Author: Team Sanchalana

ಕೂಡ್ಲಿಗಿ; ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟಿಷರ ವಿರುದ್ಧ ಓರ್ವ ಮಹಿಳೆಯಾಗಿ ಕಿತ್ತೂರು ಚನ್ನಮ್ಮ ಹೋರಾಡಿದ್ದು ಇತಿಹಾಸ, ಅವಳ ಹೋರಾಟದ ಕಿಚ್ಚು  ಇಂದಿನ ಯುವಜನರಿಗೆ ಸ್ಪೂರ್ತಿಯಾಗಿದೆ ಎಂದು ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಗುಂಡುಮುಣುಗು ಕೆ ತಿಪ್ಪೇಸ್ವಾಮಿ ಹೇಳಿದರು. ಕೂಡ್ಲಿಗಿ ತಾಲೂಕಿನ ಕಾನಹೊಸಹಳ್ಳಿಯ ಚನ್ನಮ್ಮ ವೃತದಲ್ಲಿ ಸೋಮವಾರ ನಡೆದ ಕಿತ್ತೂರು ಚನ್ನಮ್ಮನ ಜಯಂತಿ ನಿಮಿತ್ತ ಭಾವಚಿತ್ರಕ್ಕೆ ಪುಷ್ಪಾಮಾಲೆ ಸಲ್ಲಿಸಿ ಅವರು ಮಾತನಾಡಿದರು. ಕಿತ್ತೂರು ಸಂಸ್ಥಾನದ ರಾಣಿಯಾಗಿದ್ದ ಚನ್ನಮ್ಮ ಪುತ್ರ ಸಂತಾನವಿಲ್ಲದ ಕಾರಣ ದತ್ತು ಮಗವನ್ನು ಪಡೆದುಕೊಂಡಿದ್ದಳು. ಆದರೆ, ಬ್ರಿಟಿಷ್‌ರು ದತ್ತು ಮಕ್ಕಳಿಗೆ ಹಕ್ಕಿಲ್ಲವೆಂಬ ಕಾನೂನು ಜಾರಿಗೆ ತಂದರು ಇದರ ವಿರುದ್ದ ದ್ವನಿ ಎತ್ತಿದ್ದ ನಾಡಿನ ಮೊದಲ ಸಂಸ್ಥಾನ ಕಿತ್ತೂರು ಅಗಿದ್ದು ಅದರ ವಿರುದ್ದ ಹೋರಾಟ ಮಾಡಿದ ಮೊದಲ ನಾರಿಯಾಗಿದ್ದಾರೆ ಎಂದರು. ಕಾನಮಡಗು ದಾಸೋಹ ಮಠದ ಧರ್ಮಾದಿಕಾರಿ ಐಮಡಿ ಶರಣಾರ್ಯರು ಮಾತನಾಡಿದರು. ಈ ಸಂದರ್ಭದಲ್ಲಿ ಪಂಚಮಸಾಲಿ ಸಮಾಜದ ಮುಖಂಡರಾದ ಎಚ್ ರೇವಣ್ಣ, ಯುವ ಘಟಕದ ರಾಜ್ಯಧ್ಯಕ್ಷ  ಕಿಚಡಿ ಕೊಟ್ರೇಶ್,ತಾಲೂಕು ಅಧ್ಯಕ್ಷ ಮಂಜುನಾಥ, ಗ್ರಾಮ ಪಂಚಾಯತ್ ಅಧ್ಯಕ್ಷ…

Read More

ಕೂಡ್ಲಿಗಿ: ಕ್ಷೇತ್ರದ ಗಡಿಭಾಗದ ಹಳ್ಳಿಗರ ಆರೋಗ್ಯ ಸುಧಾರಣೆಗೆ ಅಧ್ಯತೆ ನೀಡುವ ಉದ್ದೇಶದಿಂದ ಮೂಲಕಟ್ಟಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಉನ್ನತೀಕರಣ ಮತ್ತು ಅಗತ್ಯ ಸೌಲಭ್ಯ ಕಲ್ಲಿಸಲಾಗುವುದು ಎಂದು ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ತಿಳಿಸಿದರು. ತಾಲೂಕಿನ ಆಲೂರು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು 2ಕೋಟಿ ವೆಚ್ಚದ ಉನ್ನತೀಕರಣ ಕಾಮಗಾರಿಗೆ ಶನಿವಾರ ಚಾಲನೆ ಮಾತನಾಡಿದರು. ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಮತ್ತು ರಾಷ್ಟ್ರೀಯ ಹೆದ್ದಾರಿ 5೦ಕ್ಕೆ ಹೊಂದಿಕೊಂಡಿರುವ ಆಲೂರು ಆಸ್ಪತ್ರೆಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕಿರುವುದು ಅನಿವಾರ್ಯತೆ ಇತ್ತು. ಈಗಾಗಿ ಜಿಲ್ಲಾ ಖನಿಜ ನಿಧಿ 2ಕೋಟಿ ವೆಚ್ಚದಲ್ಲಿ ಕಾಮಗಾರಿ ಮಾಡಲಾಗುವುದು. ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಪ್ರಕರಣ ಗಣನೀಯವಾಗಿ ಜರುಗುವುದರಿಂದ ಅಗತ್ಯ ಚಿಕಿತ್ಸೆ ಸೌಲಭ್ಯ ಕಲ್ಪಿಸಬೇಕಿದೆ. ಮುಂಬರುವ ದಿನಗಳಲ್ಲಿ ಏಕ್ಸರೇಯಂತಹ ಸೌಲಭ್ಯಕ್ಜೆ ಅಧತ್ಯೆ ನೀಡಲಾಗುವುದು ಎಂದರು. ಈಗಾಲೆ ವೈದ್ಯ ಮತ್ತು ಸಿಬ್ಬಂದಿ ವಸತಿ ನಿಲಯಗಳ ಕಟ್ಟಲು ಕ್ರಮಕೈಗೊಳಲಾಗಿದೆ ಎಂದರು. ಈ ಸಂದರ್ಭದಲ್ಲಿ ಕಾನಾಮಡುಗು ಶರಣಬಸವೇಶ್ವರ ದಾಸೋಹಮಠದ ದಾ.ಮ.ಐಮುಡಿ ಶರಣಾರ್ಯರು, ಗ್ರಾಪಂ ಅಧ್ಯಕ್ಷೆ ಉಮಾದೇವಿ, ಉಪಾಧ್ಯಕ್ಷೆ ಚೌಡಮ್ಮ, ಮಾಜಿ ಜಿಪಂ ಸದಸ್ಯ ಕೆ.ಎಂ.ಶಶಿಧರ್, ತಾಪಂ…

Read More

ವಿಜಯನಗರ; ಶಿವಮೊಗ್ಗ, ಚಿಕ್ಕಮಗಳೂರು ಸಹಿತ ಅಚ್ಚುಕಟ್ಟು ಪ್ರದೇಶದಲ್ಲಿ ಹೆಚ್ಚು ಮಳೆಯಾದರಿಂದ ತುಂಗಭದ್ರಾ ನದಿಯಲ್ಲಿ ನೀರಿನ ಒಳಹರಿವು ಹೆಚ್ಚಳವಾಗಿದೆ. ಈ ಹಿನ್ನಲ್ಲೆಯಲ್ಲಿ ನದಿ ಪಾತ್ರದ ಜ‌ನರಿಗೆ ತುಂಗಭದ್ರಾ ಬೋರ್ಡ್ ಎಚ್ಚರಿಕೆ ಸಂದೇಶ ನೀಡಿದೆ. ತುಂಗಭದ್ರಾ ಗೇಟ್‌ನಿಂದ ನೀರು ಬಿಡುಗಡೆಯ ಎಚ್ಚರಿಕೆ ನೀಡಿದ್ದು, ನಾಳೆ ಬೆಳಿಗ್ಗೆ ಆಣೆಕಟ್ಟೆಯ ಗೇಟ್ ತೆರೆದು ನೀರನ್ನು ಹರಿಸಲಾಗುವುದು ಎಂದು ಮಂಡಳಿ ಎಚ್ಚರಿಕೆ ನೀಡಿದೆ. ತುಂಗಾ ಜಲಾಶಯದಿಂದ 12 ಸಾವಿರ ಕ್ಯೂಸೆಕ್‌, ಭದ್ರಾ ಜಲಾಶಯದಿಂದ 2 ಸಾವಿರ ಕ್ಯೂಸೆಕ್‌ ಹಾಗೂ ವರದಾ ನದಿಯಿಂದ 2 ಸಾವಿರ ಕ್ಯೂಸೆಕ್‌ ನೀರು ನದಿಗೆ ಹರಿದು ಬರುತಿದೆ. ನಾಳೆ ಬೆಳಿಗ್ಗೆ ಒಳಹರಿವಿನ ಪ್ರಮಾಣ 25 ಸಾವಿರ ಕ್ಯೂಸೆಕ್‌ಗೆ ಹೆಚ್ಚುವ ನಿರೀಕ್ಷೆ ಇದೆ. ಹೀಗಾಗಿ ಕೆಲವು ಗೇಟ್‌ಗಳನ್ನು ತೆರೆದು 5 ಸಾವಿರ ಕ್ಯೂಸೆಕ್‌ನಿಂದ 20 ಸಾವಿರ ಕ್ಯೂಸೆಕ್‌ನಷ್ಟು ನೀರನ್ನು ನದಿಗೆ ಹರಿಸುವ ಸಾಧ್ಯತೆ ಇದ್ದು, ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಮಂಡಳಿ ಎಚ್ಚರಿಕೆ ಸಂದೇಶ ನೀಡಿದೆ. ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ ಅಜಯ್…

Read More

ಕೊಟ್ಟೂರು: ಅಂಚೆ ಇಲಾಖೆ ನೌಕರನೊಬ್ಬ ಇಲಾಖೆ ಮೇಲಿನ ಅಭಿಮಾನ ಹಾಗೂ ಋಣ ತೀರಿಸುವದಕ್ಕಾಗಿ ತಾನು ನಿರ್ಮಿಸಿರುವ ‘ಮನೆಗೆ ಅಂಚೆ ಮನೆ’ ಎಂಬ ಹೆಸರು ನಾಮಕರಣ ಮಾಡಿರುವುದಲ್ಲದೇ, ಮನೆ ಪ್ರವೇಶ ಆಮಂತ್ರಣ ಪತ್ರಿಕೆ ಅಂಚೆ ಕಾರ್ಡ್ ನಲ್ಲಿ ಮುದ್ರಿಸುವ ಮೂಲಕ ಗಮನ ಸೆಳೆದಿದ್ದಾರೆ. 34 ವರ್ಷಗಳಿಂದಿರುವ ಅಂಚೆ ಇಲಾಖೆಯಲ್ಲಿ ಕೆಲಸ ಮಾಡ್ತಿರೋ ಕೆ.ಕೊಟ್ರೇಶ ಅವರು ಅಂಚೆ ಕೊಟ್ರೇಶ ಎಂದೇ ಪರಿಚಿತರು. ಕೊಟ್ಟೂರಿನಲ್ಲಿ ಈ ಹೆಸರಿನವರು ಸಾಕಷ್ಟು ಜನರಿರುವುರಿಂದ ಮತ್ತು ಅಂಚೆ ಇಲಾಖೆಯಲ್ಲಿ ಕೆಲಸಕ್ಕೆ ಸೇರಿದ ಮೇಲೆ ಇವರ ಹೆಸರಿನೊಂದಿಗೆ ಅಂಚೆ ಸೇರಿಕೊಂಡಿದೆ. ಅಂಚೆ ಸಹಾಯಕರಾಗಿ ಸೇರಿದ್ದ ಇವರು ಕೊಟ್ಟೂರು, ಧಾರವಾಡ, ಕಲಬುರಗಿ, ಯಾದಗಿರಿ, ಕಂಪ್ಲಿ, ಬಳ್ಳಾರಿ, ಕೂಡ್ಲಿಗಿ, ಹರಪನಹಳ್ಳಿಗಳಲ್ಲಿ ಕರ್ತವ್ಯ ನಿರ್ವಹಿಸಿ ಇದೀಗ ಹೂ.ಹಡಗಲಿ ಕಚೇರಿಯಲ್ಲಿ ತಾಲೂಕು ಪೋಸ್ಟ್ ಮಾಸ್ಟರ್ ಆಗಿದ್ದಾರೆ. ಕೊಟ್ಟೂರಿನ ಬಸವೇಶ್ವರ ನಗರದಲ್ಲಿ ನಿರ್ಮಿಸಿರುವ ಹೊಸ ಮನೆಗೆ ‘ ಅಂಚೆ ಮನೆ’ ಎಂದು ಹೆಸರಿಟ್ಟು, ಅಕ್ಟೋಬರ್ 26 ರಂದು ಗೃಹ ಪ್ರವೇಶ ಮಾಡ್ತಿದ್ದಾರೆ. ಆಡಂಬರದ ಅಮಂತ್ರಣ ಪತ್ರಿಕೆ ಮುದ್ರಣ ಮಾಡಿಸದೇ,…

Read More

ಬೆಂಗಳೂರು: ಹವಾಮಾನ ಇಲಾಖೆ (IMD)ಯು ಇಂದಿನಿಂದ 4 ದಿನಗಳ ಕಾಲ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ಇದರ ಪರಿಣಾಮವಾಗಿ, ಅಕ್ಟೋಬರ್ 25 ರವರೆಗೆ ರಾಜ್ಯದಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು, ಉತ್ತರದ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಸಂಜೆಯ ನಂತರ ಗುಡುಗು ಸಹಿತ ಮಳೆ ಸಾಧ್ಯತೆ ಇದ್ದು, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಸಹಿತ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Read More

ಕೂಡ್ಲಿಗಿ; ಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿರುವ ಘಟನೆ ಕೂಡ್ಲಿಗಿ ತಾಲೂಕಿನ ಬಣವಿಕಲ್ಲು ಬಳಿಯ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಶನಿವಾರ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಮೋಹನ್ (27) ಗಂಭೀರವಾಗಿ ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಮೋಹನ್ ಕೂಡ್ಲಿಗಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು. ಸ್ಥಳಕ್ಕೆ ಕಾನಹೊಸಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಧಾವಿಸಿದ ಹೆದ್ದಾರಿ ಸಹಾಯಕರು, ಸ್ಥಳೀಯರು, ಹೈವೆ ಸಿಬ್ಬಂದಿ, ಪೊಲೀಸರು ನೆರವಿಗೆ ಧಾವಿಸಿದ್ದಾರೆ. ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ ಅಜಯ್ 8123302594, ದಯಾನಂದ್ ಸಜ್ಜನ್ 9886972975

Read More

ವಿಜಯನಗರ; ಸ್ಟ್ರೋಕ್ ಆಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರೇಹಡಗಲಿ ಪೊಲೀಸ್ ಠಾಣೆಯ ಕ್ರೈಂ ಪಿಎಸ್ಐ ಮೃತಪಟ್ಟಿದ್ದಾರೆ. ತಿಮ್ಮಪ್ಪ ಜೋಗಿನ(59) ಮೃತ ಪಿಎಸ್ಐ , ಮೂಲತಃ ಹರಪನಹಳ್ಳಿ ಪಟ್ಟಣದವರಾಗಿರೋ ತಿಮ್ಮಪ್ಪ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಹಿರೇಹಡಗಲಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಣೆ ಮಾಡ್ತಿದ್ದರು. 32 ವರ್ಷಗಳ ಕಾಲ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಕೆ ಮಾಡಿದ್ದ ತಿಮ್ಮಪ್ಪ ಅವರಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ವಿಜಯನಗರ ಜಿಲ್ಲೆಯ ಎಸ್ಪಿ ಜಾಹ್ನವಿ, ಎಎಸ್ಪಿ ಮಂಜುನಾಥ್ ಸೇರಿದಂತೆ ಪೊಲೀಸ್ ಇಲಾಖೆಯಿಂದ ಸಂತಾಪ ಸೂಚಿಸಲಾಗಿದೆ. ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ ಅಜಯ್ 8123302594, ದಯಾನಂದ್ ಸಜ್ಜನ್ 9886972975

Read More

ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ನಾಳೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ ಮತ್ತು ಶಿವಮೊಗ್ಗ ಸೇರಿದಂತೆ ಈ ಪ್ರದೇಶದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿ ಮತ್ತು ಘಟ್ಟ ಪ್ರದೇಶ: ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಕೆಲವು ತಾಲೂಕುಗಳಲ್ಲಿ (ಬೆಳ್ತಂಗಡಿ, ಪುತ್ತೂರು, ಸುಳ್ಯ, ಕುಂದಾಪುರ ಮತ್ತು ಕಾರ್ಕಳದಲ್ಲಿ) ಭಾರೀ ಮಳೆಯಾಗುವ ಸಂಭವವಿದೆ. ಹವಾಮಾನ ವೈಪರೀತ್ಯದ ಕಾರಣ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಉತ್ತರ ಒಳನಾಡು: ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದ ಮಳೆ ಅಥವಾ ಮೋಡ ಕವಿದ ವಾತಾವರಣ ಇರಲಿದೆ. ಒಟ್ಟಾರೆಯಾಗಿ, ರಾಜ್ಯದಲ್ಲಿ ನಾಳೆ…

Read More

ಕೂಡ್ಲಿಗಿ; ತಾಲೂಕಿನ ಗುಡೇಕೊಟೆ ಬಳಿಯ ಕಸಾಪುರದ ಬಳಿ ನಿರ್ಮಾಣವಾಗಿರು ರಾಜ್ಯದ ಮೊದಲ ಹುಣಸೆ ಹಾಗೂ ಶೇಂಗಾ ಸಂಸ್ಕರಣ ಘಟಕವನ್ನು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಶುಕ್ರವಾರ ಲೋಕಾರ್ಪಣೆ ಮಾಡಿದರು. ಕೂಡ್ಲಿಗಿಯೂ ಅತಿ ಹೆಚ್ಚು ಹುಣಸೆ ಬೆಳೆಯೋ ನಾಡಾಗಿದ್ದು, ತಾಲೂಕು ಸೇರಿದಂತೆ ಸುತ್ತಮುತ್ತಲಿನ ರೈತರಿಗೆ ಘಟಕದಿಂದ ಅನುಕೂಲವಾಗಲಿದೆ. ರಾಜ್ಯ ಸೇರಿದಂತೆ ಆಂದ್ರಪ್ರದೇಶ, ತೆಲಂಗಾಣ ರೈತರಿಗೂ ಸಹ ಹುಣಸೆ, ಶೇಂಗಾ ಘಟಕ ಅನುಕೂಲವಾಗಲಿದೆ. ಬಳ್ಳಾರಿ ಸಂಸದ ತುಕಾರಾಂ, ಕೂಡ್ಲಿಗಿ ಶಾಸಕ ಡಾ. ಎನ್ ಟಿ ಶ್ರೀನಿವಾಸ್, ಹರಪನಹಳ್ಳಿ ಶಾಸಕಿ ಎಂಪಿ ಲತಾ ಮಲ್ಲಿಕಾರ್ಜುನ, ಡಿಸಿ ಕವಿತಾ ಮನ್ನಿಕೇರಿ ಸೇರಿದಂತೆ ಇತರರು ಸಾಥ್ ನೀಡಿದರು. ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ ಅಜಯ್ 8123302594, ದಯಾನಂದ್ ಸಜ್ಜನ್ 9886972975

Read More

ಹೊಸಪೇಟೆಯಲ್ಲಿ ಹೊಟೇಲ್ ಉದ್ಯಮಿಯ ಮೇಲೆ ಬೆಳ್ಳಂಬೆಳಗ್ಗೆ ಜಾರಿ ನಿರ್ದೇಶನಾಲಯ(ED) ದಾಳಿ ನಡೆಸಿದೆ. ಶ್ರೀನಿವಾಸ್ ರಾವ್( ಸೀನಾಬಾಬು ) ರವರ ಪ್ರಿಯದರ್ಶನೀ ಹೋಟೆಲ್, ವಿನಾಯಕ ನಗರದ ಮನೆ ಮತ್ತು ಬಸವೇಶ್ವರ ಬಡಾವಣೆಯ ಮನೆಯ ಮೇಲೆ ಇಡಿ ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಸೀನಬಾಬು, ಗಣಿ ಗುತ್ತಿಗೆ ಹಾಗೂ ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿದ್ದರು ಹಾಗೂ ಪ್ರೀಯದರ್ಶನಿ ಹೋಟೆಲ್ ನ ಲೆಕ್ಕಪತ್ರ ವ್ಯವಹಾರದಲ್ಲಿ ವ್ಯತ್ಯಾಯ ಇರೋ ಕಾರಣದಿಂದಾಗಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳಗ್ಗೆಯೇ ಬಂದು ದಾಳಿ ಮಾಡಿರೋ ED ಅಧಿಕಾರಿಗಳು, ಹೊಸಪೇಟೆಯ ರೈಲ್ವೇ ನಿಲ್ದಾಣ ರಸ್ತೆಯಲ್ಲಿರೋ ಪ್ರಿಯದರ್ಶಿನಿ ಹೊಟೇಲ್ ನಲ್ಲಿ ಲೆಕ್ಕಪತ್ರ ಪರಿಶೀಲನೆ ನಡೆಸುತ್ತಿದ್ದಾರೆ. ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ ಅಜಯ್ 8123302594, ದಯಾನಂದ್ ಸಜ್ಜನ್ 9886972975

Read More