Author: Team Sanchalana

ಕೂಡ್ಲಿಗಿ ತಾಲೂಕಿನ ಕಾನಹೊಸಹಳ್ಳಿ ಸಮೀಪದ ಆಲೂರು ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಹಲವರಿಗೆ ಗಾಯಗಳಾಗಿರುವ ಘಟನೆ ಬುಧವಾರ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಬೊಗಳರಹಟ್ಟಿಯಿಂದ ಕಾನಹೊಸಹಳ್ಳಿ ಬಳಿಯ ಗ್ರಾಮವೊಂದಕ್ಕೆ ನಾಮಕರಣ‍ ಸಮಾರಂಭಕ್ಕೆಂದು ಜನರನ್ನು ತುಂಬಿಕೊಂಡು ಬರುವಾಗ ಪಲ್ಟಿಯಾಗಿದೆ. 15ಕ್ಕೂ ಹೆಚ್ಚು ಜನರು ಟ್ರ್ಯಾಕ್ಟರ್ ನಲ್ಲಿದ್ದು, ಅದೃಷ್ಟವಾಷತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ, ಕಾನಹೊಸಹಳ್ಳಿ ಪಿಎಸ್ಐ ಸಿದ್ದರಾಮಪ್ಪ ಬಿದರಾಣಿ, ಸಿಸಿಟಿವಿ ಸೇರಿದಂತೆ ಇತರೆ ಮಾಹಿತಿಯನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರಿಗೆ ಹೆದ್ದಾರಿ ಸಹಾಯಕರ ತಂಡ, ಹೆದ್ದಾರಿ ಸಿಬ್ಬಂದಿ, ಪೊಲೀಸರು, ಸ್ಥಳೀಯರು ನೆರವಿಗೆ ಧಾವಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಿಲಾಗಿದೆ ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ ಅಜಯ್ 8123302594, ದಯಾನಂದ್ ಸಜ್ಜನ್ 9886972975

Read More

ಕೂಡ್ಲಿಗಿ: ಸಾರ್ವಜನಿಕರ ಸಮಸ್ಯೆಗಳಿಗೆ ಬೆನ್ನು ತೋರಿಸದೇ, ಊರುಗೋಲಾಗಿ ಇರುವುದು ನನ್ನ ಧ್ಯೇಯವಾಗಿದೆ. ಸಮಸ್ಯೆಯನ್ನು ಕೇಳುವುದಕ್ಕೇ ಮೀಸಲಾಗದೇ, ಅವರ ಸಮಸ್ಯೆಗಳಿಗೆ ಪರಿಹಾರ ನೀಡುವ ಉದ್ದೇಶವೇ ಪ್ರತಿ ಗ್ರಾಪಂ ವಾರು ನಡೆಯುವ ಈ ಕಾರ್ಯಕ್ರಮವಾಗಿದೆ ಎಂದು ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ತಿಳಿಸಿದರು. ಕೂಡ್ಲಿಗಿ ತಾಲೂಕಿನ ಚಿರತಗುಂಡು ಗ್ರಾಮದಲ್ಲಿ ಬುಧವಾರ ನಡೆದ ಮನೆ ಮನೆಗೆ ಶಾಸಕರು, ಮನೆ ಬಾಗಿಲಿಗೆ ಸರಕಾರ ಎನ್ನುವಂಥ ಕನಸಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕ್ಷೇತ್ರದಲ್ಲಿ 216 ಹಳ್ಳಿಗಳಿದ್ದು, ಎಲ್ಲಾ ಹಳ್ಳಿಗಳಿಗೆ ಒಂದೇ ಸಲಕ್ಕೆ ಅಭಿವೃದ್ಧಿ ಆಗಲ್ಲ. ಹೀಗಾಗಿ, ಕ್ಷೇತ್ರ ವ್ಯಾಪ್ತಿಯ ಎಲ್ಲ ಗ್ರಾಪಂ ಕೇಂದ್ರದಲ್ಲಿ ಪ್ರತಿ ವಾರವು ಕಾರ್ಯಕ್ರಮ ಆಯೋಜನೆ ಮಾಡಿ ಹಳ್ಳಿಗಳ ಸಮಸ್ಯೆ ಸ್ಪಂದಿಸಿ ಅವುಗಳ ಪರಿಹಾರಕ್ಕೆ ಯತ್ನಿಸಲಾಗುವುದು. ಚಿರತಗುಂಡು ಗ್ರಾಪಂ ವ್ಯಾಪ್ತಿಯ ಮೂರು ಹಳ್ಳಗಳ ಅಭಿವೃದ್ದಿಗೆ 3.66 ಕೋಟಿ ರೂ ಅನುದಾನದ ನೀಡಲಾಗಿದೆ. ತಾಲೂಕಿನ 136 ಹಳ್ಳಿಗಳಿಗೆ ಅನುದಾನ ಒದಗಿಸಿದ್ದು, ಟೆಂಡರ್ ಹಂತದಲ್ಲಿದೆ ಶೀಘ್ರವೇ ಕಾಮಗಾರಿಗೆ ಚಾಲನೆ ನೀಡಲಾಗುವುದು. ಹಳ್ಳಿಗಳಲ್ಲಿ ಸಹೋದರರ ನಡುವೆ ಭೂಮಿ ವ್ಯಾಜ್ಯಗಳಿದ್ದು, ತಹಸೀಲ್ದಾರ್‌ರು ಪೋತಿ, ಪೋಡಿ…

Read More

ಕೂಡ್ಲಿಗಿ; ತಾಲೂಕಿನ ಹಿರಿಯ ಪತ್ರಕರ್ತ ಹಾಗೂ ಸಾಹಿತಿ ಭೀಮಣ್ಣ ಗಜಾಪುರ ರಚನೆಯ “24*7 ಅರಣ್ಯ ರಕ್ಷಕ ಭಟ್ರಹಳ್ಳಿ ಗೂಳೆಪ್ಪರ” ಜೀವನ ಚರಿತ್ರೆಯ ಪುಸ್ತಕವನ್ನು ಕೂಡ್ಲಿಗಿಯಲ್ಲಿ ನಾಳೆ ಲೋಕಾರ್ಪಣೆಗೊಳ್ಳಲಿದೆ ಎಂದು ಪುಸ್ತಕ ಲೇಖಕ ಭೀಮಣ್ಣ ಗಜಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಎರಡು ದಶಕದಿಂದ ಸುಮಾರು 150 ಹೆಕ್ಟ್ ರ್ ಅರಣ್ಯ ಪ್ರದೇಶವನ್ನು ಯಾವುದೇ ಫಾಲಾಪೇಕ್ಷೆ ಇಲ್ಲದೆ ಅನಕ್ಷರಸ್ಥ ಭಟ್ರಹಳ್ಳಿ ಗೂಳೆಪ್ಪ ಅವರ ಜೀವನ ಚರಿತ್ರೆ ಕುರಿತಾದ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ ವನ್ನು ನಾಳೆ ಬೆಳಿಗ್ಗೆ 10-30 ಗಂಟೆಗೆ ಪಟ್ಟಣದ ಸಂಡೂರು ರಸ್ತೆಯ ಜ್ಞಾನ ಭಾರತಿ ಬಿಇಡಿ ಕಾಲೇಜ್ ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕೂಡ್ಲಿಗಿ ಹಿರೇಮಠದ ಪ್ರಶಾಂತಸಾಗರ ಶಿವಾಚಾರ್ಯರು ಹಾಗೂ ಕಾನಾಮಡುಗು ದಾಸೋಹ ಮಠದ ಐಮಡಿ ಶರಣಾರ್ಯರು ಸಾನಿಧ್ಯ ವಹಿಸಲಿದ್ದಾರೆ. ಕೂಡ್ಲಿಗಿ ಶಾಸಕ ಡಾ.ಶ್ರೀನಿವಾಸ್ ಎನ್ ಟಿ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಎಡೆಯೂರು ಸಿದ್ದಲಿಂಗೇಶ್ವರ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಕೆ.ಎಂ.ರವಿಕುಮಾ‌ರ ವಹಿಸಲಿದ್ದಾರೆ. ಮಾಜಿ ಸಚಿವ ಹಾಗೂ ಮಾಜಿ ಸಂಸದರಾದ ಶ್ರೀ ರಾಮುಲು…

Read More

ಹೊಸಪೇಟೆಯ ಎಲ್ಎಫ್ಎಸ್ ಶಾಲೆಯ ಹಾಸ್ಟೆಲ್ ನಲ್ಲಿ ಗ್ಯಾಸ್ ಲೀಕ್ ಆಗಿದ್ದು, ಸಮಯ ಪ್ರಜ್ಞೆಯಿಂದ ಭಾರಿ ದುರಂತ ತಪ್ಪಿದೆ. ಗ್ಯಾಸ್ ಲೀಕ್ ಆಗುತ್ತಿದ್ದಂತೆಯೇ ಶಾಲಾ ಮಕ್ಕಳನ್ನು ಪೊಷಕರು, ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಹೊರ ಹಾಕಿದ್ದಾರೆ. 50- 60 ಶಾಲಾ ಮಕ್ಕಳಿರೋ ಹಾಸ್ಟೆಲ್ ನಲ್ಲಿ ಗ್ಯಾಸ್ ಲೀಕ್ ಆಗಿದೆ. ಹೊಸಪೇಟೆ ಪಟ್ಟಣ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಷಕರಾದ ಡ್ಯಾನಿಯಲ್ ಮತ್ತು ಗೃಹ ರಕ್ಷಕ ದಳದ ಸಿಬ್ಬಂದಿ ನಥಾಲಿಯನ್ ಐ ಸಾಂಗ್ಲಿ ಎಂಬುವರು ಲೀಕೇಜ್ ತಡೆದಿದ್ದಾರೆ. HP ಗ್ಯಾಸ್ ಕಂಪನಿಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ಮುಂದಿನ ಮೂರು ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇಂದಿನಿಂದ ದಕ್ಷಿಣ ಮತ್ತು ಉತ್ತರ ಒಳನಾಡಿನ 25ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಜಾರಿಯಲ್ಲಿದೆ. ಮಳೆರಾಯ ಅಬ್ಬರಿಸುವ ನಿರೀಕ್ಷೆ ಇದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡಾವೃತ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ ಸುಮಾರು 30°C ಮತ್ತು ಕನಿಷ್ಠ 20°C ಇರಬಹುದು. ಅಕ್ಟೋಬರ್‌ 14: ಕರಾವಳಿ ಜಿಲ್ಲೆಗಳು: ಹಗುರದಿಂದ ಸಾಧಾರಣ ಮಳೆಯ ಸಾಧ್ಯತೆ. ಉತ್ತರ ಒಳನಾಡು: ಬೀದರ್‌, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯ ಸಾಧ್ಯತೆ. ದಕ್ಷಿಣ ಒಳನಾಡು: ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರಿ ಮಳೆಯ ಸಾಧ್ಯತೆ. ಇತರ ಜಿಲ್ಲೆಗಳು: ಬಳ್ಳಾರಿ,…

Read More

ಖ್ಯಾತ ಹಿರಿಯ ರಂಗಭೂಮಿ ಕಲಾವಿದ, ಹಾಸ್ಯನಟ ಮತ್ತು ಧಾರವಾಡ ರಂಗಾಯಣದ ನಿರ್ದೇಶಕರಾಗಿದ್ದ ರಾಜು ತಾಳಿಕೋಟಿ ಅವರು ಹೃದಯಾಘಾತದಿಂದ ಸೋಮವಾರ ನಿಧನರಾದರು. ಭಾನುವಾರ ಹೃದಯಾಘಾತ ಸಂಭವಿಸಿದ ಕಾರಣ ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಶೈನ್ ಶೆಟ್ಟಿ ನಟನೆಯ ಹೊಸ ಸಿನಿಮಾದ ಶೂಟಿಂಗ್‌ಗಾಗಿ ಉಡುಪಿಗೆ ಬಂದಿದ್ದ ರಾಜು ತಾಳಿಕೋಟಿ ಅವರು, ಚಿತ್ರೀಕರಣ ಮುಗಿಸಿ ರಾತ್ರಿ ವಿಶ್ರಾಂತಿ ಪಡೆಯುವಾಗ ಭಾನುವಾರ ರಾತ್ರಿ ಅವರಿಗೆ ಹೃದಯಾಘಾತವಾಗಿದೆ. ಈ ಮೊದಲು ಕೂಡ ಅವರಿಗೆ ಹೃದಯಾಘಾತವಾಗಿ ಸ್ಟಂಟ್ ಅಳವಡಿಸಲಾಗಿತ್ತು. ಒತ್ತಡದಿಂದಾಗಿ ಮತ್ತೆ ಹಾರ್ಟ್ ಅಟ್ಯಾಕ್ ಆಗಿರಬಹುದು ಎಂದು ಕುಟುಂಬದವರು ಶಂಕೆ ವ್ಯಕ್ತಪಡಿಸಿದ್ದಾರೆ. ಅವರ ಅಂತ್ಯಸಂಸ್ಕಾರವನ್ನು ವಿಜಯಪುರದಲ್ಲಿ ನೆರವೇರಿಸಲಾಗುವುದು ಎಂದು ಪುತ್ರ ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಚಿಕ್ಕಸಿಂದಗಿ ಗ್ರಾಮದ ಮೂಲದವರಾಗಿದ್ದ ರಾಜು ತಾಳಿಕೋಟಿಯವರ ಮೂಲ ಹೆಸರು ರಾಜೇಸಾಬ ಮಕ್ತುಮಸಾಬ್ ತಾಳಿಕೋಟಿ. ಚಲನಚಿತ್ರದಲ್ಲಿ ಪ್ರಸಿದ್ಧರಾದ ನಂತರ ಅವರು ತಾಳಿಕೋಟಿ ನಗರದಲ್ಲಿ ವಾಸವಾಗಿದ್ದರು. ನಟನಾಗಿರುವುದರ ಜೊತೆಗೆ ಅವರು…

Read More

ಕೂಡ್ಲಿಗಿ: ತಾಲೂಕಿನ ಗುಡೇಕೋಟೆ ಸಮೀಪದ ಕಸಾಪುರ ಗ್ರಾಮದಲ್ಲಿ ನಿರ್ಮಾಣವಾಗಿರುವ ರಾಜ್ಯದಲ್ಲಿ ಮೊದಲ ಹುಣಸೆಹಣ್ಣು ಮತ್ತು ಶೇಂಗಾ ಸಂಸ್ಕರಣ ಘಟಕಕ್ಕೆ ಭಾನುವಾರ ವಿಜಯನಗರ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೆರೆ ಭೇಟಿ ನೀಡಿ ಪರಿಶೀಲಿಸಿದರು. ಕೂಡ್ಲಿಗಿ ತಾಲೂಕು ರಾಜ್ಯದಲ್ಲಿ ಅತೀ ಹೆಚ್ಚು ಹುಣಸೆಹಣ್ಣು ಉತ್ಪಾದನೆ ಮಾಡುತ್ತಿರುವ ಕಾರಣ ಸರ್ಕಾರ ಮತ್ತು ನಬಾರ್ಡ್ ಸಹಯೋಗದಲ್ಲಿ 4.5 ಕೋಟಿ ವೆಚ್ಚದಲ್ಲಿ ಈ ಘಟಕವನ್ನು ನಿರ್ಮಿಸಲಾಗಿದ್ದು, ಘಟಕದ ಕಾಮಗಾರಿ ಪೂರ್ಣಗೊಂಡಿದೆ. ಅ 17ರಂದು ಘಟಕವು ಉದ್ಘಾಟನೆಗೊಳ್ಳಲ್ಲಿದೆ. ಈ ಕಾರ್ಯಕ್ರಮಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಾಲ ಸೀತಾರಾಮನ್ ಅಗಮಿಸುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಯ ಈ ಭೇಟಿ ಮಹತ್ವ ಪಡೆದುಕೊಂಡಿದೆ. ಅಲ್ಲದೆ, ಸಂಸ್ಕರಣ ಘಟಕದ ಮುಂದಿರುವ ಖಾಲಿಜಾಗದಲ್ಲಿ ವೇದಿಕೆ ಕಾರ್ಯಕ್ರಮ ಜರುಗಲ್ಲಿದ್ದು, ಆ ಜಾಗವನ್ನು ಪರಿಶೀಲಿಸಿದರು ಮತ್ತು ಕಾರ್ಯಕ್ರಮಕ್ಕೆ ಅಗಮಿಸಿವ ಜನರ ಹಾಗೂ ಪೂರ್ವ ಸಿದ್ದತೆ ಬಗ್ಗೆ ಮಾಹಿತಿ ಪಡೆದರು. ಅಲ್ಲದೆ, ಶನಿವಾರ ಸಂಜೆ ಸಹ ವಿಜಯನಗರ ಎಸ್ಪಿ ಎಸ್.ಜಾಹ್ನವಿ ಸಹ ಭೇಟಿ ನೀಡಿ ಕಾರ್ಯಕ್ರಮದ ಸಿದ್ದತೆ ಬಗ್ಗೆ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಕೂಡ್ಲಿಗಿ…

Read More

d0824820-518c-4aec-848f-2b35d28404a1ಕಾಂಗ್ರೆಸ್ ಸರ್ಕಾರದಲ್ಲಿ ಅನುದಾನದ ಕೊರತೆ ಇಲ್ಲ ಎಂದು ಹಿರಿಯ ಶಾಸಕ ಗವಿಯಪ್ಪ ರಾಜ್ಯ ಸರ್ಕಾರದ ಪರ ಬ್ಯಾಟ್ ಬೀಸಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರದ ಪುರಸಭೆ ಹೊಸ ಕಟ್ಟಡ ಉದ್ಘಾಟನೆ ವೇಳೆ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಯಾವುದೇ ಅನುದಾನದ ಸಮಸ್ಯೆ ಇಲ್ಲ, ಸಿಎಂ ಸಿದ್ದರಾಮಯ್ಯ ಪ್ರತಿ ಕ್ಷೇತ್ರಗಳಿಗೆ 50 ರಿಂದ 80 ಕೋಟಿ ರೂ.ವರೆಗೆ ವಿಶೇಷ ಅನುದಾನ‌ ಕೊಡುತ್ತಿದ್ದಾರೆ ಎಂದರು. ಕಮಲಾಪುರ ಆಡಳಿತದಲ್ಲಿ ಜನ ಪ್ರತಿನಿಧಿಗಳು, ಅಧಿಕಾರಿಗಳಿಗೆ ಎಂದಿಗೂ ಮುಂದಾಲೋಚನೆ ಹೆಚ್ಚಿದೆ. ಈ ನೂತನ ಕಚೇರಿ ಭವ್ಯವಾದ ಕಟ್ಟಡ ಮುಂದಿನ ಪೀಳಿಗೆಗೆ ಕೊಡುಗೆಯಾಗಿದೆ. ಪಟ್ಟಣದಲ್ಲಿ ಕುಡಿವ ನೀರಿನ ವ್ಯವಸ್ಥೆ, ಒಳಚರಂಡಿ ಸೇರಿದಂತೆ ಇತರೆ ಕಾರ್ಯಗಳಲ್ಲಿ ಅಭಿವೃದ್ಧಿಯತ್ತ ಸಾಗುತ್ತಿದೆ, ಆದ್ದರಿಂದ ಕಮಲಾಪುರ ಅಭಿವೃದ್ಧಿಗಾಗಿ 15 ಕೋಟಿ ರೂ. ಬಿಡುಗಡೆ ನೀಡಿರುವೆ, ಒಂದು ತಿಂಗಳ ಒಳಗೆ ಅಭಿವೃದ್ಧಿ ಕಾರ್ಯಗಳು ಆರಂಭ ಆಗಲಿದೆ ಎಂದರು. ಪಟ್ಟಣದ ಹಳೆ ಬಸ್ ನಿಲ್ದಾಣದಲ್ಲಿ ಫುಡ್ ಕೋಟ್‌ನಿರ್ಮಾಣಕ್ಕೆ 10 ಕೋಟಿ ರೂ. ಅನುದಾನ ನೀಡಲಾಗುತ್ತದೆ, ಹಂಪಿ ಇಲ್ಲೇ…

Read More

ಬೆಂಗಳೂರಿನ ಬಾಗಲಗುಂಟೆಯ ಭುವನೇಶ್ವರಿ ನಗರದಲ್ಲಿ ತಾಯಿ ಇಬ್ಬರು ಮಕ್ಕಳನ್ನು ಕೊಂದು ತಾನು ಸಹ ಆತ್ಮಹತ್ಯೆ ಮಾಡಿಕೊಂಡಿರುವ ದುರದೃಷ್ಟಕರ ಘಟನೆ ವರದಿಯಾಗಿದೆ. ಮೃತರನ್ನು ತಾಯಿ ವಿಜಯಲಕ್ಷ್ಮಿ ಮತ್ತು ಆಕೆಯ ಮಕ್ಕಳಾದ ಒಂದು ವರ್ಷದ ಭುವನ್ ಮತ್ತು ನಾಲ್ಕು ವರ್ಷದ ಬೃಂದಾ ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿ ವಿಜಯಲಕ್ಷ್ಮಿಯ ತಂಗಿ ಮನೆಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. ಮೂವರ ಮೃತದೇಹಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ. ಮೂಲತಃ ರಾಯಚೂರಿನ ಮಸ್ಕಿ ನಿವಾಸಿಗಳಾದ ರಮೇಶ್ ಮತ್ತು ವಿಜಯಲಕ್ಷ್ಮಿ ಅವರಿಗೆ ಮದುವೆಯಾಗಿ ಐದು ವರ್ಷಗಳಾಗಿತ್ತು. ರಮೇಶ್ ಮಾಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಕೌಟುಂಬಿಕ ಕಲಹದಿಂದಾಗಿ ಈ ಆತ್ಮಹತ್ಯೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ವಿಜಯಲಕ್ಷ್ಮಿಯ ಸಂಬಂಧಿಕರು ಆಕೆಯ ಆತ್ಮಹತ್ಯೆಗೆ ಪತಿ ರಮೇಶ್ ಅವರೇ ಕಾರಣ ಎಂದು ಆರೋಪಿಸಿದ್ದಾರೆ. ರಮೇಶ್ ಮತ್ತೊಂದು ಮದುವೆಯಾಗಿದ್ದು, ವಿಜಯಲಕ್ಷ್ಮಿಗೆ ವಿಚ್ಛೇದನ ನೀಡುವಂತೆ ಒತ್ತಡ ಹೇರುತ್ತಿದ್ದರು, ಇದರಿಂದಾಗಿ ಕುಟುಂಬದಲ್ಲಿ ಪದೇ ಪದೇ ಜಗಳಗಳು ನಡೆಯುತ್ತಿದ್ದವು. ಪತಿಯ ಹಿಂಸೆಯಿಂದ ಬೇಸತ್ತು ವಿಜಯಲಕ್ಷ್ಮಿ ತನ್ನ ಮಕ್ಕಳನ್ನು ಕೊಂದು…

Read More

ಮೈಸೂರು-ಕೊಡಗು ಹೆದ್ದಾರಿಯ ಹುಣಸೂರು ತಾಲೂಕಿನ ಬನ್ನಿಕುಪ್ಪೆ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸಿಮೆಂಟ್ ಲಾರಿ ಮತ್ತು ಬಸ್‌ ನಡುವಿನ ಈ ಡಿಕ್ಕಿಯಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮೃತಪಟ್ಟವರನ್ನು ಬಸ್‌ನ ಚಾಲಕ ಮತ್ತು ಕ್ಲೀನರ್ ಎಂದು ಗುರುತಿಸಲಾಗಿದೆ. ಅಪಘಾತದ ತೀವ್ರತೆಗೆ ಬಸ್‌ನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಸಿಮೆಂಟ್ ಲಾರಿ ರಸ್ತೆಯಲ್ಲೇ ಪಲ್ಟಿಯಾಗಿದೆ. ಕೇರಳದಿಂದ ಮೈಸೂರಿನ ಕಡೆಗೆ ಬರುತ್ತಿದ್ದ ಬಸ್‌ಗೆ, ಮೈಸೂರಿನಿಂದ ಕೇರಳ ಕಡೆಗೆ ಹೊರಟಿದ್ದ ಸಿಮೆಂಟ್ ಲಾರಿ ಡಿಕ್ಕಿ ಹೊಡೆದಿದೆ, ಅಪಘಾತಕ್ಕೀಡಾದ ಎರಡೂ ವಾಹನಗಳು ಕೇರಳ ಮೂಲದವು. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಮೃತದೇಹಗಳನ್ನು ಹುಣಸೂರು ಸರ್ಕಾರಿ ಆಸ್ಪತ್ರೆಗೆರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಬಿಳಿಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More