ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮಹಾಂತೇಶ್ ಬೀಳಗಿ ಅವರು ವಿಜಯಪುರದಿಂದ ಕಲಬುರಗಿಗೆ ತಮ್ಮ ಇನ್ನೋವಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಗೌನಹಳ್ಳಿ ಬಳಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದರು. ಬೀಳಗಿ ಅವರೊಂದಿಗೆ ಕಾರಿನಲ್ಲಿದ್ದ ಒಟ್ಟು ಮೂವರು ಈ ದುರ್ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಮಹಾಂತೇಶ್ ಬೀಳಗಿ ಅವರು 2012ರ ಕರ್ನಾಟಕ ಕೆಡರ್ನ ಐಎಎಸ್ ಅಧಿಕಾರಿಯಾಗಿದ್ದರು. ಕೆಎಸ್ಎಂಸಿಎಲ್ ಎಂಡಿ ಆಗುವ ಮೊದಲು ಅವರು ಬೆಸ್ಕಾಂ ಎಂಡಿ ಆಗಿಯೂ ಕಾರ್ಯನಿರ್ವಹಿಸಿದ್ದರು.
Author: Team Sanchalana
ಕೂಡ್ಲಿಗಿ ತಾಲೂಕಿನ ಕಾನಹೊಸಹಳ್ಳಿ ಪಟ್ಟಣದ ವೈಭವ ಶಾಲಾ ಆವರಣದಲ್ಲಿ ಕವಿರಾಜ್ ಅಕಾಡೆಮಿ ಹಾಗೂ ವೈಭವ ಶಾಲಾ ವತಿಯಿಂದ ಮಕ್ಕಳಿಗೆ ಅಭಕಾಸ್ ವೇದಿಕ್ ಗಣಿತ ಚಾಂಪಿಯನ್ ಟ್ರೋಫಿ ಪರೀಕ್ಷೆ ನಡೆಯಿತು. ವಿಜೇತರಾದವರಿಗೆ ಪ್ರಶಸ್ತಿ ವಿತರಿಸಲಾಯಿತು. ವಿದ್ಯಾ ಸಂಸ್ಥೆಯ ಕಾರ್ಯದಲ್ಲಿ ಮುರುಳಿಧರ್ ಮಾತನಾಡಿ, ಗಣಿತ ಎಂದರೆ ಒಂದು ಕಾಲದಲ್ಲಿ ಕಬ್ಬಿಣದ ಕಡಲೆ ಯಾಗಿತ್ತು, ಆದರೆ ಈಗ ಮಕ್ಕಳು ಎಷ್ಟು ಸುಲಲಿತವಾಗಿ ಗಣಿತದಲ್ಲಿ ಪರಿಣಿತರಾಗಿದ್ದಾರೆ ನೊಡಿದರೆ ಖುಷಿಯಾಗುತ್ತದೆ ಎಂದರು. ಪ್ರದೀಪ್, ಶಿಲ್ಪ, ದಂಪತಿಗಳಿಬ್ಬರು ಅಭಕಾಸ್ ವೇದಿಕ್ ನಲ್ಲಿ ಅವರೇ ತಯಾರಿಸಿದ ವಿಶೇಷ ಸಾಧನೆ ಮೂಲಕ ಮಕ್ಕಳಿಗೆ ಗಣಿತವನ್ನು ಸುಲಭವಾಗಿ ಕಲಿಯುವ ಹಾಗೆ ಮಾಡಿದ್ದಾರೆ. ಇಂದು ವಿಜೇತರಾದ ಮಕ್ಕಳಿಗೆ ಟ್ರೋಪಿ ಹಾಗೂ ಪ್ರಶಸ್ತಿ ಪತ್ರ ವಿತರಣಾ ಕಾರ್ಯಕ್ರಮ ಇಟ್ಟುಕೊಳ್ಳಲಾಗಿದೆ ಎಂದರು. ಇದೇ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕ ರಮೇಶ್ ಗೌಡ, ಇಂದು ಕಾಲೇಜ್ ನ ಪ್ರಾಂಶುಪಾಲ ಜಾತಪ್ಪ ಹಾಗೂ ಶಿಕ್ಷಕರಾದ ಚೇತನ್ ಕುಮಾರ್, ಪ್ರಸನ್ನ ಹಾಗೂ ಕವಿರಾಜ್ ಅಭಕಾಸ್ ಅಕಾಡೆಮಿಯ ಸಂಸ್ಥಾಪರಾದ ಪ್ರದೀಪ್, ಶಿಲ್ಪಾ ಸೇರಿದಂತೆ ಇತರರು…
ಕೂಡ್ಲಿಗಿ ತಾಲೂಕಿನ ಕಾನಹೊಸಹಳ್ಳಿ ಪಟ್ಟಣದ ಕಾಳಿದಾಸ ಹಿರಿಯ ಪ್ರಾಥಮಿಕ ಹಾಗೂ ವೈಭವ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ರಾಜ್ಯ ಮಟ್ಟದ ಶಿಕ್ಷಣ ಚೈತನ್ಯ ಪ್ರಶಸ್ತಿಗೆ ಭಾಜನವಾಗಿದ್ದು, ಭಾನುವಾರ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಿದ್ದಾರೆ. ವೈಭವ ಶಾಲೆಯ ವಾತಾವರಣ, ಶಿಕ್ಷಣದ ಗುಣಮಟ್ಟ ಹಾಗೂ ಶಿಕ್ಷಕರ ಗುಣಮಟ್ಟವನ್ನು ಆಧರಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಿದ್ದು, ಸ್ವಾರ್ಥ ಅಕಾಡೆಮಿ ಹಾಗೂ ಸೂರ್ಯ ಫೌಂಡೇಶನ್ ವತಿಯಿಂದ ಭಾನುವಾರ, ಬೆಂಗಳೂರಿನ ಶಿಕ್ಷಕರ ಸದನದಲ್ಲಿ ವೈಭವ ವಿದ್ಯಾ ಸಂಸ್ಥೆ ಯ ಶಿಕ್ಷಕ ವೃಂದಕ್ಕೆ ಪ್ರಶಸ್ತಿಯನ್ನು ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಮುಖ್ಯ ಶಿಕ್ಷಕ ಪ್ರಕಾಶಗೌಡ, ಮಲ್ಲೇಶ್, ಕಂಪಳೇಶ್, ಬಸವರಾಜ್, ತಿಪ್ಪೇಸ್ವಾಮಿ, ಮಂಜುನಾಥ, ಹೇಮಂತ್ ಕುಮಾರ್, ನಂದೀಶ್ ಗೌಡ, ಅಪರ್ಣ, ಬಸವರಾಜ್, ಚೌಡಪ್ಪ, ಓಮೇಶ್,ಸೇರಿದಂತೆ ಇತರರಿದ್ದರು. ನಮ್ಮ ಶಿಕ್ಷಣ ಸಂಸ್ಥೆ ಗೆ ಪ್ರಶಸ್ತಿ ಬಂದಿರುವುದು ತುಂಬಾ ಸಂತಸ ತಂದಿದೆ ಎಂದು ವಿದ್ಯಾ ಸಂಸ್ಥೆ ಯ ಕಾರ್ಯದರ್ಶಿ ಮುರುಳಿಧರ್ ಸಂತಸ ವ್ಯಕ್ತಪಡಿಸಿದರು. ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ ಅಜಯ್ 8123302594, ದಯಾನಂದ್ ಸಜ್ಜನ್ 9886972975
ಕೂಡ್ಲಿಗಿ: ಬೈಕ್ ಹಿಂಬದಿಗೆ ಮತ್ತೊಂದು ಬೈಕ್ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ಕೂಡ್ಲಿಗಿ ಪಟ್ಟಣದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ನಡೆದಿದೆ. ಕೂಡ್ಲಿಗಿಯ 16 ನೇ ವಾರ್ಡಿನ ಕುಂಬಾರ ಓಣಿಯ ಮಜಾರ್(30) ಹಾಗೂ ಹಗರಿಬೊಮ್ಮನಹಳ್ಳಿ ತಾಲೂಕಿನ ಕಲ್ಲಹಳ್ಳಿ ತಾಂಡಾದ ಮಹೇಶ್(26) ಮೃತಪಟ್ಟ ಸವಾರರಾಗಿದ್ದು. ಪಟ್ಟಣದ ಹೊರ ವಲಯದಲ್ಲಿ ಮ್ಯಾಕನಿಕ್ ಶಾಪ್ ನಡೆಸುತ್ತಿದ್ದ ಮಜಾರ್ ತನ್ನ ಬೈಕಿನಲ್ಲಿ ಹೆದ್ದಾರಿ-50ರ ಕೊಟ್ಟೂರು ಬೈಪಾಸ್ ರಸ್ತೆಯ ಮುಖಾಂತರ ಹೋಗುತ್ತಿದ್ದಾಗ, ಚಿತ್ರದುರ್ಗ ಕಡೆಯಿಂದ ಸರ್ವಿಸ್ ರಸ್ತೆಯ ಮುಖಾಂತರ ಅತಿ ವೇಗ ಹಾಗೂ ಅಜಾಗಾರುಕತೆಯಿಂದ ತನ್ನ ಬೈಕ್ ಚಾಲನೆ ಮಾಡಿಕೊಂಡ ಬಂದ ಮಹೇಶ ಮಜಾರ್ ನ ಬೈಕ್ ಹಿಂಬದಿಗೆ ಡಿಕ್ಕಿಹೊಡೆಸಿದ್ದಾನೆ. ಇದರಿಂದ ಮಜಾರ್ ಸ್ಥಳದಲ್ಲೇ ಮೃತಪಟ್ಟಿದ್ದು, ತೀವ್ರವಾಗಿ ಗಾಯಗೊಂಡಿದ್ದ ಮಹೇಶ ಬಳ್ಳಾರಿ ಬೀಮ್ಸ್ ಗೆ ಹೋಗುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾನೆ. ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ ಅಜಯ್ 8123302594, ದಯಾನಂದ್ ಸಜ್ಜನ್ 9886972975
ಕೂಡ್ಲಿಗಿ ತಾಲೂಕಿನ ಬಯಲುತುಂಬರಗುದ್ದಿ ಗ್ರಾಮದ ಆಯುಷ್ಮಾನ್ ಆರೋಗ್ಯಕೇಂದ್ರದಿಂದ “ಆಯುಷ್ಮಾನ್ ಅರೋಗ್ಯ ಮಂದಿರದಲ್ಲಿ ಆರೋಗ್ಯ ಶಿಬಿರ” ಯೋಜನೆಯಡಿ ಗ್ರಾಮಸ್ಥರ ಆರೋಗ್ಯ ತಪಾಸಣೆ ನಡೆಸಲಾಯಿತು. ಮದುಮೇಹ, ರಕ್ತದೊತ್ತಡ, ಕ್ಷಯರೋಗ, ಕ್ಯಾನ್ಸರ್ ಕಾಯಿಲೆ ಸ್ಕ್ರೀನಿಂಗ್ ಮತ್ತು ಮುಂಜಾಗ್ರತಾ ಮಾಹಿತಿ, ಅನಿಮಿಯಾ ತಪಾಸಣೆ ಹಾಗೂ ಆರೋಗ್ಯ ಶಿಕ್ಷಣದ ಜತೆಗೆ ಉಚಿತ ಔಷಧ ವಿತರಣೆ ಮಾಡಲಾಯಿತು. ನಂತರ ಕೇಂದ್ರದಲ್ಲಿ ದೊರೆಯುವ ಸೇವೆಗಳ ಬಗ್ಗೆ ಮಾಹಿತಿ ನೀಡಲಾಯಿತು. ಸಮುದಾಯ ಆರೋಗ್ಯಧಿಕಾರಿ ನೀಲಾವತಿ ಎಸ್ ಮಾತನಾಡಿ, ಆಯುಷ್ಮಾನ್ ಆರೋಗ್ಯ ಕೇಂದ್ರದಿಂದ ಆರೋಗ್ಯ ತಪಾಸಣಾ ಮಾಡಿ ಕೆಲೆ ಕಾಯಿಲೆಗಳಿಗೆ ಸ್ಥಳದಲೇ ಔಷಧಿ ವಿತರಿಸಲಾಗುತ್ತಿದ್ದು ಜತೆಗೆ ನಮ್ಮ ಕೇಂದ್ರದಲ್ಲಿ ದೊರೆಯುವ ಔಷಧಿ ಮತ್ತು ಸೇವೆಗಳನ್ನು ಜನತೆ ಸದುಪಯೋಗ ಪಡೆಸಿಕೊಳ್ಳಬೇಕಿದೆ ಎಂದ ಅವರು, ಇಲ್ಲಿ ತಪಾಸಣಾ ವೇಳೆ ಗಂಭೀರ ಕಾಯಿಲೆಗಳು ಕಂಡು ಬಂದಲ್ಲಿ ಹೆಚ್ಚಿನ ಚಿಕಿತ್ಸೆಗೆ ಕಳುಹಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರಾದ ಗೀತಾ, ಶಿವಗಂಗ, ವೀಣಾ ಸೇರಿದಂತೆ ಗ್ರಾಮಸ್ಥರು ಭಾಗಿಯಾಗಿದ್ದರು. ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ ಅಜಯ್ 8123302594, ದಯಾನಂದ್ ಸಜ್ಜನ್ 9886972975
ರಸ್ತೆ ಬದಿಯಲ್ಲಿ ಮರಗಳನ್ನು ನೆಟ್ಟು ಪೋಷಿಸುವ ಮೂಲಕ ‘ವೃಕ್ಷಮಾತೆ’ ಎಂದೇ ಖ್ಯಾತಿ ಪಡೆದಿದ್ದ ಸಾಲುಮರದ ತಿಮ್ಮಕ್ಕ ಅವರು ಇಂದು (ನವೆಂಬರ್ 14) ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಬಹುಅಂಗಾಂಗ ವೈಫಲ್ಯದಿಂದಾಗಿ 114ನೇ ವಯಸ್ಸಿನಲ್ಲಿನಿಧನರಾಗಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ಜೂನ್ 30, 1911 ರಂದು ಜನಿಸಿದ್ದ ಅವರು, ಮರ-ಗಿಡಗಳನ್ನು ತಮ್ಮ ಮಕ್ಕಳಂತೆಯೇ ಪ್ರೀತಿಸಿ, ಪರಿಸರಕ್ಕೆ ಅಪ್ರತಿಮ ಕೊಡುಗೆ ನೀಡಿದ್ದರು. 🎖️ ಪ್ರಮುಖ ಪ್ರಶಸ್ತಿಗಳು ಮತ್ತು ಗೌರವಗಳು ಪರಿಸರ ಸಂರಕ್ಷಣೆಗೆ ತಿಮ್ಮಕ್ಕ ಅವರು ಸಲ್ಲಿಸಿದ ಮಹತ್ತರ ಸೇವೆಯನ್ನು ಗುರುತಿಸಿ, ಅವರಿಗೆ ಈ ಕೆಳಗಿನ ಪ್ರಮುಖ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ: ವರ್ಷ ಪ್ರಶಸ್ತಿ/ಗೌರವ ನೀಡಿದ ಸಂಸ್ಥೆ/ಉಲ್ಲೇಖ 2019 ಪದ್ಮಶ್ರೀ ಪ್ರಶಸ್ತಿ ಭಾರತ ಸರ್ಕಾರ 2020 ಡಾಕ್ಟರೇಟ್ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ 1995 ರಾಷ್ಟ್ರೀಯ ಪೌರ ಪ್ರಶಸ್ತಿ 1997 ಇಂದಿರಾ ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿ 2006 ಗಾಡ್ಫ್ರಿ ಫಿಲಿಪ್ಸ್ ಧೀರತೆ ಪ್ರಶಸ್ತಿ 2000 ಕರ್ನಾಟಕ ಕಲ್ಪವಲ್ಲಿ ಪ್ರಶಸ್ತಿ – ನಾಡೋಜ ಪ್ರಶಸ್ತಿ – ರಾಜ್ಯೋತ್ಸವ ಪ್ರಶಸ್ತಿ…
ರಾಜ್ಯದ ವಿವಿಧ ಭಾಗಗಳಲ್ಲಿ ಕಬ್ಬು ಬೆಳೆಗಾರರ ಹೋರಾಟ ತೀವ್ರಗೊಂಡಿದೆ. ಕಬ್ಬಿಗೆ ಪ್ರತಿ ಟನ್ಗೆ ₹3,500 ದರ ನಿಗದಿ ಮಾಡುವಂತೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮಹಾಲಿಂಗಪುರ ಬಳಿ ರೈತರ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದೆ. ಸೈದಾಪುರ ಸಕ್ಕರೆ ಕಾರ್ಖಾನೆ ಆವರಣದ ಬಳಿ ರೊಚ್ಚಿಗೆದ್ದ ರೈತರು ಕಬ್ಬು ತುಂಬಿದ 50ಕ್ಕೂ ಹೆಚ್ಚು ಟ್ರ್ಯಾಕ್ಟರ್ಗಳಿಗೆ ಬೆಂಕಿ ಹಚ್ಚಿದ್ದಾರೆ. ಇದರಿಂದ ಸಾವಿರಾರು ಟನ್ ಕಬ್ಬು ಸುಟ್ಟು ಭಸ್ಮವಾಗಿದ್ದು, ರೈತರು ಕಣ್ಣೀರು ಹಾಕಿದ್ದಾರೆ. ಪ್ರಾರಂಭದಲ್ಲಿ ನಿಪ್ಪಾಣಿ-ಮಹಾಲಿಂಗಪುರ ರಾಜ್ಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಆಗಿತ್ತು. ರೈತರು ಕಾರ್ಖಾನೆಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಈ ಘಟನೆ ನಡೆದಿದೆ. ಕಬ್ಬಿಗೆ ಬೆಂಬಲ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಬಳಿ ನವೆಂಬರ್ 7ರಂದು ನಡೆದ ಪ್ರತಿಭಟನೆಯಲ್ಲಿ ಕಲ್ಲು ತೂರಾಟ ನಡೆಸಿದ ಆರು ಆರೋಪಿಗಳನ್ನು ಬಂಧಿಸಲಾಗಿದೆ. ಈ ವೇಳೆ ಡಿವೈಎಸ್ಪಿ ಸೇರಿ 12 ಪೊಲೀಸರು ಗಾಯಗೊಂಡಿದ್ದರು. ಆರೋಪಿಗಳ ವಿರುದ್ಧ ದೊಂಬಿ, ಮಾರಣಾಂತಿಕ ಹಲ್ಲೆ ಪ್ರಕರಣ ದಾಖಲಾಗಿದೆ.…
ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ನಂಬರ್ 1. ಇಟಿಗಿ ಗ್ರಾಮದ, ಪ್ರಸ್ತುತ ಬಳ್ಳಾರಿ ನಗರದ ಕಪ್ಪಗಲ್ಲು ರಸ್ತೆಯ ಕೋಟೇಶ್ ಲೇಔಟ್ ನಿವಾಸಿಗಳಾದ ನಿವೃತ್ತ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗೌಡ್ರು ದೊಡ್ಡ ಹನುಮಂತಪ್ಪ ಮತ್ತು ನಾಗರತ್ನ ದಂಪತಿಗಳು ಮಗನಾದ ಗಿರೀಶ್ ಕುಮಾರ್.ಜಿ ಅವರಿಗೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರ ಹತ್ತಿರದ ಕನ್ನಡ ವಿಶ್ವವಿದ್ಯಾಲಯ, ವಿದ್ಯಾರಣ್ಯ ಹಂಪಿಯಿಂದ ಪಿಎಚ್.ಡಿ ಪದವಿಯನ್ನು ನೀಡಲಾಯಿತು. ಇವರು ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರ ತುಮಕೂರಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ನಾಗೇಂದ್ರ ಅವರು ಮಾರ್ಗದರ್ಶನದಲ್ಲಿ *ಕನ್ನಡ ಮುದ್ರಣ ಮಾಧ್ಯಮಗಳಲ್ಲಿ ಸೈಬರ್ ಅಪರಾಧಗಳ ಪ್ರತಿನೀಧಿಕರಣ* ( ಬಳ್ಳಾರಿ ಜಿಲ್ಲೆಯ ಅನುಲಕ್ಷಿಸಿ) ಎಂಬ ವಿಷಯದ ಕುರಿತು ಮಂಡಿಸಿದ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ನೀಡಲಾಗಿದೆ ಎಂದು ಕನ್ನಡ ವಿಶ್ವವಿದ್ಯಾಲಯ ಕುಲಸಚಿವರಾದ ಡಾ.ವಿಜಯ್ ಪೂಣಚ್ಚ ತಂಬಂಡ ಅವರು ಅಧಿಸೂಚನೆ ಹೊರಡಿಸಿದ್ದಾರೆ. ಈ ಸಮಯದಲ್ಲಿ ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಯ ಹಿರಿಯ ಪತ್ರಕರ್ತರು, ಪೊಲೀಸ್ ಇಲಾಖೆ ಅಧಿಕಾರಿಗಳು ಮತ್ತು…
ಕೂಡ್ಲಿಗಿ; ಅಧುನಿಕ ಭರಾಟೆಗಳ ನಡುವೆ ನಾಟಕಕಗಳು ಕಣ್ಮರೆಯಾಗುತ್ತಿರುವುದು ವಿಷಾದದ ಸಂಗತಿಯಾಗಿದ್ದು, ಸಮಾಜದಲ್ಲಿ ಶಾಂತಿ, ಸಮಾನತೆ ಪಾಠವನ್ನು ರಂಗಭೂಮಿ ಮಾಧ್ಯಮದಿಂದ ಕಲಿಸಿಕೊಡಬೇಕದ ಅನಿವಾರ್ಯತೆ ಇದೆ ಎಂದು ಶರಣೇಶ್ವರ ವಿದ್ಯಾಸಂಸ್ಥೆಯ ಸಂಸ್ಥಾಪಕ ಕೆ ಎಂ ಶಶಿಧರ ಸ್ವಾಮಿ ಹೇಳಿದರು. ತಾಲೂಕಿನ ಕಾನಹೊಸಹಳ್ಳಿಯ ವಿದ್ಯಾನಿಕೇತನ ಪ್ರಾಥಮಿಕ/ಪ್ರೌಢಶಾಲಾ ಆವರಣದಲ್ಲಿ ಸೋಮವಾರ ನಿನಾಸಂ(ನಿಲಕAಠೇಶ್ವರ ನಾಟ್ಯಸೇವಾ ಸಂಘ) ಸಹಯೋಗದಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಡೆದ “ಹೃದಯದ ತೀರ್ಪು” ನಾಟಕಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕಲಾವಿದರಿಗೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ನಮ್ಮ ಸಂಸ್ಥೆ ಸದಾ ಪ್ರೋತ್ಸಾಹಿಸುತ್ತ ಬಂದಿದ್ದು, ನೀನಾಸಂ ನಾಟಕಗಳು ಮೌಲ್ಯಯುತ ಜೀವನಕ್ಕೆ ಮಾದರಿಯಾಗಿವೆ. ಇಂತಹ ಕಾರ್ಯಕ್ರಮಗಳನು ಸದುಪಯೋಗ ಪಡಿಸಿಕೊಳ್ಳಬೇಕಿದೆ ಎಂದ ಅವರು, ನೀನಾಸಂ ಕೇವಲ ರಂಗ ಪ್ರದರ್ಶನಕ್ಕೆ ಸೀಮಿತವಾಗದೆ ಕಲಾ ಶಿಕ್ಷಣದಲ್ಲಿ ತೊಡಗಿಸಿಕೊಂಡು. ಗ್ರಾಮೀಣ ಭಾಗಗಳಲ್ಲಿಯೂ ನಾಟಕಕಗಳ ತಲುಪಿಸುವ ಮೂಲಕ ಪ್ರಯೋಗತ್ಮಕ ನಾಟಕಗಳಿಂದ ಸಮಾಜಕ್ಕೆ ಸಂದೇಶ ನೀಡುತ್ತಿದೆ ಎಂದರು. ಸAಸ್ಥೆಯ ಕಾರ್ಯದರ್ಶಿ ಹರ್ಷವರ್ಧನ್ ಬಹುತೇಕ ಕಿರುತೆರೆ ಹಾಗೂ ಸಿನಿಮಾ ನಟರು ನೀನಾಸಂನಿAದ ಬಂದವರಾಗಿದ್ದು, ಮಹಾನ್ ಕಲಾವಿದರನ್ನು ಆ ಸಂಸ್ಥೆ…
ಕೂಡ್ಲಿಗಿ ಕ್ಷೇತ್ರದ ಜನತೆಯ ಬಹುದಶಕಗಳ ಬೇಡಿಕೆಯಾದ ೭೪ ಕೆರೆಗಳ ನೀರು ತುಂಬಿಸುವ ಐತಿಹಾಸಿಕ ಕಾರ್ಯಕ್ರಮಕ್ಕೆ ಕೂಡ್ಲಿಗಿ ಪಟ್ಟಣ ನಾಳೆ ಸಾಕ್ಷಿಯಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀರು ತುಂಬಿಸುವ ಯೋಜನೆಗೆ ಉದ್ಘಾಟನೆ ಸೇರಿದಂತೆ ವಿವಿಧ ಅಭಿವೃದ್ದಿ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಉಸ್ತುವಾರಿ ಸಚಿವರಾದ ಬಿ ಝಡ್ ಜಮೀರ್ ಅಹ್ಮದ್ ಖಾನ್ ಆಗಮಿಸಲಿದ್ದಾರೆ. ಕೂಡ್ಲಿಗಿಯ ಶಾಸಕ ಡಾ ಎನ್ ಟಿ ಶ್ರೀನಿವಾಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಮೊಳಕಾಲ್ಮೂರು ಶಾಸಕ ಎನ್ ವೈ ಗೋಪಾಲಕೃಷ್ಣ ಅವರು ವಿಶೇಷ ಅತಿಥ್ಯ ವಹಿಸಲಿದ್ದಾರೆ. ಬಳ್ಳಾರಿ-ವಿಜಯನಗರ ಸಂಸದ ಈ ತುಕರಾಂ, ಅಖಂಡ ಜಿಲ್ಲೆಯ ಶಾಸಕರು ಸೇರಿದಂತೆ ಹಲವು ಸಚಿವರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಬಹು ನಿರೀಕ್ಷಿತ ೭೪ ಕೆರೆಗಳ ತುಂಬಿಸುವ ಯೋಜನೆಗೆ ೭೪೦ ಕೋಟಿ ರೂ ವೆಚ್ಚದಲ್ಲಿ ಅಂದಿನ ಶಾಸಕ ಎನ್ ವೈ ಗೋಪಾಲಕೃಷ್ಣ ೨೦೨೧ರಂದು ಜಾರಿಗೆ ತಂದಿದ್ದರು. ಬಹುತೇಖ ಅರ್ಧ ಪ್ರಮಾಣದಲ್ಲಿ ಪೈಪ್ಲೈನ್ ಕಾಮಗಾರಿಯೂ ಸಹ ಮುಗಿದಿತ್ತು, ೨೦೨೩ ರ ಚುನಾವಣೆಯ ನಂತರ ರೈತರ ಜಮೀನುಗಳು,…
