ಕೂಡ್ಲಿಗಿ ತಾಲೂಕಿನ ಬಯಲುತುಂಬರಗುದ್ದಿ ಗ್ರಾಮದ ಆಯುಷ್ಮಾನ್ ಆರೋಗ್ಯಕೇಂದ್ರದಿಂದ “ಆಯುಷ್ಮಾನ್ ಅರೋಗ್ಯ ಮಂದಿರದಲ್ಲಿ ಆರೋಗ್ಯ ಶಿಬಿರ” ಯೋಜನೆಯಡಿ ಗ್ರಾಮಸ್ಥರ ಆರೋಗ್ಯ ತಪಾಸಣೆ ನಡೆಸಲಾಯಿತು. ಮದುಮೇಹ, ರಕ್ತದೊತ್ತಡ, ಕ್ಷಯರೋಗ, ಕ್ಯಾನ್ಸರ್ ಕಾಯಿಲೆ ಸ್ಕ್ರೀನಿಂಗ್ ಮತ್ತು ಮುಂಜಾಗ್ರತಾ ಮಾಹಿತಿ, ಅನಿಮಿಯಾ ತಪಾಸಣೆ ಹಾಗೂ ಆರೋಗ್ಯ ಶಿಕ್ಷಣದ ಜತೆಗೆ ಉಚಿತ ಔಷಧ ವಿತರಣೆ ಮಾಡಲಾಯಿತು. ನಂತರ ಕೇಂದ್ರದಲ್ಲಿ ದೊರೆಯುವ ಸೇವೆಗಳ ಬಗ್ಗೆ ಮಾಹಿತಿ ನೀಡಲಾಯಿತು. ಸಮುದಾಯ ಆರೋಗ್ಯಧಿಕಾರಿ ನೀಲಾವತಿ ಎಸ್ ಮಾತನಾಡಿ, ಆಯುಷ್ಮಾನ್ ಆರೋಗ್ಯ ಕೇಂದ್ರದಿಂದ ಆರೋಗ್ಯ ತಪಾಸಣಾ ಮಾಡಿ ಕೆಲೆ ಕಾಯಿಲೆಗಳಿಗೆ ಸ್ಥಳದಲೇ ಔಷಧಿ ವಿತರಿಸಲಾಗುತ್ತಿದ್ದು ಜತೆಗೆ ನಮ್ಮ ಕೇಂದ್ರದಲ್ಲಿ ದೊರೆಯುವ ಔಷಧಿ ಮತ್ತು ಸೇವೆಗಳನ್ನು ಜನತೆ ಸದುಪಯೋಗ ಪಡೆಸಿಕೊಳ್ಳಬೇಕಿದೆ ಎಂದ ಅವರು, ಇಲ್ಲಿ ತಪಾಸಣಾ ವೇಳೆ ಗಂಭೀರ ಕಾಯಿಲೆಗಳು ಕಂಡು ಬಂದಲ್ಲಿ ಹೆಚ್ಚಿನ ಚಿಕಿತ್ಸೆಗೆ ಕಳುಹಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರಾದ ಗೀತಾ, ಶಿವಗಂಗ, ವೀಣಾ ಸೇರಿದಂತೆ ಗ್ರಾಮಸ್ಥರು ಭಾಗಿಯಾಗಿದ್ದರು. ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ ಅಜಯ್ 8123302594, ದಯಾನಂದ್ ಸಜ್ಜನ್ 9886972975
Author: Team Sanchalana
ರಸ್ತೆ ಬದಿಯಲ್ಲಿ ಮರಗಳನ್ನು ನೆಟ್ಟು ಪೋಷಿಸುವ ಮೂಲಕ ‘ವೃಕ್ಷಮಾತೆ’ ಎಂದೇ ಖ್ಯಾತಿ ಪಡೆದಿದ್ದ ಸಾಲುಮರದ ತಿಮ್ಮಕ್ಕ ಅವರು ಇಂದು (ನವೆಂಬರ್ 14) ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಬಹುಅಂಗಾಂಗ ವೈಫಲ್ಯದಿಂದಾಗಿ 114ನೇ ವಯಸ್ಸಿನಲ್ಲಿನಿಧನರಾಗಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ಜೂನ್ 30, 1911 ರಂದು ಜನಿಸಿದ್ದ ಅವರು, ಮರ-ಗಿಡಗಳನ್ನು ತಮ್ಮ ಮಕ್ಕಳಂತೆಯೇ ಪ್ರೀತಿಸಿ, ಪರಿಸರಕ್ಕೆ ಅಪ್ರತಿಮ ಕೊಡುಗೆ ನೀಡಿದ್ದರು. 🎖️ ಪ್ರಮುಖ ಪ್ರಶಸ್ತಿಗಳು ಮತ್ತು ಗೌರವಗಳು ಪರಿಸರ ಸಂರಕ್ಷಣೆಗೆ ತಿಮ್ಮಕ್ಕ ಅವರು ಸಲ್ಲಿಸಿದ ಮಹತ್ತರ ಸೇವೆಯನ್ನು ಗುರುತಿಸಿ, ಅವರಿಗೆ ಈ ಕೆಳಗಿನ ಪ್ರಮುಖ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ: ವರ್ಷ ಪ್ರಶಸ್ತಿ/ಗೌರವ ನೀಡಿದ ಸಂಸ್ಥೆ/ಉಲ್ಲೇಖ 2019 ಪದ್ಮಶ್ರೀ ಪ್ರಶಸ್ತಿ ಭಾರತ ಸರ್ಕಾರ 2020 ಡಾಕ್ಟರೇಟ್ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ 1995 ರಾಷ್ಟ್ರೀಯ ಪೌರ ಪ್ರಶಸ್ತಿ 1997 ಇಂದಿರಾ ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿ 2006 ಗಾಡ್ಫ್ರಿ ಫಿಲಿಪ್ಸ್ ಧೀರತೆ ಪ್ರಶಸ್ತಿ 2000 ಕರ್ನಾಟಕ ಕಲ್ಪವಲ್ಲಿ ಪ್ರಶಸ್ತಿ – ನಾಡೋಜ ಪ್ರಶಸ್ತಿ – ರಾಜ್ಯೋತ್ಸವ ಪ್ರಶಸ್ತಿ…
ರಾಜ್ಯದ ವಿವಿಧ ಭಾಗಗಳಲ್ಲಿ ಕಬ್ಬು ಬೆಳೆಗಾರರ ಹೋರಾಟ ತೀವ್ರಗೊಂಡಿದೆ. ಕಬ್ಬಿಗೆ ಪ್ರತಿ ಟನ್ಗೆ ₹3,500 ದರ ನಿಗದಿ ಮಾಡುವಂತೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮಹಾಲಿಂಗಪುರ ಬಳಿ ರೈತರ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದೆ. ಸೈದಾಪುರ ಸಕ್ಕರೆ ಕಾರ್ಖಾನೆ ಆವರಣದ ಬಳಿ ರೊಚ್ಚಿಗೆದ್ದ ರೈತರು ಕಬ್ಬು ತುಂಬಿದ 50ಕ್ಕೂ ಹೆಚ್ಚು ಟ್ರ್ಯಾಕ್ಟರ್ಗಳಿಗೆ ಬೆಂಕಿ ಹಚ್ಚಿದ್ದಾರೆ. ಇದರಿಂದ ಸಾವಿರಾರು ಟನ್ ಕಬ್ಬು ಸುಟ್ಟು ಭಸ್ಮವಾಗಿದ್ದು, ರೈತರು ಕಣ್ಣೀರು ಹಾಕಿದ್ದಾರೆ. ಪ್ರಾರಂಭದಲ್ಲಿ ನಿಪ್ಪಾಣಿ-ಮಹಾಲಿಂಗಪುರ ರಾಜ್ಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಆಗಿತ್ತು. ರೈತರು ಕಾರ್ಖಾನೆಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಈ ಘಟನೆ ನಡೆದಿದೆ. ಕಬ್ಬಿಗೆ ಬೆಂಬಲ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಬಳಿ ನವೆಂಬರ್ 7ರಂದು ನಡೆದ ಪ್ರತಿಭಟನೆಯಲ್ಲಿ ಕಲ್ಲು ತೂರಾಟ ನಡೆಸಿದ ಆರು ಆರೋಪಿಗಳನ್ನು ಬಂಧಿಸಲಾಗಿದೆ. ಈ ವೇಳೆ ಡಿವೈಎಸ್ಪಿ ಸೇರಿ 12 ಪೊಲೀಸರು ಗಾಯಗೊಂಡಿದ್ದರು. ಆರೋಪಿಗಳ ವಿರುದ್ಧ ದೊಂಬಿ, ಮಾರಣಾಂತಿಕ ಹಲ್ಲೆ ಪ್ರಕರಣ ದಾಖಲಾಗಿದೆ.…
ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ನಂಬರ್ 1. ಇಟಿಗಿ ಗ್ರಾಮದ, ಪ್ರಸ್ತುತ ಬಳ್ಳಾರಿ ನಗರದ ಕಪ್ಪಗಲ್ಲು ರಸ್ತೆಯ ಕೋಟೇಶ್ ಲೇಔಟ್ ನಿವಾಸಿಗಳಾದ ನಿವೃತ್ತ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗೌಡ್ರು ದೊಡ್ಡ ಹನುಮಂತಪ್ಪ ಮತ್ತು ನಾಗರತ್ನ ದಂಪತಿಗಳು ಮಗನಾದ ಗಿರೀಶ್ ಕುಮಾರ್.ಜಿ ಅವರಿಗೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರ ಹತ್ತಿರದ ಕನ್ನಡ ವಿಶ್ವವಿದ್ಯಾಲಯ, ವಿದ್ಯಾರಣ್ಯ ಹಂಪಿಯಿಂದ ಪಿಎಚ್.ಡಿ ಪದವಿಯನ್ನು ನೀಡಲಾಯಿತು. ಇವರು ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರ ತುಮಕೂರಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ನಾಗೇಂದ್ರ ಅವರು ಮಾರ್ಗದರ್ಶನದಲ್ಲಿ *ಕನ್ನಡ ಮುದ್ರಣ ಮಾಧ್ಯಮಗಳಲ್ಲಿ ಸೈಬರ್ ಅಪರಾಧಗಳ ಪ್ರತಿನೀಧಿಕರಣ* ( ಬಳ್ಳಾರಿ ಜಿಲ್ಲೆಯ ಅನುಲಕ್ಷಿಸಿ) ಎಂಬ ವಿಷಯದ ಕುರಿತು ಮಂಡಿಸಿದ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ನೀಡಲಾಗಿದೆ ಎಂದು ಕನ್ನಡ ವಿಶ್ವವಿದ್ಯಾಲಯ ಕುಲಸಚಿವರಾದ ಡಾ.ವಿಜಯ್ ಪೂಣಚ್ಚ ತಂಬಂಡ ಅವರು ಅಧಿಸೂಚನೆ ಹೊರಡಿಸಿದ್ದಾರೆ. ಈ ಸಮಯದಲ್ಲಿ ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಯ ಹಿರಿಯ ಪತ್ರಕರ್ತರು, ಪೊಲೀಸ್ ಇಲಾಖೆ ಅಧಿಕಾರಿಗಳು ಮತ್ತು…
ಕೂಡ್ಲಿಗಿ; ಅಧುನಿಕ ಭರಾಟೆಗಳ ನಡುವೆ ನಾಟಕಕಗಳು ಕಣ್ಮರೆಯಾಗುತ್ತಿರುವುದು ವಿಷಾದದ ಸಂಗತಿಯಾಗಿದ್ದು, ಸಮಾಜದಲ್ಲಿ ಶಾಂತಿ, ಸಮಾನತೆ ಪಾಠವನ್ನು ರಂಗಭೂಮಿ ಮಾಧ್ಯಮದಿಂದ ಕಲಿಸಿಕೊಡಬೇಕದ ಅನಿವಾರ್ಯತೆ ಇದೆ ಎಂದು ಶರಣೇಶ್ವರ ವಿದ್ಯಾಸಂಸ್ಥೆಯ ಸಂಸ್ಥಾಪಕ ಕೆ ಎಂ ಶಶಿಧರ ಸ್ವಾಮಿ ಹೇಳಿದರು. ತಾಲೂಕಿನ ಕಾನಹೊಸಹಳ್ಳಿಯ ವಿದ್ಯಾನಿಕೇತನ ಪ್ರಾಥಮಿಕ/ಪ್ರೌಢಶಾಲಾ ಆವರಣದಲ್ಲಿ ಸೋಮವಾರ ನಿನಾಸಂ(ನಿಲಕAಠೇಶ್ವರ ನಾಟ್ಯಸೇವಾ ಸಂಘ) ಸಹಯೋಗದಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಡೆದ “ಹೃದಯದ ತೀರ್ಪು” ನಾಟಕಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕಲಾವಿದರಿಗೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ನಮ್ಮ ಸಂಸ್ಥೆ ಸದಾ ಪ್ರೋತ್ಸಾಹಿಸುತ್ತ ಬಂದಿದ್ದು, ನೀನಾಸಂ ನಾಟಕಗಳು ಮೌಲ್ಯಯುತ ಜೀವನಕ್ಕೆ ಮಾದರಿಯಾಗಿವೆ. ಇಂತಹ ಕಾರ್ಯಕ್ರಮಗಳನು ಸದುಪಯೋಗ ಪಡಿಸಿಕೊಳ್ಳಬೇಕಿದೆ ಎಂದ ಅವರು, ನೀನಾಸಂ ಕೇವಲ ರಂಗ ಪ್ರದರ್ಶನಕ್ಕೆ ಸೀಮಿತವಾಗದೆ ಕಲಾ ಶಿಕ್ಷಣದಲ್ಲಿ ತೊಡಗಿಸಿಕೊಂಡು. ಗ್ರಾಮೀಣ ಭಾಗಗಳಲ್ಲಿಯೂ ನಾಟಕಕಗಳ ತಲುಪಿಸುವ ಮೂಲಕ ಪ್ರಯೋಗತ್ಮಕ ನಾಟಕಗಳಿಂದ ಸಮಾಜಕ್ಕೆ ಸಂದೇಶ ನೀಡುತ್ತಿದೆ ಎಂದರು. ಸAಸ್ಥೆಯ ಕಾರ್ಯದರ್ಶಿ ಹರ್ಷವರ್ಧನ್ ಬಹುತೇಕ ಕಿರುತೆರೆ ಹಾಗೂ ಸಿನಿಮಾ ನಟರು ನೀನಾಸಂನಿAದ ಬಂದವರಾಗಿದ್ದು, ಮಹಾನ್ ಕಲಾವಿದರನ್ನು ಆ ಸಂಸ್ಥೆ…
ಕೂಡ್ಲಿಗಿ ಕ್ಷೇತ್ರದ ಜನತೆಯ ಬಹುದಶಕಗಳ ಬೇಡಿಕೆಯಾದ ೭೪ ಕೆರೆಗಳ ನೀರು ತುಂಬಿಸುವ ಐತಿಹಾಸಿಕ ಕಾರ್ಯಕ್ರಮಕ್ಕೆ ಕೂಡ್ಲಿಗಿ ಪಟ್ಟಣ ನಾಳೆ ಸಾಕ್ಷಿಯಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀರು ತುಂಬಿಸುವ ಯೋಜನೆಗೆ ಉದ್ಘಾಟನೆ ಸೇರಿದಂತೆ ವಿವಿಧ ಅಭಿವೃದ್ದಿ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಉಸ್ತುವಾರಿ ಸಚಿವರಾದ ಬಿ ಝಡ್ ಜಮೀರ್ ಅಹ್ಮದ್ ಖಾನ್ ಆಗಮಿಸಲಿದ್ದಾರೆ. ಕೂಡ್ಲಿಗಿಯ ಶಾಸಕ ಡಾ ಎನ್ ಟಿ ಶ್ರೀನಿವಾಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಮೊಳಕಾಲ್ಮೂರು ಶಾಸಕ ಎನ್ ವೈ ಗೋಪಾಲಕೃಷ್ಣ ಅವರು ವಿಶೇಷ ಅತಿಥ್ಯ ವಹಿಸಲಿದ್ದಾರೆ. ಬಳ್ಳಾರಿ-ವಿಜಯನಗರ ಸಂಸದ ಈ ತುಕರಾಂ, ಅಖಂಡ ಜಿಲ್ಲೆಯ ಶಾಸಕರು ಸೇರಿದಂತೆ ಹಲವು ಸಚಿವರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಬಹು ನಿರೀಕ್ಷಿತ ೭೪ ಕೆರೆಗಳ ತುಂಬಿಸುವ ಯೋಜನೆಗೆ ೭೪೦ ಕೋಟಿ ರೂ ವೆಚ್ಚದಲ್ಲಿ ಅಂದಿನ ಶಾಸಕ ಎನ್ ವೈ ಗೋಪಾಲಕೃಷ್ಣ ೨೦೨೧ರಂದು ಜಾರಿಗೆ ತಂದಿದ್ದರು. ಬಹುತೇಖ ಅರ್ಧ ಪ್ರಮಾಣದಲ್ಲಿ ಪೈಪ್ಲೈನ್ ಕಾಮಗಾರಿಯೂ ಸಹ ಮುಗಿದಿತ್ತು, ೨೦೨೩ ರ ಚುನಾವಣೆಯ ನಂತರ ರೈತರ ಜಮೀನುಗಳು,…
ಕೂಡ್ಲಿಗಿ; ತಾಲೂಕಿನ ಕಾನಹೊಸಹಳ್ಳಿಯ ವಿದ್ಯಾನಿಕೇತನ/ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಆವರಣದಲ್ಲಿ ರಾಜ್ಯದ ಪ್ರತಿಷ್ಠಿತ ರಂಗಭೂಮಿ ಶಿಕ್ಷಣ ಸಂಸ್ಥೆ ನೀನಾಸಂನಿಂದ ನವೆಂಬರ್ 9 ಮತ್ತು 10ರಂದು ಸಾಂಸ್ಕೃತಿಕ ಹಬ್ಬ ಆಯೋಜಿಸಲಾಗಿದೆ ಎಂದು ವಿದ್ಯಾಸಂಸ್ಥೆಯ ಸಂಸ್ಥಾಪಕರಾದ ಕೆ ಎಂ ಶಶಿಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸತತ 75 ವರ್ಷಗಳಿಂದ ರಂಗಭೂಮಿಗೆ ತನ್ನದೇ ಆದ ಅಪಾರ ಸೇವೆ ಸಲ್ಲಿಸುತ್ತಿರುವ ರಾಜ್ಯ ಪ್ರತಿಷ್ಠಿತ ರಂಗಭೂಮಿ ಶಿಕ್ಷಣ ಸಂಸ್ಥೆಯಾದ ನೀನಾಸಂ ತಂಡವು ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಇದೆ ಪ್ರಪ್ರಥಮ ಬಾರಿಗೆ ನಮ್ಮ ಕಾನ ಹೊಸಹಳ್ಳಿಯಲ್ಲಿ ವಿಶೇಷ ನೀನಾಸಂ ನಾಟಕೋತ್ಸವವನ್ನು ತನ್ನ ರಂಗಭೂಮಿ ಪರಂಪರೆಯನ್ನು ಮುಂದುವರಿಸಲು ನಾಡಿನ ಸಂಸ್ಕೃತಿ, ನಾಟಕ, ಸಾಹಿತ್ಯ ಮತ್ತು ಕಲೆಯ ಮೌಲ್ಯವನ್ನು ಬೆಳಗಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಿದೆ ಎಂದು ಅವರು ತಿಳಿಸಿದರು. ಸುತ್ತಮುತ್ತಲಿನ ಎಲ್ಲಾ ಸಾಹಿತ್ಯ ಮತ್ತು ರಂಗಭೂಮಿ ಅಭಿಮಾನಿಗಳು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸೋಣ ಎಂದು ಕಾರ್ಯದರ್ಶಿ ಕೆ ಎಂ ಹರ್ಷವರ್ಧನ್ ತಿಳಿಸಿದರು. ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ ಅಜಯ್ 8123302594, ದಯಾನಂದ್ ಸಜ್ಜನ್ 9886972975
ಕೂಡ್ಲಿಗಿ ತಾಲೂಕಿನ ಕಾನಾಹೊಸಹಳ್ಳಿ ಸಮೀಪದ ಗಡಿಗ್ರಾಮ ಕಾನಾಮಡುಗು ಗ್ರಾಮದಲ್ಲಿ ಶವ ಸಂಸ್ಕಾರ ಮಾಡಲು ಪರದಾಡುವ ಪರಿಸ್ಥಿತಿ ಎದುರಾಗಿದೆ. ಶುಕ್ರವಾರ ವೃದ್ದೆಯೊಬ್ಬರು ವಯೊ ಸಹಜ ಮೃತರಾಗಿದ್ದು, ಅಂತ್ಯ ಸಂಸ್ಕಾರ ಮಾಡಲು ರುದ್ರ ಭೂಮಿಗೆ ತೆರಳಿ ಕುಣಿ ತೆಗೆದ ಸಂದರ್ಭದಲ್ಲಿ ಕುಣಿಯಲ್ಲಿ ನೀರು ತುಂಬಿಕೊಂಡು ಸ್ಮಶಾನ ಜಲಾವೃತವಾಗಿದೆ. ಕಾನಾಮಡುಗು ಗ್ರಾಮದಲ್ಲಿ 4 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದ್ದು, ಸುಪ್ರಸಿದ್ಧ ಶರಣಬಸವೇಶ್ವರರ ದಾಸೋಹ ಮಠವು ಇದೇ ಗ್ರಾಮದಲ್ಲಿ ಇದೆ. ಈ ಗ್ರಾಮದಲ್ಲಿ ಸರಿಯಾದ ಸ್ಮಶಾನ ಇಲ್ಲ, ಸದ್ಯ ಎರಡು ಎಕರೆ ಸ್ಮಶಾನ ಭೂಮಿ ಎಂದು ಗುರುತು ಮಾಡಿದ್ದು ಅದು ಕೂಡ ಅತಿಕ್ರಮಣವಾಗಿದೆ ಎನ್ನಲಾಗುತ್ತಿದೆ. ಕಳೆದ ಎರಡು ವರ್ಷಗಳಿಂದ ಮಳೆ ಜಾಸ್ತಿಯಾಗಿ ಹಾಗೂ ಪಕ್ಕದ ಜಗಳೂರು ತಾಲೂಕಿನ ಅಣಬೂರು ಗ್ರಾಮದ ಕೆರೆಗೆ ನೀರು ಬಂದಿರುವುದರಿಂದ ಸ್ಮಶಾನವೆಲ್ಲ ಜಲಾವೃತವಾಗಿದೆ, ಕೂಡಲೆ ಗ್ರಾಮಕ್ಕೆ ಸೂಕ್ತ ಸ್ಮಶಾಲ ಕಲ್ಪಿಸಿಕೊಡಬೇಕೆಂದು ಗ್ರಾಮದ ದಲಿತ ಸಮುದಾಯದ ಮುಖಂಡರುಗಳಾದ ಪಕ್ಕೀರಪ್ಪ, ದುರುಗಪ್ಪ,ಹನುಮಂತಪ್ಪ,ಗಂಗಪ್ಪ,ಎಂ ಶರಣಪ್ಪ,ನಿಂಗಪ್ಪ, ಮಾಸ್ತಪ್ಪ,ತಿಪ್ಪೇಸ್ವಾಮಿ ಒತ್ತಾಯಿಸಿದ್ದಾರೆ. ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ ಅಜಯ್ 8123302594, ದಯಾನಂದ್ ಸಜ್ಜನ್ 9886972975
ವಿಜಯನಗರ: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಮುಖ್ಯಮಂತ್ರಿ ಬದಲಾವಣೆ ಕುರಿತು ಮಾಜಿ ಸಚಿವ ಶ್ರೀರಾಮುಲು ಅವರು ಮಹತ್ವದ ಭವಿಷ್ಯ ನುಡಿದಿದ್ದಾರೆ. ಬೆಳಗಾವಿ ಅಧಿವೇಶನದ ವೇಳೆಗೆ ರಾಜ್ಯಕ್ಕೆ ಹೊಸ ಮುಖ್ಯಮಂತ್ರಿಯೊಬ್ಬರು ಆಗಮಿಸಲಿದ್ದಾರೆ ಎಂದು ಅವರು ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಹೇಳಿಕೆ ನೀಡಿದ್ದಾರೆ. d09bf4e2-f919-4507-b1f5-2aa6f45c47ecಬೆಳಗಾವಿ ಅಧಿವೇಶನದ ಹೊತ್ತಿಗೆ ರಾಜ್ಯಕ್ಕೆ ಹೊಸ ಮುಖ್ಯ ಮಂತ್ರಿ ಬರಲಿದ್ದಾರೆ. ನವೆಂಬರ್ ಕ್ರಾಂತಿಯಲ್ಲಿ ಡಿ.ಕೆ. ಶಿವಕುಮಾರ್ ಅವರಂತೂ ಮುಖ್ಯ ಮಂತ್ರಿಯಾಗುವುದಿಲ್ಲ. 2028ರ ತನಕ ಡಿಕೆಶಿ ಮುಖ್ಯ ಮಂತ್ರಿಯಾಗುವುದಿಲ್ಲ, ಡಿ.ಕೆ. ಶಿವಕುಮಾರ್ ಅವರು ಸದ್ಯ ಕೆಪಿಸಿಸಿ ಅಧ್ಯಕ್ಷ ಸ್ಥಾನದೊಂದಿಗೆ ಉಪ ಮುಖ್ಯಮಂತ್ರಿಯೂ ಆಗಿದ್ದು, ನಾಲ್ಕೈದು ಖಾತೆಗಳೊಂದಿಗೆ ಬೆಂಗಳೂರನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ. ಅವರಿಗೆ ಬಹಳ ಜವಾಬ್ದಾರಿಗಳಿದ್ದು, ಅವುಗಳನ್ನೇ ಮುಂದುವರಿಸಿಕೊಂಡು ಹೋಗಲಿದ್ದಾರೆ ಎಂದರು. ಮೂರನೇ ವ್ಯಕ್ತಿ ಮುಖ್ಯ ಮಂತ್ರಿಯಾಗಲಿದ್ದು, ಯಾರು ಎಂಬ ಪ್ರಶ್ನೆ ಇದೆ. ಯಾರೇ ಮುಖ್ಯಮಂತ್ರಿಯಾದರೂ, ತಮ್ಮ ಸಮುದಾಯಕ್ಕೆ ಬೆಂಬಲ ನೀಡುತ್ತೀರಾ ಎಂಬ ಪ್ರಶ್ನೆಗೆ ಶ್ರೀರಾಮುಲು ಅವರು ಸತೀಶ್ ಜಾರಕಿಹೊಳಿ ಅವರ ಹೆಸರನ್ನು ಪ್ರಸ್ತಾಪಿಸಿ ಮಾತನಾಡಿದರು. ಸತೀಶ್ ಜಾರಕಿಹೊಳಿ ಅವರು ಹಿಂದಿನಿಂದಲೂ ಅಹಿಂದ ನಾಯಕರಾಗಿದ್ದಾರೆ.…
ಕೂಡ್ಲಿಗಿ; ಗಾಣಿಗ ಸಮುದಾಯವು ಪ್ರತಿಯೊಂದು ಕ್ಷೇತ್ರದಲ್ಲೂ ಉತ್ತಮ ಸಾಧನೆ ಮಾಡಲು ಪ್ರಯತ್ನಿಸಬೇಕು, ಜತೆಗೆ ಸಮಾಜದ ಜತೆ ಉತ್ತಮ ಬಾಂದವ್ಯದೊಂದಿಗೆ ಅಭಿವೃದ್ದಿಯತ್ತ ಸಾಗಬೇಕಿದೆ ಎಂದು ಬಿಜಾಪುರದ ಗಾಣಿಗ ಸಮಾಜದ ವನಶ್ರೀ ಸಂಸ್ಥಾನ ಮಠದ ಡಾ. ಜಯಬಸವ ಕುಮಾರಸ್ವಾಮಿ ನುಡಿದರು. ತಾಲೂಕಿನ ಕಾನಹೊಸಹಳ್ಳಿಯ ಗಾಣಿಗ ಸಮುದಾಯ ಭವನದಲ್ಲಿ ಈಚೇಗೆ ಆಯೋಜಿಸಿದ್ದ ಹೆಚ್ಚುವರಿ ಕೊಠಡಿಗಳಿಗೆ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು, ಸಮುದಾಯ ವಿದ್ಯಾರ್ಥಿಗಳು ಸೇರಿದಂತೆ ಎಲ್ಲ ಸಮುದಾಯಗಳ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಒಂದು ಶಾಲೆ ಮತ್ತು ಹಾಸ್ಟೇಲ್ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಎಲ್ಲಾ ರೀತಿಯಿಂದಲೂ ಸಹಕಾರ ನೀಡಲಾಗುವುದು ಎಂದ ಅವರು. ಕೂಡ್ಲಿಗಿ ಭಾಗದ ಗಾಣಿಗರ ಸಂಘವು ಆಸಕ್ತಿಯಿಂದ ಕಾರ್ಯಕ್ರಮಗಳನ್ನು ಮಾಡುತ್ತಿದ್ದು, ಇದೇ ರೀತಿ ಮುಂದುವರೆಯಲಿ ಎಂದು ಅಶಿರ್ವಚ ನೀಡಿದರು. ವಿಜಯನಗರ ಜಿಲ್ಲಾಧ್ಯಕ್ಷ ಜಿ ಉಮೇಶ್, ಸಮುದಾಯ ಭವನದಲ್ಲಿ ಕೊಠಡಿಗಳ ಕೊರತೆಯನ್ನು ನೀಗಿಸಲು ಇನ್ನು ಹೆಚ್ಚುವರಿ ಯಾಗಿ 8 ಕೊಠಡಿಗಳನ್ನು ನಿರ್ಮಿಸಲಾಗಿದೆ ಎಂದರು. ಕಾರ್ಯಕ್ರಮದಲ್ಲಿ ತಾಲೂಕು ಅಧ್ಯಕ್ಷರ ಎಸ್. ಶೇಖರಪ್ಪ ಕಾರ್ಯದರ್ಶಿ ಡಾ.ಕೆ.ಶಿವಪ್ರಸಾದ್ ಖಜಾಂಚಿ ಜೆ.ಸಿ. ಧನಂಜಯ್…
