿರವನ್ನು ಆಯೋಜನೆ ಮಾಡಲಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ವಿ. ಕೆ ನೇತ್ರಾವತಿ, ತಾ.ಪಂ. ಇಒ ನರಸಪ್ಪ, ಗುಡೆಕೋಟೆಯ ಹಿರಿಯ ಮುಖಂಡರಾದ ರಾಘವೇಂದ್ರರಾವ್, ಗ್ರಾ. ಪಂ. ಅಧ್ಯಕ್ಷರ ಕೃಷ್ಣ, ಶಿವಪ್ರಸಾದ್ ಗೌಡ ಸೇರಿದಂತೆ ಪ್ರಮುಖ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ ಅಜಯ್ 8123302594, ದಯಾನಂದ್ ಸಜ್ಜನ್ 9886972975
ಕೂಡ್ಲಿಗಿ ; ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಕಾರಿಯಾಗಿದೆ ಎಂದು ಮುಖಂಡ ರೇವಣ್ಣ ಹೇಳಿದರು. ತಾಲೂಕಿನ ಕಾನಹೊಸಹಳ್ಳಿಯಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದಿ ಸಂಸ್ಥೆಯಿಂದ ಸಂಕ್ರಾಂತಿ ಹಬ್ಬದ ಅಂಗವಾಗಿ ಮಂಗಳವಾರ ಶ್ರೀ ಬಸವೇಶ್ವರ ದೇವಸ್ಥಾನ ಸೇರಿ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ನಮ್ಮ ಪ್ರದೇಶದಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಒಂದು ಉತ್ತಮ ಉದಾಹರಣೆಯಾಗಿದೆ. ಈ ಯೋಜನೆಯ ಮೂಲಕ ಮಹಿಳೆಯರು ಸ್ವಸಹಾಯ ಸಂಘಗಳನ್ನು ರಚಿಸಿಕೊಂಡು ತಮ್ಮದೇ ಆದ ಉದ್ಯೋಗಗಳನ್ನು ಸೃಷ್ಟಿಸಿಕೊಳ್ಳುತ್ತಿದ್ದಾರೆ ಎಂದರು. ಈ ಸಂದರ್ಭದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕ ನಾಗರಾಜ, ಸೇವಾ ಪ್ರತಿನಿಧಿ ರೇಣುಕಮ್ಮ, ಒಕ್ಕೂಟದ ಕಾರ್ಯದರ್ಶಿ ಗಾಯತ್ರಿ, ಗ್ರಾಮ ಪಂಚಾಯ್ತಿ ಸದಸ್ಯೆ ಗೌರಮ್ಮ, ಮುಖಂಡರಾದ ಬಸವರಾಜ ಇತರರಿದ್ದರು.
ಕೂಡ್ಲಿಗಿ: ಕೋಟೆ ಕೊತ್ತಲಗಳ ನಾಡು ಪಾಳೆಗಾರರು ನೆಲೆಬೀಡು ಗುಡೇಕೋಟೆಯ ಒನಕೆ ಓಬವ್ವ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಚಯಿಸುವ ಆಸಕ್ತ ಕಲಾವಿದರಿಂದ ಆರ್ಜಿ ಆಹ್ವಾನಿಸಲಾಗಿದೆ ಎಂದು ಕೂಡ್ಲಿಗಿ ತಾಲೂಕು ದಂಡಾಧಿಕಾರಿ ತಹಶೀಲ್ದಾರ್ ಕುಮಾರಿ ವಿ.ಕೆ.ನೇತ್ರಾವತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಗ್ರಾಮದಲ್ಲಿ ದಿನಾಂಕ 31-01-2026 ಮತ್ತು 01-02-2026 ರಂದು ಎರಡು ದಿನಗಳಂದು ನಡೆಯುವ ಸಾಂಸ್ಕೃತಿಕ ಉತ್ಸವಗಳು, ಮೆರವಣಿಗೆ ಕಾರ್ಯಕ್ರಮಗಳಲ್ಲಿ ಸ್ಥಳೀಯ, ಹೊರ ಜಿಲ್ಲೆ ಮತ್ತು ರಾಜ್ಯದವರು ಭಾಗವಹಿಸಬಹುದು. ಆಸಕ್ತ ಕಲಾವಿದರಿಗೆ ಅರ್ಜಿ ಸಲ್ಲಿಸಲು ದಿನಾಂಕ 13-01-2026 ರಿಂದ ದಿನಾಂಕ 20-01-2026 ಸಾಯಂಕಾಲ 5.00 ಗಂಟೆಯವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ನಂತರ ಸಲ್ಲಿಸುವ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಎಂದು ತಹಶೀಲ್ದಾರ್ ಕುಮಾರಿ ವಿ.ಕೆ.ನೇತ್ರಾವತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಜಿಗಳನ್ನು ತಾಲೂಕು ಆಡಳಿತ ಸೌಧ ಕೂಡ್ಲಿಗಿ ಇಲ್ಲಿ ಅರ್ಜಿ ಸಲ್ಲಿಸಲು ಪ್ರಕಟಣೆ ತಿಳಿಸಿದೆ. ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ ಅಜಯ್ 8123302594, ದಯಾನಂದ್ ಸಜ್ಜನ್ 9886972975
ಕೂಡ್ಲಿಗಿ: ನಾಲ್ಕು ದಶಕಗಳ ಕಾಲ ರಾಜಕಾರಣದಲ್ಲಿ ಅಜಾತ ಶತ್ರುವೆಂದೇ ಖ್ಯಾತಿ ಪಡೆದ ವಾಜಪೇಯಿ ಅವರು ದೇಶದ ಅಭಿವೃದ್ದಿಯ ಹರಿಕಾರ, ದೇಶ ಕಂಡ ಹಿರಿಯ ರಾಜಕೀಯ ಮುತ್ಸದ್ದಿ ಎಂದು ಜಿಲ್ಲಾ ಬಿಜೆಪಿ ಮಹಿಳ ಮೋರ್ಚಾ ಕಾರ್ಯದರ್ಶಿ ಹುಲಿಕೆರೆ ಗೀತಾ ಬಣ್ಣಿಸಿದರು. ತಾಲೂಕಿನ ಕಾನಹೊಸಹಳ್ಳಿಯಲ್ಲಿ ಗುರುವಾರ ನಡೆದ ಅಟಲ್ ಬಿಹಾರಿ ವಾಜಪೇಯಿ ಅವರ 101 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅಟಲ್ ಬಿಹಾರಿ ವಾಜಪೇಯಿ ಅವರು ಈ ನಾಡು ಕಂಡ ಅಪರೂಪದ ಜನನಾಯಕ, ಶ್ರೇಷ್ಠ ಸಂಸದೀಯಪಟು, ವಾಗ್ಮಿ, ಕವಿ, ಪ್ರಧಾನಿಯಾಗಿ, ವಿರೋಧ ಪಕ್ಷದ ನಾಯಕರಾಗಿ ಕಾರ್ಯನಿರ್ವಹಿಸಿದ್ದ ವಾಜಪೇಯಿ ಅವರು ತಮ್ಮ ಹಾಸ್ಯಪ್ರಜ್ಞೆ, ಶ್ರೇಷ್ಠ ವ್ಯಕ್ತಿತ್ವ ಮತ್ತು ನಡವಳಿಕೆಗಳಿಂದ ಅಜಾತ ಶತ್ರು ಎಂದೇ ಖ್ಯಾತಿ ಗಳಿಸಿ, ಎಲ್ಲರ ಅಚ್ಚುಮೆಚ್ಚಿನ ನಾಯಕರಾಗಿದ್ದರು ಎಂದರು. ಈ ಸಂಧರ್ಭದಲ್ಲಿ ತಾಲೂಕು ಮಹಿಳಾ ಮೋರ್ಚಾ ಅಧ್ಯಕ್ಷೆ ಶಾರದಾ ಕುಂಬಾರ್, ನೇತ್ರ ಮಂಜುನಾಥ್ ಮುಖoಡರಾದ ಕೆ ಎಸ್ ವಿಶ್ವನಾಥ್ , ರಾಕೇಶ್ , ವಿರೂಪಾಕ್ಷಪ್ಪ, ಸಿದ್ದೇಶ್, ದಾನೇಶ್, ಶಿವಾನಂದ ಸ್ವಾಮಿ,…
