ಕೂಡ್ಲಿಗಿ; ತಾಲೂಕಿನ ಕಾನಹೊಸಹಳ್ಳಿಯ ವಿದ್ಯಾನಿಕೇತನ/ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಆವರಣದಲ್ಲಿ ರಾಜ್ಯದ ಪ್ರತಿಷ್ಠಿತ ರಂಗಭೂಮಿ ಶಿಕ್ಷಣ ಸಂಸ್ಥೆ ನೀನಾಸಂನಿಂದ ನವೆಂಬರ್ 9 ಮತ್ತು 10ರಂದು ಸಾಂಸ್ಕೃತಿಕ ಹಬ್ಬ ಆಯೋಜಿಸಲಾಗಿದೆ ಎಂದು ವಿದ್ಯಾಸಂಸ್ಥೆಯ ಸಂಸ್ಥಾಪಕರಾದ ಕೆ ಎಂ ಶಶಿಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸತತ 75 ವರ್ಷಗಳಿಂದ ರಂಗಭೂಮಿಗೆ ತನ್ನದೇ ಆದ ಅಪಾರ ಸೇವೆ ಸಲ್ಲಿಸುತ್ತಿರುವ ರಾಜ್ಯ ಪ್ರತಿಷ್ಠಿತ ರಂಗಭೂಮಿ ಶಿಕ್ಷಣ ಸಂಸ್ಥೆಯಾದ ನೀನಾಸಂ ತಂಡವು ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಇದೆ ಪ್ರಪ್ರಥಮ ಬಾರಿಗೆ ನಮ್ಮ ಕಾನ ಹೊಸಹಳ್ಳಿಯಲ್ಲಿ ವಿಶೇಷ ನೀನಾಸಂ ನಾಟಕೋತ್ಸವವನ್ನು ತನ್ನ ರಂಗಭೂಮಿ ಪರಂಪರೆಯನ್ನು ಮುಂದುವರಿಸಲು ನಾಡಿನ ಸಂಸ್ಕೃತಿ, ನಾಟಕ, ಸಾಹಿತ್ಯ ಮತ್ತು ಕಲೆಯ ಮೌಲ್ಯವನ್ನು ಬೆಳಗಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಿದೆ ಎಂದು ಅವರು ತಿಳಿಸಿದರು. ಸುತ್ತಮುತ್ತಲಿನ ಎಲ್ಲಾ ಸಾಹಿತ್ಯ ಮತ್ತು ರಂಗಭೂಮಿ ಅಭಿಮಾನಿಗಳು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸೋಣ ಎಂದು ಕಾರ್ಯದರ್ಶಿ ಕೆ ಎಂ ಹರ್ಷವರ್ಧನ್ ತಿಳಿಸಿದರು. ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ ಅಜಯ್ 8123302594, ದಯಾನಂದ್ ಸಜ್ಜನ್ 9886972975
Author: Team Sanchalana
ಕೂಡ್ಲಿಗಿ ತಾಲೂಕಿನ ಕಾನಾಹೊಸಹಳ್ಳಿ ಸಮೀಪದ ಗಡಿಗ್ರಾಮ ಕಾನಾಮಡುಗು ಗ್ರಾಮದಲ್ಲಿ ಶವ ಸಂಸ್ಕಾರ ಮಾಡಲು ಪರದಾಡುವ ಪರಿಸ್ಥಿತಿ ಎದುರಾಗಿದೆ. ಶುಕ್ರವಾರ ವೃದ್ದೆಯೊಬ್ಬರು ವಯೊ ಸಹಜ ಮೃತರಾಗಿದ್ದು, ಅಂತ್ಯ ಸಂಸ್ಕಾರ ಮಾಡಲು ರುದ್ರ ಭೂಮಿಗೆ ತೆರಳಿ ಕುಣಿ ತೆಗೆದ ಸಂದರ್ಭದಲ್ಲಿ ಕುಣಿಯಲ್ಲಿ ನೀರು ತುಂಬಿಕೊಂಡು ಸ್ಮಶಾನ ಜಲಾವೃತವಾಗಿದೆ. ಕಾನಾಮಡುಗು ಗ್ರಾಮದಲ್ಲಿ 4 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದ್ದು, ಸುಪ್ರಸಿದ್ಧ ಶರಣಬಸವೇಶ್ವರರ ದಾಸೋಹ ಮಠವು ಇದೇ ಗ್ರಾಮದಲ್ಲಿ ಇದೆ. ಈ ಗ್ರಾಮದಲ್ಲಿ ಸರಿಯಾದ ಸ್ಮಶಾನ ಇಲ್ಲ, ಸದ್ಯ ಎರಡು ಎಕರೆ ಸ್ಮಶಾನ ಭೂಮಿ ಎಂದು ಗುರುತು ಮಾಡಿದ್ದು ಅದು ಕೂಡ ಅತಿಕ್ರಮಣವಾಗಿದೆ ಎನ್ನಲಾಗುತ್ತಿದೆ. ಕಳೆದ ಎರಡು ವರ್ಷಗಳಿಂದ ಮಳೆ ಜಾಸ್ತಿಯಾಗಿ ಹಾಗೂ ಪಕ್ಕದ ಜಗಳೂರು ತಾಲೂಕಿನ ಅಣಬೂರು ಗ್ರಾಮದ ಕೆರೆಗೆ ನೀರು ಬಂದಿರುವುದರಿಂದ ಸ್ಮಶಾನವೆಲ್ಲ ಜಲಾವೃತವಾಗಿದೆ, ಕೂಡಲೆ ಗ್ರಾಮಕ್ಕೆ ಸೂಕ್ತ ಸ್ಮಶಾಲ ಕಲ್ಪಿಸಿಕೊಡಬೇಕೆಂದು ಗ್ರಾಮದ ದಲಿತ ಸಮುದಾಯದ ಮುಖಂಡರುಗಳಾದ ಪಕ್ಕೀರಪ್ಪ, ದುರುಗಪ್ಪ,ಹನುಮಂತಪ್ಪ,ಗಂಗಪ್ಪ,ಎಂ ಶರಣಪ್ಪ,ನಿಂಗಪ್ಪ, ಮಾಸ್ತಪ್ಪ,ತಿಪ್ಪೇಸ್ವಾಮಿ ಒತ್ತಾಯಿಸಿದ್ದಾರೆ. ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ ಅಜಯ್ 8123302594, ದಯಾನಂದ್ ಸಜ್ಜನ್ 9886972975
ವಿಜಯನಗರ: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಮುಖ್ಯಮಂತ್ರಿ ಬದಲಾವಣೆ ಕುರಿತು ಮಾಜಿ ಸಚಿವ ಶ್ರೀರಾಮುಲು ಅವರು ಮಹತ್ವದ ಭವಿಷ್ಯ ನುಡಿದಿದ್ದಾರೆ. ಬೆಳಗಾವಿ ಅಧಿವೇಶನದ ವೇಳೆಗೆ ರಾಜ್ಯಕ್ಕೆ ಹೊಸ ಮುಖ್ಯಮಂತ್ರಿಯೊಬ್ಬರು ಆಗಮಿಸಲಿದ್ದಾರೆ ಎಂದು ಅವರು ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಹೇಳಿಕೆ ನೀಡಿದ್ದಾರೆ. d09bf4e2-f919-4507-b1f5-2aa6f45c47ecಬೆಳಗಾವಿ ಅಧಿವೇಶನದ ಹೊತ್ತಿಗೆ ರಾಜ್ಯಕ್ಕೆ ಹೊಸ ಮುಖ್ಯ ಮಂತ್ರಿ ಬರಲಿದ್ದಾರೆ. ನವೆಂಬರ್ ಕ್ರಾಂತಿಯಲ್ಲಿ ಡಿ.ಕೆ. ಶಿವಕುಮಾರ್ ಅವರಂತೂ ಮುಖ್ಯ ಮಂತ್ರಿಯಾಗುವುದಿಲ್ಲ. 2028ರ ತನಕ ಡಿಕೆಶಿ ಮುಖ್ಯ ಮಂತ್ರಿಯಾಗುವುದಿಲ್ಲ, ಡಿ.ಕೆ. ಶಿವಕುಮಾರ್ ಅವರು ಸದ್ಯ ಕೆಪಿಸಿಸಿ ಅಧ್ಯಕ್ಷ ಸ್ಥಾನದೊಂದಿಗೆ ಉಪ ಮುಖ್ಯಮಂತ್ರಿಯೂ ಆಗಿದ್ದು, ನಾಲ್ಕೈದು ಖಾತೆಗಳೊಂದಿಗೆ ಬೆಂಗಳೂರನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ. ಅವರಿಗೆ ಬಹಳ ಜವಾಬ್ದಾರಿಗಳಿದ್ದು, ಅವುಗಳನ್ನೇ ಮುಂದುವರಿಸಿಕೊಂಡು ಹೋಗಲಿದ್ದಾರೆ ಎಂದರು. ಮೂರನೇ ವ್ಯಕ್ತಿ ಮುಖ್ಯ ಮಂತ್ರಿಯಾಗಲಿದ್ದು, ಯಾರು ಎಂಬ ಪ್ರಶ್ನೆ ಇದೆ. ಯಾರೇ ಮುಖ್ಯಮಂತ್ರಿಯಾದರೂ, ತಮ್ಮ ಸಮುದಾಯಕ್ಕೆ ಬೆಂಬಲ ನೀಡುತ್ತೀರಾ ಎಂಬ ಪ್ರಶ್ನೆಗೆ ಶ್ರೀರಾಮುಲು ಅವರು ಸತೀಶ್ ಜಾರಕಿಹೊಳಿ ಅವರ ಹೆಸರನ್ನು ಪ್ರಸ್ತಾಪಿಸಿ ಮಾತನಾಡಿದರು. ಸತೀಶ್ ಜಾರಕಿಹೊಳಿ ಅವರು ಹಿಂದಿನಿಂದಲೂ ಅಹಿಂದ ನಾಯಕರಾಗಿದ್ದಾರೆ.…
ಕೂಡ್ಲಿಗಿ; ಗಾಣಿಗ ಸಮುದಾಯವು ಪ್ರತಿಯೊಂದು ಕ್ಷೇತ್ರದಲ್ಲೂ ಉತ್ತಮ ಸಾಧನೆ ಮಾಡಲು ಪ್ರಯತ್ನಿಸಬೇಕು, ಜತೆಗೆ ಸಮಾಜದ ಜತೆ ಉತ್ತಮ ಬಾಂದವ್ಯದೊಂದಿಗೆ ಅಭಿವೃದ್ದಿಯತ್ತ ಸಾಗಬೇಕಿದೆ ಎಂದು ಬಿಜಾಪುರದ ಗಾಣಿಗ ಸಮಾಜದ ವನಶ್ರೀ ಸಂಸ್ಥಾನ ಮಠದ ಡಾ. ಜಯಬಸವ ಕುಮಾರಸ್ವಾಮಿ ನುಡಿದರು. ತಾಲೂಕಿನ ಕಾನಹೊಸಹಳ್ಳಿಯ ಗಾಣಿಗ ಸಮುದಾಯ ಭವನದಲ್ಲಿ ಈಚೇಗೆ ಆಯೋಜಿಸಿದ್ದ ಹೆಚ್ಚುವರಿ ಕೊಠಡಿಗಳಿಗೆ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು, ಸಮುದಾಯ ವಿದ್ಯಾರ್ಥಿಗಳು ಸೇರಿದಂತೆ ಎಲ್ಲ ಸಮುದಾಯಗಳ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಒಂದು ಶಾಲೆ ಮತ್ತು ಹಾಸ್ಟೇಲ್ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಎಲ್ಲಾ ರೀತಿಯಿಂದಲೂ ಸಹಕಾರ ನೀಡಲಾಗುವುದು ಎಂದ ಅವರು. ಕೂಡ್ಲಿಗಿ ಭಾಗದ ಗಾಣಿಗರ ಸಂಘವು ಆಸಕ್ತಿಯಿಂದ ಕಾರ್ಯಕ್ರಮಗಳನ್ನು ಮಾಡುತ್ತಿದ್ದು, ಇದೇ ರೀತಿ ಮುಂದುವರೆಯಲಿ ಎಂದು ಅಶಿರ್ವಚ ನೀಡಿದರು. ವಿಜಯನಗರ ಜಿಲ್ಲಾಧ್ಯಕ್ಷ ಜಿ ಉಮೇಶ್, ಸಮುದಾಯ ಭವನದಲ್ಲಿ ಕೊಠಡಿಗಳ ಕೊರತೆಯನ್ನು ನೀಗಿಸಲು ಇನ್ನು ಹೆಚ್ಚುವರಿ ಯಾಗಿ 8 ಕೊಠಡಿಗಳನ್ನು ನಿರ್ಮಿಸಲಾಗಿದೆ ಎಂದರು. ಕಾರ್ಯಕ್ರಮದಲ್ಲಿ ತಾಲೂಕು ಅಧ್ಯಕ್ಷರ ಎಸ್. ಶೇಖರಪ್ಪ ಕಾರ್ಯದರ್ಶಿ ಡಾ.ಕೆ.ಶಿವಪ್ರಸಾದ್ ಖಜಾಂಚಿ ಜೆ.ಸಿ. ಧನಂಜಯ್…
ಕೂಡ್ಲಿಗಿ; ಪ್ರಸುತ್ತ ಸಮಾಜದಲ್ಲಿ ಅಭಿವೃದ್ದಿಗೆ ಮಾರಕವಾಗಿರುವ ಭ್ರಷಾಚಾರದ ಪೀಡಗೂ ಹೆಚ್ಚಾಗಿದೆ. ಅಲ್ಲದೆ, ಸರ್ಕಾರಿ ಕಚೇರಿಗಳಲ್ಲಿ ಆದರ ಸಮಸ್ಯೆಯು ತೀವ್ರವಾಗಿದೆ, ಆ ಪೀಡಗು ನಿಮೂರ್ಲನೆಗಾಗಿ ಸಾರ್ವಜನಿಕರು ಕೈಜೋಡಿಸಬೇಕೆಂದು ಕೇಂದ್ರೀಯ ಜವಾಹರ್ ನವೋದಯ ವಿದ್ಯಾಲಯದ ಪ್ರಾಚಾರ್ಯ ಸುದೇಶ್ ಗೋಪಾಲ್ ಮಲಾಜುರೇ ತಿಳಿಸಿದರು. ಕಾನಹೊಸಹಳ್ಳಿ ಸಮೀಪದ ಚಿಕ್ಕಜೋಗಿಹಳ್ಳಿ ಪಿಎಂಶ್ರೀ ಜವಾಹರ್ ನವೋದಯ ವಿದ್ಯಾಲಯದ ವಿದ್ಯಾರ್ಥಿಗಳಿಂದ ಶುಕ್ರವಾರ ನಡೆದ ಭ್ರಷ್ಟಾಚಾರ ವಿಮುಕ್ತ ಸಮಾಜದ ಪರಿಕಲ್ಪನೆಗಾಗಿ ಜಾಗೃತ ಸಪ್ತಾಹ ಕಾರ್ಯಕ್ರಮ ನಿಮಿತ್ತ ಹಮ್ಮಿಕೊಂಡಿದ್ದ ರ್ಯಾಲಿಗೆ ಚಾಲನೆ ನೀಡಿ ಮಾತನಾಡಿದರು. ಭ್ರಷ್ಟಾಚಾರ ನಿರ್ಮೂಲನೆ ಮಾಡದಿದ್ದರೆ ಸಶಕ್ತ ಭಾರತ ಕಟ್ಟಲು ಸಾಧ್ಯವಿಲ್ಲ. ಭ್ರಷ್ಟಾಚಾರವನ್ನು ಬುಡ ಸಮೇತ ಕಿತ್ತೆಸೆಯಬೇಕು ಹಾಗಾಗಿ ಸಾರ್ವಜನಿಕರು ಈ ಹೋರಾಟಕ್ಕೆ ಸಹಕಾರ ಇರಬೇಕು ಮತ್ತು ಕಚೇರಿಗಳ ತೆರಳುವ ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗೆ ಅಧಿಕಾರಿಗಳಿಗೆ ಲಂಚ ನೀಡುವುದನ್ನು ಕೈಬಿಡಬೇಕು. ಅದರ ವಿರುದ್ದ ದ್ವನಿ ಎತ್ತಬೇಕೆಂದರು. ವಿದ್ಯಾಲಯದ ಭಾರತ್ ಸ್ಕೌಟ್ ಗೈಡ್, ಎನ್.ಸಿ.ಸಿ ವಿದ್ಯಾರ್ಥಿಗಳು ಸೇರಿ ರ್ಯಾಲಿ ಮೂಲಕ ಗ್ರಾಪಂ ಕಚೇರಿಗೆ ತೆರಳಿ ಕಾರ್ಯದರ್ಶಿ ಯು.ಎಂ.ಪ್ರಕಾಶಗೆ ಮನವಿ ಸಲ್ಲಿಸಿದರು. ನಂತರ…
ಕೂಡ್ಲಿಗಿ; ತಾಲೂಕಿನ ಮೂಲಕಟ್ಟಿನ ಓಬಳಶೆಟ್ಟಿಹಳ್ಳಿ ಗ್ರಾಮದ ಗ್ರಾಮೀಣ ಪ್ರದೇಶದಲ್ಲಿನ ಸಾವಿರಾರು ಗರ್ಭಿಣಿ ಮಹಿಳೆಯರಿಗೆ ಹೆರಿಗೆ ಮಾಡಿದ್ದ ಸೈ ಎನ್ನಿಸಿಕೊಂಡಿದ್ದ ಶತಾಯುಷಿ ಸೂಲಗಿತಿ ಈರಮ್ಮಗೆ ೨೦೨೫-೨೬ ಸಾಲಿನಲ್ಲಿ ರಾಜ್ಯ ಸರ್ಕಾರ ಕೊಡುವ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಈರಮ್ಮಾಜ್ಜಿಯ ಸುಮಾರು ೭೦ ವರ್ಷಗಳಿಂದ ಸಾವಿರಾರು ಗರ್ಭಿಣಿ ಮಹಿಳೆಯರಿಗೆ ಹೆರಿಗೆ ಮಾಡಿಸಿದ ಕೀರ್ತಿ ಈ ಅಜ್ಜಿಗೆ ಇದೆ. ಇಂತಹ ಶತಾಯಷಿ ಈರಮ್ಮಜ್ಜಿಗೆ ಕೊನೆಗಾಲದಲ್ಲಿ ಸರ್ಕಾರ ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿ ನೀಡುವುದು ಅಜ್ಜಿಯ ಸೇವೆಗೆ ಮನ್ನಣೆ ಗೌರವ ಸಿಕ್ಕಿದೆ. ಸೂಲಗಿತ್ತಿ ಈರಮ್ಮಾಜ್ಜಿಗೆ ಈಗ ೧೦೩ವರ್ಷ ತುಂಬಿದೆ. ೩೦ನೇ ವಯಸ್ಸಿನಿಂದ ಗರ್ಭಿಣೆ ಮಹಿಳೆಯರಿಗೆ ಹೆರಿಗೆ ಕಾಯಕ ಪ್ರಾರಂಭಿಸಿದ್ದ ಅಜ್ಜಿ, ನಿರಂತರವಾಗಿ ೭೦ವರ್ಷಗಳ ಕಾಲ ಸೇವೆ ಮಾಡುವ ಮೂಲಕ ಸಾವಿರಾರು ಮಹಿಳೆಯರ ಬಾಳಿಗೆ ಬೆಳಕಾದವಳು. ಅಜ್ಜಿಯ ಜೀವತಾಧಿಯಲ್ಲಿ ಸರಿಸುಮಾರು ೮ರಿಂದ ೧೦ಸಾವಿರದ ವರಿಗೆ ಹೆರಿಗೆ ಮಾಡಿಸಿ, ಎಲೆ ಮರೆಯ ಕಾಯಿಯಂತೆ ಜೀವಿಸುತ್ತಿರುವ ಸೂಲಗಿತ್ತಿ ಈರಮ್ಮ ನಮ್ಮ ನಡುವಿನ ಆದರ್ಶವಾಗಿ ಜೀವಿಸುತ್ತಿದ್ದಾಳೆ. ಅನಕ್ಷರಸ್ಥೆಯಾಗಿರುವ ಈ ಅಜ್ಜಿ ವೈದ್ಯರಿಗೆ ಸವಾಲು ಸೂಲಗಿತ್ತಿ ಕಾಯಕವನ್ನು…
ಕೊಟ್ಟೂರು; ಬೆಳೆದ ಬೆಳೆ ಲಾಸ್ ಆಗಿ , ಬ್ಯಾಂಕ್ ಸಾಲ ತೀರಿಸಲಾಗದೇ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಟ್ಟೂರು ತಾಲೂಕಿನ ಅಲಬೂರು ಗ್ರಾಮದಲ್ಲಿ ನಡೆದಿದೆ. ದುರ್ಗಪ್ಪ( 50) ಆತ್ಮಹತ್ಯೆ ಮಾಡಿಕೊಂಡ ರೈತ, ಬ್ಯಾಂಕ್ ಲೋನ್ ಒಂದೂವರೇ ಲಕ್ಷ, ೫೦ ಸಾವಿರ ಕೈ ಸಾಲ ಮಾಡಿಕೊಂಡಿದ್ದರು. ಇಟ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೂಡ್ಲಿಗಿ; ತಾಲೂಕಿನ ಹುಲಿಕೆರೆಯಲ್ಲಿ ರಸ್ತೆ ಅಭಿವೃದ್ದಿ ಹೆಸರನಲ್ಲಿ ನಡೆಸುತ್ತಿರುವ ಕಾಮಗಾರಿ ಮೂಲಕ ಕೆರೆ ಕೋಡಿಯ ಎತ್ತರವನ್ನು ತಗಿಸುತ್ತಿದ್ದು ಯಥಾಸ್ಥಿತಿ ಕಾಪಾಡುವಂತೆ ಗ್ರಾಮಸ್ಥರು ಬುಧವಾರ ಒತ್ತಾಯಿಸಿದರು. ಕೆರೆ ಕೋಡಿ ಬಳಿ ನಡೆಯುತ್ತಿರುವ ದುರಸ್ಥಿ ಕಾರ್ಯದ ಸ್ಥಳದಲ್ಲಿ ನೆರೆದ ಗ್ರಾಮಸ್ಥರು ಸುದ್ದಿಗಾರರ ಜತೆ ಮಾತನಾಡಿದರು, ದುರಸ್ತಿ ಕಾರ್ಯದ ಮೂಲಕ ಕೆರೆಯ ಕೋಡಿಯ ಎತ್ತರವನ್ನು 1 ಅಡಿಗು ಅಧಿಕ ತಗ್ಗಿಸಲು ಅಗೆದಿದ್ದು, ಅವೈಜ್ಞಾನಿಕ ಕಾಮಗಾರಿಗೆ ಮುಂದಗಿದ್ದಾರೆ. ಬ್ರಿಟಿಷರ ಕಾಲದಲ್ಲಿದ್ದ ತಡೆಗೊಡೆಗಳನ್ನು ಆಗೆದಿದ್ದು, ಕಬ್ಬಿಣವಿಲ್ಲದೇ ನೇರವಾಗಿ ಕಾಂಕ್ರಿಟ್ ಹಾಕುತ್ತಿದ್ದಾರೆ, ಕಳಪೆ ಕಾಮಗಾರಿ ಮಾಡುವ ಮೂಲಕ ನಮ್ಮ ಕೆರೆಯನ್ನು ನಾಶ ಮಾಡಲು ಹೊರಟ್ಟಿದ್ದಾರೆ ಎಂದು ಗ್ರಾಮಸ್ತರು ಒತ್ತಾಯಿಸಿದರು. ಕೆರೆ ತುಂಬಿದ್ದರಿಂದ ಕೆರೆ ಆವರಣದಲ್ಲಿನ ಅತಿಕ್ರಮಣ ಹಾಗೂ ಪಟ್ಟ ಜಾಗಗಳಲ್ಲಿನ ಮನೆ ಹಾಗೂ ಜಮೀನುಗಳಿಗೆ ನೀರು ನುಗ್ಗಿ ಆವಾಂತರ ಸೃಷ್ಟಿಯಾಗಿತ್ತು, ಜನತೆ ಸಂಕಷ್ಟಕ್ಕೆ ಸಿಲುಕ್ಕಿದ್ದರು. ಕೆರೆಯ ವಿಸ್ತಿರ್ಣವನ್ನು ಸರ್ವೆ ಮಾಡಿ ತಡೆಗೋಡೆ ನಿರ್ಮಿಸುವ ಮೂಲಕ ಅಲ್ಲಿನ ಜನತೆಯ ಹಿತ ಕಾಪಾಡಲು ಶಾಸಕರು, ಜನಪ್ರತಿನಿಧಿಗಳು ಮುಂದಾಗಬೇಕು ಎಂದು ಗ್ರಾಮಸ್ಥರು ಅಲವತ್ತುಕೊಂಡರು. ಇನ್ನು…
ವಿಜಯನಗರ; ಹುಬ್ಬಳ್ಳಿ ಮೂಲದ ಸಿವಿಲ್ ಗುತ್ತಿಗೆದಾರ ಹೂವಿನಹಡಗಲಿಯ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿವಿಲ್ ಗುತ್ತಿಗೆದಾರ ಆನಂದ ಉಮೇಶ್ ಹೆಗಡೆ (40) ಆತ್ಮಹತ್ಯೆ ಮಾಡಿಕೊಂಡಾತ, ಹುಬ್ಬಳ್ಳಿಯ ಭವಾನಿ ನಿವಾಸಿಯಾಗಿದ್ದ ಸಿವಿಲ್ ಗುತ್ತಿಗೆದಾರ ಆನಂದ ಉಮೇಶ್ ಹೆಗಡೆ, ಹೂವಿನಹಡಗಲಿ ಪಟ್ಟಣದ ತಾಲ್ಲೂಕು ಕ್ರೀಡಾಂಗಣ ಅಭಿವೃದ್ಧಿ ಹಾಗೂ ನವೀಕರಣ ಕಾಮಗಾರಿ ಟೆಂಡರ್ ಪಡೆದು ಗುತ್ತಿಗೆ ಕಾಮಗಾರಿ ನಿರ್ವಹಿಸುತ್ತಿದ್ದರು. ಭಾನುವಾರ ಸಂಜೆ ಹುಬ್ಬಳ್ಳಿಯಿಂದ ಹೂವಿನಹಡಗಲಿಗೆ ಬಂದು ಉಳಿದುಕೊಂಡಿದ್ದರು, ಬೆಳಗ್ಗೆಯಾದ್ರೂ ಕುಟುಂಬಸ್ಥರ ಕರೆ ಸ್ವೀಕರಿಸದೇ ಇದ್ದಾಗ ಲಾಡ್ಜ್ ನಂಬರ್ ಗೆ ಕರೆ ಮಾಡಿದ್ದಾರೆ, ಬಾಗಿಲು ತೆಗೆಯದೇ ಇದ್ದಾಗ ಲಾಡ್ಜ್ ಸಿಬ್ಬಂದಿ ಪೊಲೀಸರಿಗೆ ಕರೆ ಮಾಡಿದ್ದಾರೆ. ಪೊಲೀಸರು ಬಾಗಿಲು ಓಪನ್ ಮಾಡಿ ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹೂವಿನಹಡಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೂಡ್ಲಿಗಿ; ತಾಲೂಕಿನ ಕಾನಹೊಸಹಳ್ಳಿಯಲ್ಲಿ ಜನೌಷಧಿ ಕೇಂದ್ರ ತೆರೆಯುವಂತೆ ಹಿಂದೂಳಿದ ಜಾತಿಗಳ ಒಕ್ಕೂಟದಿಂದ ಪ್ರಾಥಮಿಕ ಅರೋಗ್ಯ ಕೇಂದ್ರದ ವ್ಯದ್ಯಾಧಿಕಾರಿ ಎಚ್ ವಿಶ್ವನಾಥ ಅವರಿಗೆ ಸೋಮವಾರ ಮನವಿ ಪತ್ರ ಸಲ್ಲಿಸಲಾಯಿತು. ನಂತರ ಹಿಂದುಳಿದ ಒಕ್ಕೂಟಗಳ ಜಿಲ್ಲಾ ಪ್ರಧಾನ ಕಾರ್ಯದ ಶಿ ಲಕ್ಕಜ್ಜಿ ಮಲ್ಲಿಕಾರ್ಜುನ ಮಾತಾನಾಡಿ, ಕೂಡ್ಲಿಗಿ ತಾಲೂಕಿನ ದೊಡ್ಡ ಹೋಬಳಿ ಕೇಂದ್ರವಾದ ಕಾನಹೊಸಹಳ್ಳಿ ಪಟ್ಟಣ್ಣದಲಿ ಸುಮಾರು 20 ಸಾವಿರಕೂ ಹೆಚ್ಚು ಜನಸಂಖ್ಯೆ ಇದ್ದು, ಸುತ್ತಲೂ ಸುಮಾರು ಐವತ್ತಕ್ಕು ಹೆಚ್ಚು ಹಳ್ಳಿಗಳ ಜನತೆ ಪಟ್ಟಣ್ಣವನು ಅವಲಂಬಿಸಿದ್ದು ಇಲ್ಲಿ ಜನವೌಷದಿ ಕೇಂದ್ರದ ಅಗತ್ಯತೆ ಹೆಚ್ಚಾಗಿದೆ. ಬಿಪಿ, ಶುಗರ್ ಸೇರಿದಂತೆ ಜ್ವರ ಹಾಗು ಇತರೆ ರೋಗಿಗಳಿಗೆ ತುಂಬಾ ಅನಾನುಕೂಲವಾಗಲಿದೆ, ಖಾಸಗಿ ಮೆಡಿಕಲ್ ಶಾಪ್ ಗಳಲ್ಲಿ ಔಷಧಿ ಕೊಂಡುಕೊಳ್ಳುವುದು ಕಷ್ಟಕರವಾಗಲಿದೆ. ಈ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆ ಸೂಕ್ತ ಕ್ರಮಕೈಗೊಂಡರೆ ಬಡ ರೋಗಿಗಳಿಗೆ ಅನುಕೂಲವಾಗಲಿದೆ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಜಿ ಜಿ ವೆಂಕಟೇಶ್, ಎಂ ಎನ್ ಜಯ್ಯಣ್ಣ, ಸಿ ಬಿ ನಾಗೇಶ್, ಕೆ ಚಂದ್ರಪ್ಪ, ಕೆ ಎಚ್ ನಾಗೇಶ್,…
