ಕೂಡ್ಲಿಗಿ ; ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷರಾಗಿ ಹುಡೆಂ ಕೃಷ್ಣಮೂರ್ತಿ ಚುನಾವಣಾ ಮೂಲಕ ಆಯ್ಕೆಯಾದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಹುಡೆಂ ಕೃಷ್ಣಮೂರ್ತಿ, ಮಂಜು ಮಯೂರ ಇಬ್ಬರು ನಾಮಪತ್ರ ಸಲ್ಲಿಸಿದ್ದರು. 22 ಮತಗಳ ಪೈಕಿ 12 ಮತಗಳನ್ನು ಪಡೆದು ಹುಡೆಂ ಕೃಷ್ಣಮೂರ್ತಿ ಚುನಾಯಿತರಾದರು. ಉಪಾಧ್ಯಕ್ಷರಾಗಿ ಎ. ಎಂ ಸೋಮಶೇಖರ, ಸುನೀಲ್ ಗೌಡ್ರು, ಪ್ರಧಾನ ಕಾರ್ಯದರ್ಶಿಯಾಗಿ ಎಚ್ ವೀರಣ್ಣ, ಖಜಾಂಜಿಯಾಗಿ ನಾಗರಾಜ್ ಭರಮಪ್ಪನವರ್ , ಕಾರ್ಯದರ್ಶಿಯಾಗಿ ಅಂಗಡಿ ವೀರೇಶ್ ಆಯ್ಕೆಯಾದರು. ಬೆಳ್ಳಗೆ 10:30ಕ್ಕೆ ನಿಗದಿಯಾಗಿದ್ದ ಚುನಾವಣೆಯಲ್ಲಿ ಅವಿರೋಧ ಆಯ್ಕೆಗೆ ಜಿಲ್ಲಾ ಸಮಿತಿ ಪ್ರಯತ್ನಿಸಿತು, ಒಮ್ಮತ ಮೂಡದ ಹೀನೆಲ್ಲೆಯಲ್ಲಿ ಚುನಾವಣ ಘೋಷಣೆಯಾಯಿತು. ಜಿಲ್ಲಾ ಅಧ್ಯಕ್ಷ ಸತ್ಯನಾರಾಯಣ, ರಾಜ್ಯ ಸಮಿತಿ ಸದಸ್ಯ ವೆಂಕೋಬಿ ನಾಯಕ, ಜಿಲ್ಲಾ ಉಪಾಧ್ಯಕ್ಷರಾದ ಉಜ್ಜಿನಿ ರುದ್ರಪ್ಪ, ಸಿ ಕೆ ನಾಗರಾಜ, ಪ್ರಧಾನ ಕಾರ್ಯದರ್ಶಿ ಈ ನಾಡು ವೆಂಕಟೇಶ್, ಕಾರ್ಯದರ್ಶಿಗಳಾದ ಕೆ ಸುರೇಶ್ ಚವಾಣ್, ಸಂಜಯ್ ಚುನಾವಣಾ ನಡೆಸಿಕೊಟ್ಟರು. ಆಯ್ಕೆಯಾದ ಅಧ್ಯಕ್ಷ, ಉಪಾಧ್ಯಕ್ಷ…
Author: Team Sanchalana
ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರು ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ (94) ಅವರು ಇಂದು (ಭಾನುವಾರ) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ವಯೋ ಸಹಜ ಆರೋಗ್ಯ ಸಮಸ್ಯೆಗಳ ಕಾರಣದಿಂದ ಶಾಮನೂರು ಶಿವಶಂಕರಪ್ಪ ಅವರನ್ನು ಕಳೆದೊಂದು ತಿಂಗಳಿನಿಂದ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ಮುಖ್ಯಮಂತ್ರಿ ಸೇರಿದಂತೆ ರಾಜ್ಯದ ಅನೇಕ ಹಿರಿಯ ನಾಯಕರು ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದರು. ರಾಜ್ಯ ರಾಜಕಾರಣ ಹಾಗೂ ವೀರಶೈವ ಸಮುದಾಯದ ಪ್ರಮುಖ ನಾಯಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ತೀವ್ರ ಸಂತಾಪ ವ್ಯಕ್ತವಾಗಿದೆ. ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ ಅಜಯ್ 8123302594, ದಯಾನಂದ್ ಸಜ್ಜನ್ 9886972975
ಕೂಡ್ಲಿಗಿ; ತಾಲೂಕಿನ ಕಾನಹೊಸಹಳ್ಳಿ ಪಟ್ಟಣದಲ್ಲಿ ಲಾರಿ ಹರಿದು ಅಪರಿಚಿತ ವ್ಯಕ್ತಿ ಮೃತಪಟ್ಟಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ಪಟ್ಟಣದ ಹುಲಿಕೆರೆ ರಸ್ತೆಯಲ್ಲಿ ರಸ್ತೆ ಪಕ್ಕದಲ್ಲಿ ನಡೆದು ಬರುತ್ತಿದ್ದ ವ್ಯಕ್ತಿಯ ತಲೆಯ ಮೇಲೆ ಲಾರಿಯ ಹಿಂಬದಿ ಗಾಲಿ ಹರಿದಿದ್ದು, ತಲೆಯ ಭಾಗ ಪೂರ್ತಿಯಾಗಿ ಗುರುತು ಸಿಗದ ರೀತಿಯಾಗಿದೆ. ಪೊಲೀಸರು ಲಾರಿಯನ್ನು ವಶಕ್ಕೆ ಪಡೆದು, ವ್ಯಕ್ತಿಯ ಗುರುತು ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ. ಪಿಎಸ್ಐ ಸಿದ್ದರಾಮಪ್ಪ ಬಿದರಾಣಿ ಅವರು ಮೃತ ದೇಹವನ್ನು ಸ್ವತಃ ಅವರೇ ಗೂಡ್ಸ್ ವಾಹನಕ್ಕೆ ಹಾಕುವ ಮೂಲಕ ಮಾನವೀಯತೆ ಮೆರೆದರು. ಕಾನಹೊಸಹಳ್ಳಿಯ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ಮೃತ ದೇಹ ಇರಸಲಾಗಿದೆ. ಮತಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗಿದೆ. ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ ಅಜಯ್ 8123302594, ದಯಾನಂದ್ ಸಜ್ಜನ್ 9886972975
ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಟಿ. ಕಲ್ಲಹಳ್ಳಿ,ಮಾಳೇಹಳ್ಳಿ ಗ್ರಾಮದಲ್ಲಿ ಭೂಮಿ ಕಂಪಿಸಿದ ಅನುಭವವಾಗಿರುವ ಘಟನೆ ಶನಿವಾರ ರಾತ್ರಿ 7:30 ರ ವೇಳೆ ನಡೆದಿದೆ. ಒಮ್ಮೇಲೆ ಧಿಡೀರ್ ಸದ್ದು ಬಂದಿದ್ದು, ಕ್ಷಣಕಾಲ ಭೂಮಿ ಕಂಪಿಸಿದ ಅನುಭವವಾಗಿದ್ದು, ಮನೆಯಲಿರುವ ಪಾತ್ರೆ, ತಟ್ಟೆಗಳು ಚಲ್ಲಪಿಲ್ಲಿಯಾಗಿವೆ. ಗಡಿಗೆ ಹೊಂದಿಕೊಂಡಿರುವ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಚಿಕ್ಕಮನಲ್ಲನ ಹೊಳೆ, ಚಿತ್ರದುರ್ಗ ಜಿಲ್ಲೆಯ ತೊರೆ ಕೊಲಮ್ಮನ ಹಳ್ಳಿಯಲ್ಲಿಯೂ ಕಂಪಿಸಿದ ಅನುಭವವಾಗಿದೆ. ಕೂಡಲೇ ಭಯಗೊಂಡ ಜನತೆ ಮನೆಯಿಂದ ಹೊರಗೆ ಓಡಿ ಬಂದಿದ್ದು, ಯಾವುದೇ ಅನುಹುತ ಸಂಭವಿಸಿಲ್ಲ. ರಿಕ್ಟರ್ ಮಾಪಕದಲ್ಲಿ ಯಾವುದೇ ಅಂಶ ದಾಖಲಾಗಿಲ್ಲ. ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ ಅಜಯ್ 8123302594, ದಯಾನಂದ್ ಸಜ್ಜನ್ 9886972975
ಕೂಡ್ಲಿಗಿ ತಾಲೂಕಿನ ಬಣವಿಕಲ್ಲು ಬಳ್ಳಿ ಶುಕ್ರವಾರ ಬೆಳಗಿನ ಜಾವಾ ಈಶರ್ ಗಾಡಿಗೆ ಲಾರಿ ಗುದ್ದಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟಿದ್ದಾರೆ. ಗದಗ ಮೂಲದ ರೈತ ರಂಗಪ್ಪ, ಚಾಲಕ ಗಣೇಶ್ ಮೃತರು, ಗದಗದಿಂದ ಬೆಳೆದ ಉಳ್ಳಾಗಡ್ಡಿ ಬೆಳೆಯನ್ನು ಯಲಹಂಕಕ್ಕೆ ಮಾರಾಟಕ್ಕೆ ಕೊಂಡೋಯ್ಯುತ್ತಿದ್ದ ರೈತ ರಂಗಪ್ಪ, ಮತ್ತು ಚಾಲಕ ಗಣೇಶ್, ಈಶರ್ ಗಾಡಿಯ ಟೈಯರ್ ಬ್ಲಾಸ್ಟ್ ಆದ ಕಾರಣ, ಇಳಿದು ನೋಡುತ್ತಿದ್ದಾಗ ಅವಘಡ ಜರುಗಿದೆ. ಹಿಂಬದಿಯಿಂದ ಬಂದ ಲಾರಿ ಗುದ್ದಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಸ್ಥಳ್ಳಕ್ಕೆ ಕಾನಾಹೊಸಳ್ಳಿ ಪಿಎಸ್iಐ ಸಿದ್ರಾಮಪ್ಪ ಬಿದರಾಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೂಡ್ಲಿಗಿ; ತಾಲೂಕಿನ ಹಾರಕಭಾವಿ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘಕ್ಕೆ ಮಂಗಳವಾರ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ರಮೇಶ್ ಎಚ್, ಉಪಾಧ್ಯಕ್ಷರಾಗಿ ಗೋಲಾರ ಸಿದ್ದಪ್ಪ ಆಯ್ಕೆಯಾದರು, ಮಂಗಳವಾರ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ 12 ನಿರ್ದೇಶಕರ ಪೈಕಿ ಅಧ್ಯಕ್ಷ ಸ್ಥಾನಕ್ಕೆ ರಮೇಶ್ ಎಚ್, ಉಪಾಧ್ಯಕ್ಷ ಸ್ಥಾನಕ್ಕೆ ಗೋಲಾರ ಸಿದ್ದಪ್ಪ ಹೊರತಾಗಿ ಬೇರೆ ಯಾರು ನಾಮಪತ್ರ ಸಲ್ಲಿಸದೇ ಇದದ್ದರಿಂದ ಚುನಾವಣಾಧಿಕಾರಿ ನಾಗರಾಜ್ ಇಬ್ಬರ ಆಯ್ಕೆಯನ್ನು ಅವಿರೋಧವಾಗಿ ಘೋಷಿಸಿದರು. ಸಹಾಯಕ ಚುನಾವಣಾಧಿಕಾರಿಯಾಗಿ ಮಂಜುನಾಥ್ ಕಾರ್ಯನಿರ್ವಹಿಸಿದರು. ನಿರ್ದೇಶಕರಾದ ಎಸ್ ಜಾತಪ್ಪ, ಪಿ ಅಜಯ, ನಾಗೇಂದ್ರಪ್ಪ, ಸಿ ಈಶ್ವರಪ್ಪ, ತಿಪ್ಪೇಸ್ವಾಮಿ, ಕೊಟ್ರೇಶ್ ಎಸ್, ಹಂಪಣ್ಣ, ಡಿ ಶೃತಿ ಪ್ರಕಾಶ್, ಗೌರಮ್ಮ ಮದನಪ್ಪ , ಮೋಗಪ್ಪ, ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಎಂ ತಿಪ್ಪೇಸ್ವಾಮಿ ಹಾಜರಿದ್ದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಕೋಟಿಲಿಂಗನಗೌಡ, ಮಾಜಿ ಉಪಾಧ್ಯಕ್ಷ ಡಿ ಶೇಖರಪ್ಪ ಮುಖಂಡರಾದ ರಮೇಶ್ ಗೌಡ, ಟಿ ಜಿ ಮಲ್ಲಿಕಾರ್ಜುನ ಗೌಡ, ಎಂ ಬಿ ಅಯ್ಯನಹಳ್ಳಿ ಅಜ್ಜನಗೌಡ, ಕಾನಹೊಸಹಳ್ಳಿ…
ಕೂಡ್ಲಿಗಿ ; ಶಾಲೆಗಳು ಧಾರ್ಮಿಕ ಕೇಂದ್ರಗಳಾಗದೆ, ಮಕ್ಕಳಲಿ ವೈಜ್ಞಾನಿಕ ಚಿಂತನೆಗಳನ್ನು ಬೆಳೆಸುವ ಕೇಂದ್ರಗಳಾಗಲಿ ಎಂದು ಶಾಸಕ ಡಾ ಶ್ರೀನಿವಾಸ್ ಎನ್ ಟಿ ಹೇಳಿದರು. ತಾಲೂಕಿನ ಕಾನಹೊಸಹಳ್ಳಿಯ ವಿದ್ಯಾನಿಕೇತನ ಶಾಲಾ ಆವರಣದಲ್ಲಿ ಶಿಕ್ಷಣ ಇಲಾಖೆ ವತಿಯಿಂದ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಮಂಗಳವಾರ ಚಾಲನೆ ನೀಡಿ ಅವರು ಮಾತನಾಡಿದರು. ಸಮಾಜದಲ್ಲಿ ನಡೆಯುತ್ತಿರುವ ಕೆಲ ಘಟನೆಗಳು ಮಕ್ಕಳ ಮೇಲೆ ಪರಿಣಾಮ ಬೀರುತ್ತಿವೆ, ಇವುಗಳು ಆಗಬಾರದು ಎಂದರೆ ವೈಜ್ಞಾನಿಕ ಚಿಂತನೆ ಅಗತ್ಯವಾಗಿದೆ. ಮಕ್ಕಳ ನಮ್ಮಂತೆ ಆಗಬಾರದು ಉತ್ತಮ ಪ್ರಜೆಗಳಾಗಬೇಕು. ಈ ನಿಟ್ಟಿನಲ್ಲಿ ಕ್ಷೇತ್ರದಲ್ಲಿ ೭ ಕೆಪಿಎಸ್ಸಿ ಶಾಲೆಗಳನ್ನು ಮಂಜೂರು ಮಾಡಲಾಗಿದೆ , ಅದರ ಮೂಲಕ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಶಿಕ್ಷಣ ದೊರಯಲಿದೆ ಎಂದರು. ಸಹಾಯಕ ಆಯುಕ್ತರಾದ ವಿವೇಕಾನಂದ ಮಾತನಾಡಿ, ಸರ್ಕಾರಿ ಶಾಲಾ- ಹಾಸ್ಟೇಲ್ಗಳಲ್ಲಿ ಇತ್ತೀಚೆಗೆ ಗುಣಮಟ್ಟ ಹೆಚ್ಚಾಗಿದೆ. ಈ ಭಾಗದಲ್ಲಿ ಶಿಕ್ಷಣ ಆರೋಗ್ಯಕ್ಕೆ ಒತ್ತು ನೀಡಲಾಗಿದೆ , ಸೀಟ್ ಬೇಡಿಕೆ ಹೆಚ್ಚಿಸಲು ಶಾಸಕ ಶ್ರೀನಿವಾಸ್ ಹೇಳಿದ್ದರು, ಅದರಂತೆ ಮಾಡಲಾಗಿದೆ ಎಂದ ಅವರು,…
ಕೂಡ್ಲಿಗಿ ತಾಲೂಕಿನ ಕಾನಹೊಸಹಳ್ಳಿಯ ಬಾಲಕಿಯರ ವಸತಿ ನಿಲಯಕ್ಕೆ ತಹಶೀಲ್ದಾರ್ ನೇತ್ರಾವತಿ ವಿ ಕೆ ಅವರು ಸೋಮವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.ವಿದ್ಯಾರ್ಥಿಗಳೊಂದಿಗೆ ಮಾತನಾಡಿ, ಕುಂದುಕೊರತೆ ವಿಚಾರಿಸಿದರು. ಸಮಯ ವ್ಯರ್ಥ ಮಾಡದೆ ಉತ್ತಮವಾಗಿ ವ್ಯಾಸಂಗ ಮಾಡಬೇಕೆಂದು ಕಿವಿಮಾತು ಹೇಳಿದರು. ವಸತಿ ನಿಲಯದಲ್ಲಿ ವಿದ್ಯಾರ್ಥಿಗಳಿಗೆ ಮೂಲಭೂತವಾಗಿ ಇರಬೇಕಾದ ಸೌಕರ್ಯಗಳು, ಆಹಾರದ ಗುಣಮಟ್ಟ, ಶೌಚಾಲಯಗಳ ಶುಚಿತ್ವದ ಬಗ್ಗೆ ಅವರು ಪರಿಶೀಲಿಸಿದ ನಂತರ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ನೀಡಬೇಕು. ಅವರ ಆರೋಗ್ಯದ ಕಡೆಗೆ ಗಮನಹರಿಸಬೇಕು. ಸ್ವಚ್ಛತೆ ಕಡೆಗೆ ಹೆಚ್ಚಿನ ಗಮನ ಹರಿಸಬೇಕು. ವಸತಿ ನಿಲಯದಲ್ಲಿರುವ ಸಣ್ಣ ಪುಟ್ಟ ನ್ಯೂನತೆಗಳನ್ನು ಸರಿಪಡಿಸಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ ಅಜಯ್ 8123302594, ದಯಾನಂದ್ ಸಜ್ಜನ್ 9886972975
ಕೂಡ್ಲಿಗಿ ; ಬಯಲುಸೀಮೆಯ ಶಿಕ್ಷಣಕಾಶಿ ಎಂದೇ ಪ್ರಸಿದಿಯಾದ ತಾಲೂಕಿನ ಕಾನಮಡಗು ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ಭಾನುವಾರ ಸಂಜೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಶ್ರದ್ಧಾ, ಭಕ್ತಿಯಿಂದ ಸಂಭ್ರಮದಿಂದ ನೆರವೇರಿತು. ಶರಣಬಸವೇಶ್ವರರ ಸ್ವಾಮಿಯ ಉತ್ಸವ ಮೂರ್ತಿಯನ್ನು ದೇವಸ್ಥಾನದಿಂದ ಸಕಲ ಪೂಜಾವಿಧಿ ವಿಧಾನಗಳೊಂದಿಗೆ ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ರಥ ಮುಂದೆ ಸಾಗುತ್ತಿದಂತೆ ಭಕ್ತರು ಜಯಘೋಷ ಹಾಕಿ, ಬಾಳೆಹಣ್ಣು, ಉತ್ತತ್ತಿ ಎಸೆದು ಭಕ್ತಿ ಸಮರ್ಪಿಸಿದರು. ಧರ್ಮಾಧಿಕಾರಿ ಐಮಡಿ ಶರಣಾರ್ಯರು, ಚನ್ನಗಿರಿಯ ಕೇದಾರಲಿಂಗ ಶಿವಾಚಾರ್ಯ ಸ್ವಾಮೀಜಿ, ಕೂಡ್ಲಿಗಿ ಹಿರೇಮಠದ ಪ್ರಶಾಂತ ಸಾಗರ ಸ್ವಾಮೀಜಿ ನೇತೃತ್ವದಲ್ಲಿ ರಥಕ್ಕೆ ಪೂಜೆ ಸಲ್ಲಿಸಲಾಯಿತು. ರಥದ ಮುಕ್ತಿಪಠವನ್ನು ₹ 1,01101 ಲಕ್ಷಕ್ಕೆ ಮೆಟ್ರಿಕುರ್ಕಿ ತಿಪ್ಪೇಸ್ವಾಮಿ ಹರಾಜಿನಲ್ಲಿ ಪಡೆದುಕೊಂಡರು. ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಹಾಗೂ ನೆರೆಯ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ಸಾವಿರಾರು ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು. ಕಾರ್ತಿಕ ಮಾಸದಲ್ಲಿ ರಥೋತ್ಸವ ನಡೆಯವುದು ಇಲ್ಲಿನ ವಿಶೇಷವಾಗಿದ್ದು, ರಥೋತ್ಸವಕ್ಕೂ ಮುನ್ನ ಮಠದ ಆವರಣದಲ್ಲಿ ರಕ್ತದಾನ, ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಲಾಗಿತ್ತು. ಕೊಟ್ಟೂರು ಸಿಪಿಐ ದುರುಗಪ್ಪ, ಪಿಸ್ಐ ಸಿದ್ರಾಮಪ್ಪ ಬಿದಾರಾಣಿ…
ಕೂಡ್ಲಿಗಿ: ಕ್ಷೇತ್ರದ ಜನರಲ್ಲಿನ ಮೌಡ್ಯತೆ ಹಾಗೂ ಶಿಕ್ಷಣದ ಕೊರತೆಯನ್ನು ದೂರಮಾಡಲು ಪೂಜಾರಹಳ್ಳಿ ಸೇರಿದಂತೆ ಕ್ಷೇತ್ರದಲ್ಲಿ ೩ ಕೆಪಿಎಸ್ಸಿ ಶಾಲೆಗಳನ್ನು ಮಂಜೂರು ಮಾಡಲಾಗಿದೆ ಎಂದು ಶಾಸಕ ಡಾ ಶ್ರೀನಿವಾಸ್ ಎನ್ ಟಿ ಹೇಳಿದರು. ತಾಲೂಕಿನ ಪೂಜಾರಹಳ್ಳಿಯಲ್ಲಿ ಮನೆ ಮನೆಗು ಶಾಸಕರು, ಮನೆ ಬಾಗಿಲಿಗೆ ಶಾಸಕರು ಕಾರ್ಯಕ್ರಮಕ್ಕೆ ಶುಕ್ರವಾರ ಚಾಲನೆ ನೀಡಿ ಅವರು ಮಾತನಾಡಿದರು. ಶಿಕ್ಷಣದ ಕೊರತೆಯಿಂದಾಗಿ ನಮ್ಮ ಭಾಗದಲ್ಲಿ ಬಾಲ್ಯ ವಿವಾಹ ಹಾಗೂ ಪೋಕ್ಸೊ ಪ್ರಕರಣಗಳು ಹೆಚ್ಚಾಗಿವೆ ಇವುಗಳನ್ನ ಮನಃಗಂಡು ಕ್ಷೇತ್ರದಲ್ಲಿ ಕೆಪಿಎಸ್ಸಿ ಶಾಲೆಗಳ ತೆರೆಯಲು ಅಧಿವೇಶನದಲ್ಲಿ ಧ್ವನಿ ಎತ್ತಿದ್ದೆ, ಕೂಡಲೇ ಶಿಕ್ಷಣ ಸಚಿವರ ನೇತೃತ್ವದಲ್ಲಿ ಸಭೆ ಕರೆದು ರಾಜ್ಯದಾದ್ಯಾಂತ ಶಾಲೆಗಳನ್ನು ಮಂಜೂರು ಮಾಡಿದೆ ಎಂದರು. ರಸ್ತೆ, ಚರಂಡಿ ಅಭಿವೃದ್ದಿ ಕಾರ್ಯಗಳು ತಾತ್ಕಾಲಿಕ ಅಷ್ಟೇ, ಕ್ಷೇತ್ರದ ಜ್ವಲಂತ ಸಮಸ್ಯೆಗಳಿಂದ ಮುಕ್ತಿಯಾಗಬೇಕಾದರೆ ನೀರು ಮತ್ತು ವಿದ್ಯುತ್ ಪೂರೈಕೆ ಶಾಶ್ವತ ಪರಿಹಾರ ಈ ನಿಟ್ಟಿನಲ್ಲಿ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಮೂಲಕ ಮಹತ್ತರ ಯೋಜನೆ ಜಾರಿಗೆ ತರಲಾಗಿದೆ. ತಿಪ್ಪೇಹಳ್ಳಿ ಕೆರೆ ಅಭಿವೃದ್ದಿಗೆ ೨…
